ಕಂದಾಯ ವಸೂಲಾತಿಗೆ ವಿಶೇಷ ಆಂದೋಲನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 101 ಗ್ರಾಮ ಪಂಚಾಯಿತಿಗಳಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993 ಕಲಂ 199ರಡಿ ವೈಜ್ಞಾನಿಕ ಮತ್ತು ಏಕರೂಪ ಆಸ್ತಿ ತೆರಿಗೆ ಸಂಗ್ರಹಕ್ಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ. ಎಲ್ಲಾ ಗ್ರಾಮ ಪಂಚಾಯಿತಿಗಳು ಗ್ರಾಮ ಪಂಚಾಯತಿ ತೆರಿಗೆ ವ್ಯಾಪ್ತಿಗೆ ಒಳಪಡುವ ಆಸ್ತಿಗಳಿಗೆ ಆಸ್ತಿ ತೆರಿಗೆಯನ್ನು ವಿಧಿಸುತ್ತವೆ ಗ್ರಾಮ ಪಂಚಾಯಿತಿಗಳಲ್ಲಿ ವೈಜ್ಞಾನಿಕವಾಗಿ ಆಸ್ತಿ ತೆರಿಗೆ ಸಂಗ್ರಹ ಮಾಡಲು ಬಾಫೂಜಿ ಸೇವಾ ಕೇಂದ್ರ ಮತ್ತು ಪಂಚತಂತ್ರ 2.0 ತಂತ್ರಾಂಶದ ಮೂಲಕ ಸೇವೆಯನ್ನು ನೀಡಲಾಗುತ್ತಿದೆ ಎಂದು ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.

ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಆಸ್ತಿಗಳ ವಿವರವನ್ನು ತಂತ್ರಾಂಶದಲ್ಲಿ ಅಳವಡಿಸಿಕೊಂಡು ಸರ್ಕಾರದ ಸುತ್ತೋಲೆಯಂತೆ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿರುವ ಆಸ್ತಿಗಳನ್ನು ಕೂಡ ನಿಯಾಮಾನುಸಾರ ತಂತ್ರಾಂಶದಲ್ಲಿ ಇಂಧೀಕರಿಸುತ್ತ ಕಂದಾಯ ವಸೂಲಾತಿ ಅಂದೋಲನಗಳನ್ನು ಆಯೋಜಿಸಿಕೊಂಡು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಳೆದ ಆರ್ಥಿಕ ವರ್ಷ 2023-24 ನೇ ಸಾಲಿನಲ್ಲಿ ಶೇ 75% ರಷ್ಟು ಕಂದಾಯ ವಸೂಲಾತಿಯಾಗಿದ್ದು, 2024-25ನೇ ಸಾಲಿನಲ್ಲಿ ಶೇ 88% ರಷ್ಟು ಕಂದಾಯ ವಸೂಲಾತಿಯಾಗಿದ್ದು ಮುಂದುವರೆದು ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ PoS ಮಷೀನ್‌ ಬಳಸಿಕೊಂಡು ಪ್ರಸ್ತುತ 2025-26ನೇ ಸಾಲಿನಲ್ಲಿ 100% ಕಂದಾಯ ವಸೂಲಾತಿಯನ್ನು ಕೈಗೊಳ್ಳಲು ಕ್ರಮ ವಹಿಸಲಾಗುತ್ತಿದೆ.

*ಡಿಜಿಟಲ್‌ ಸೇವೆ*

ಗ್ರಾಮ ಪಂಚಾಯಿತಿಯು ಆಧುನಿಕತೆ ಬೆಳೆದಂತೆಲ್ಲ ಆಸ್ತಿ ತೆರಿಗೆಯನ್ನು ಆನ್‌ ಲೈನ್ ಮೂಲಕ ಪಾವತಿಸುವ ಸೌಲಭ್ಯಗಳನ್ನು ಸಹನೀಡಲಾಗುತ್ತಿದ್ದು ಸಾರ್ವಜನಿಕರು ಕಂದಾಯವನ್ನು ತಾವು ಇರುವಲ್ಲಿಯೇ ತೆರಿಗೆಯನ್ನು ಪಾವತಿಸಬಹುದು ಇದರಿಂದ ಸಮಯ ಮತ್ತು ಪಾರದರ್ಶಕತೆ ಹಾಗೂ ತಮ್ಮ ಬಾಕಿ ಎಷ್ಟು ಇದೆ ಎಂದು ಆನ್‌ ಲೈನ್‌ ನಲ್ಲಿಯೇ ಪರಿಶೀಲನೆ ಮಾಡಿಕೊಂಡು ತೆರಿಗೆಯನ್ನು ಪಾವತಿಸಬಹುದು.
ಅಧಿಕೃತ ವೆಬ್ ಸೈಟ್ ಗೆ https://bsk.karnataka.gov.in ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ, ಪೋನ್‌ ಪೇ, ಗೂಗಲ್‌ ಪೇ ಮೂಲಕ ಅಥವಾ ಗ್ರಾಮ ಪಂಚಾಯಿತಿಯಲ್ಲಿ ಕಂದಾಯ ಪಾವತಿ ಮಾಡಬಹುದಾಗಿದೆ.

ಕಂದಾಯ ವಸೂಲಾತಿಗೆ ವಿಶೇಷ ಅಭಿಯಾನವು ಏಪ್ರಿಲ್‌ 01 ರಿಂದ ಜೂನ್‌ 30, 2025 ರವರಗೆ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ನಡೆಯುತ್ತಿದ್ದು ಇದರ ಸದುಪಯೋಗವನ್ನು ಗ್ರಾಮೀಣ ಭಾಗದ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಮತ್ತು ತೆರಿಗೆಯನ್ನು ಪಾವತಿಸಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಸಿಇಒ ತಿಳಿಸಿದ್ದಾರೆ.

Ramesh Babu

Journalist

Recent Posts

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

1 hour ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

16 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

20 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

21 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

23 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

23 hours ago