Categories: ಕೋಲಾರ

ಕಂಪನಿಗಳು ಸ್ಥಳೀಯರಿಗೆ ಒಳ್ಳೆಯದು ಮಾಡಲಿ: ಇಲ್ಲ ತೊಂದರೆ ಅನುಭವಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಕಂಪನಿಗಳಿಂದ ವಸೂಲಿ ಮಾಡುವ ಜಾಯಮಾನ ನಮ್ಮದಲ್ಲ ನಿಮಗೆ ಬೇಕಾದರೆ ಹಣ ನಾವೇ ಕೊಡತ್ತೇವೆ ಸ್ಥಳೀಯರಿಗೆ ಒಳ್ಳೆಯದು ಮಾಡಲಿ ಇಲ್ಲದೇ ಹೋದರೆ ಕಂಪನಿಗಳಿಗೆ ತೊಂದರೆ ಕೊಡುವುದು ಗ್ಯಾರಂಟಿ ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು.

ತಾಲೂಕಿನ ವಕ್ಕಲೇರಿ ಗ್ರಾಮದ ಪ್ರೌಢಶಾಲಾ ಆವರಣದಲ್ಲಿ ಭಾನುವಾರ ಹೊಂಡಾ ಕಂಪನಿಯ ವತಿಯಿಂದ ನಡೆದ ಉಚಿತ ಆರೋಗ್ಯ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೆಲವು ಕಂಪನಿಗಳು ನಿರಂತರವಾಗಿ ಇಂತಹ ಸಾಮಾಜಿಕ ಚಟುವಟಿಕೆಗಳನ್ನು ಮಾಡಿಕೊಂಡು ಬಂದಿದ್ದಾರೆ ಇನ್ನೂ ಕೆಲವು ಕಂಪನಿಗಳಿಗೂ ನಮಗೂ ಸಂಬಂಧವೂ ಇಲ್ಲದಂತೆ ಇದ್ದಾರೆ ಅವರು ಸ್ಥಳೀಯರಿಗೆ ಒಳ್ಳೆಯದು ಮಾಡಿದರೆ ನಾವುಗಳು ಸಹ ಅವರ ಪರವಾಗಿ ಸಹಾಯಕ್ಕೆ ಸಿದ್ದ ಇಲ್ಲದೇ ಹೋದರೆ ತೊಂದರೆ ಕೊಡುವುದು ನಮಗೆ ಗೊತ್ತಿದೆ ಅವರು ಅನುಭವಿಸಬೇಕಾಗುತ್ತದೆ ಎಂದರು.

ಕೈಗಾರಿಕೆಗಳ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ( ಸಿಎಸ್ಆರ್) ಅನುದಾನವನ್ನು ಶಿಕ್ಷಣ ಹಾಗೂ ಆರೋಗ್ಯಕ್ಕೆ ಮೊದಲ ಅಧ್ಯತೆ ನೀಡಬೇಕು ನಂತರದಲ್ಲಿ ಪರಿಸರ ಸ್ನೇಹಿ ಚಟುವಟಿಕೆಗಳಿಗೆ ಬಳಕೆಯಾಗಬೇಕು
ಬಡವರು ಮತ್ತು ವೃದ್ಧರು ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡಬೇಕು ಗ್ರಾಮೀಣ ಪ್ರದೇಶದ ಜನರಿಗಾಗಿ ಇಂತಹ ದೊಡ್ಡ ಮಟ್ಟದಲ್ಲಿ ಆರೋಗ್ಯ ಮೇಳವನ್ನು ಆಯೋಜಿಸಿರುವುದು ನಿಜಕ್ಕೂ ಸಂತೋಷ ತಂದಿದೆ. ತಜ್ಞ ವೈದ್ಯರು ಬಂದಿದ್ದು, ಪ್ರತಿಯೊಬ್ಬರೂ ಈ ಆರೋಗ್ಯ ಮೇಳವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ 2013 ರಲ್ಲಿ ನರಸಾಪುರ ಕೈಗಾರಿಕಾ ಪ್ರದೇಶವು ಪ್ರಾರಂಭಕ್ಕೂ ಮುಂಚೆ ಸ್ಥಳೀಯವಾಗಿ ಶುದ್ದವಾದ ಕುಡಿಯುವ ನೀರಿಗೆ ಹಾಗೂ ಉದ್ಯೋಗಕ್ಕೆ ಸಮಸ್ಯೆಯಾಗಿತ್ತು ಇವತ್ತು ಸಾಕಷ್ಟು ಉದ್ಯೋಗ ನೀಡಿದೆ ಜೊತೆಗೆ ಕೈಗಾರಿಕೆಗಳ ಸಿಎಸ್ಆರ್ ಅನುದಾನದಿಂದ ಶುದ್ದನೀರಿನ ಘಟಕಗಳು ಸರ್ಕಾರಿ ಶಾಲೆಗಳ ದುರಸ್ತಿ, ಹೈ ಮಾಸ್ಕ್ ದೀಪಸ್ತಂಭಗಳು ಸೇರಿದಂತೆ ಸಾಮಾಜಿಕ ಚಟುವಟಿಕೆಗಳಿಗೆ ಅಧ್ಯತೆ ನೀಡಿದ್ದಾರೆ ಎಂದರು.

ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಿಕೊಳ್ಳುವುದು ಅತೀ ಅಗತ್ಯವಿದೆ ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಕೈಗಾರಿಕಗಳು ಇಂತಹ ಆರೋಗ್ಯ ಮೇಳಗಳನ್ನು ನಡೆಸಿವೆ ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಇಂತಹ ಶಿಬಿರಗಳನ್ನು ಮುಂದಿನ ದಿನಗಳಲ್ಲಿ ಪ್ರತಿ ಹೋಬಳಿ ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿ ನಡೆಸಿದರೆ ಇನ್ನಷ್ಟು ಅನುಕೂಲವನ್ನು ಪಡೆಯಬಹುದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಹೋಂಡಾ ಕಂಪನಿಯ ವಿಭಾಗೀಯ ಮುಖ್ಯಸ್ಥ ಸುನಿಲ್ ಕುಮಾರ್ ವಿಠ್ಠಲ್, ಆಡ್ಮೀನ್ ಜಯಂತ್, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ಲೋಕೇಶ್, ರಾಜಣ್ಣ, ಸದಸ್ಯರಾದ ಚಿನ್ನಮ್ಮ, ಬೊಟ್ಟುರಾಜಪ್ಪ, ಮಂಜುನಾಥ್, ಜ್ಯೋತಿ ಮುನಿಯಪ್ಪ, ಮುಖಂಡರಾದ ಹಿನಾಯತ್, ರಘು, ಹನುಮಂತಣ್ಣ, ರಾಮಯ್ಯ, ಪಿಡಿಒ ಭಾರತಿ ಮುಂತಾದವರು ಇದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

10 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

14 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

14 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

19 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago