Categories: ಕೋಲಾರ

ಕಂಪನಿಗಳು ಸ್ಥಳೀಯರಿಗೆ ಒಳ್ಳೆಯದು ಮಾಡಲಿ: ಇಲ್ಲ ತೊಂದರೆ ಅನುಭವಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಕಂಪನಿಗಳಿಂದ ವಸೂಲಿ ಮಾಡುವ ಜಾಯಮಾನ ನಮ್ಮದಲ್ಲ ನಿಮಗೆ ಬೇಕಾದರೆ ಹಣ ನಾವೇ ಕೊಡತ್ತೇವೆ ಸ್ಥಳೀಯರಿಗೆ ಒಳ್ಳೆಯದು ಮಾಡಲಿ ಇಲ್ಲದೇ ಹೋದರೆ ಕಂಪನಿಗಳಿಗೆ ತೊಂದರೆ ಕೊಡುವುದು ಗ್ಯಾರಂಟಿ ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು.

ತಾಲೂಕಿನ ವಕ್ಕಲೇರಿ ಗ್ರಾಮದ ಪ್ರೌಢಶಾಲಾ ಆವರಣದಲ್ಲಿ ಭಾನುವಾರ ಹೊಂಡಾ ಕಂಪನಿಯ ವತಿಯಿಂದ ನಡೆದ ಉಚಿತ ಆರೋಗ್ಯ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೆಲವು ಕಂಪನಿಗಳು ನಿರಂತರವಾಗಿ ಇಂತಹ ಸಾಮಾಜಿಕ ಚಟುವಟಿಕೆಗಳನ್ನು ಮಾಡಿಕೊಂಡು ಬಂದಿದ್ದಾರೆ ಇನ್ನೂ ಕೆಲವು ಕಂಪನಿಗಳಿಗೂ ನಮಗೂ ಸಂಬಂಧವೂ ಇಲ್ಲದಂತೆ ಇದ್ದಾರೆ ಅವರು ಸ್ಥಳೀಯರಿಗೆ ಒಳ್ಳೆಯದು ಮಾಡಿದರೆ ನಾವುಗಳು ಸಹ ಅವರ ಪರವಾಗಿ ಸಹಾಯಕ್ಕೆ ಸಿದ್ದ ಇಲ್ಲದೇ ಹೋದರೆ ತೊಂದರೆ ಕೊಡುವುದು ನಮಗೆ ಗೊತ್ತಿದೆ ಅವರು ಅನುಭವಿಸಬೇಕಾಗುತ್ತದೆ ಎಂದರು.

ಕೈಗಾರಿಕೆಗಳ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ( ಸಿಎಸ್ಆರ್) ಅನುದಾನವನ್ನು ಶಿಕ್ಷಣ ಹಾಗೂ ಆರೋಗ್ಯಕ್ಕೆ ಮೊದಲ ಅಧ್ಯತೆ ನೀಡಬೇಕು ನಂತರದಲ್ಲಿ ಪರಿಸರ ಸ್ನೇಹಿ ಚಟುವಟಿಕೆಗಳಿಗೆ ಬಳಕೆಯಾಗಬೇಕು
ಬಡವರು ಮತ್ತು ವೃದ್ಧರು ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡಬೇಕು ಗ್ರಾಮೀಣ ಪ್ರದೇಶದ ಜನರಿಗಾಗಿ ಇಂತಹ ದೊಡ್ಡ ಮಟ್ಟದಲ್ಲಿ ಆರೋಗ್ಯ ಮೇಳವನ್ನು ಆಯೋಜಿಸಿರುವುದು ನಿಜಕ್ಕೂ ಸಂತೋಷ ತಂದಿದೆ. ತಜ್ಞ ವೈದ್ಯರು ಬಂದಿದ್ದು, ಪ್ರತಿಯೊಬ್ಬರೂ ಈ ಆರೋಗ್ಯ ಮೇಳವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ 2013 ರಲ್ಲಿ ನರಸಾಪುರ ಕೈಗಾರಿಕಾ ಪ್ರದೇಶವು ಪ್ರಾರಂಭಕ್ಕೂ ಮುಂಚೆ ಸ್ಥಳೀಯವಾಗಿ ಶುದ್ದವಾದ ಕುಡಿಯುವ ನೀರಿಗೆ ಹಾಗೂ ಉದ್ಯೋಗಕ್ಕೆ ಸಮಸ್ಯೆಯಾಗಿತ್ತು ಇವತ್ತು ಸಾಕಷ್ಟು ಉದ್ಯೋಗ ನೀಡಿದೆ ಜೊತೆಗೆ ಕೈಗಾರಿಕೆಗಳ ಸಿಎಸ್ಆರ್ ಅನುದಾನದಿಂದ ಶುದ್ದನೀರಿನ ಘಟಕಗಳು ಸರ್ಕಾರಿ ಶಾಲೆಗಳ ದುರಸ್ತಿ, ಹೈ ಮಾಸ್ಕ್ ದೀಪಸ್ತಂಭಗಳು ಸೇರಿದಂತೆ ಸಾಮಾಜಿಕ ಚಟುವಟಿಕೆಗಳಿಗೆ ಅಧ್ಯತೆ ನೀಡಿದ್ದಾರೆ ಎಂದರು.

ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಿಕೊಳ್ಳುವುದು ಅತೀ ಅಗತ್ಯವಿದೆ ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಕೈಗಾರಿಕಗಳು ಇಂತಹ ಆರೋಗ್ಯ ಮೇಳಗಳನ್ನು ನಡೆಸಿವೆ ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಇಂತಹ ಶಿಬಿರಗಳನ್ನು ಮುಂದಿನ ದಿನಗಳಲ್ಲಿ ಪ್ರತಿ ಹೋಬಳಿ ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿ ನಡೆಸಿದರೆ ಇನ್ನಷ್ಟು ಅನುಕೂಲವನ್ನು ಪಡೆಯಬಹುದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಹೋಂಡಾ ಕಂಪನಿಯ ವಿಭಾಗೀಯ ಮುಖ್ಯಸ್ಥ ಸುನಿಲ್ ಕುಮಾರ್ ವಿಠ್ಠಲ್, ಆಡ್ಮೀನ್ ಜಯಂತ್, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ಲೋಕೇಶ್, ರಾಜಣ್ಣ, ಸದಸ್ಯರಾದ ಚಿನ್ನಮ್ಮ, ಬೊಟ್ಟುರಾಜಪ್ಪ, ಮಂಜುನಾಥ್, ಜ್ಯೋತಿ ಮುನಿಯಪ್ಪ, ಮುಖಂಡರಾದ ಹಿನಾಯತ್, ರಘು, ಹನುಮಂತಣ್ಣ, ರಾಮಯ್ಯ, ಪಿಡಿಒ ಭಾರತಿ ಮುಂತಾದವರು ಇದ್ದರು.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

2 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

6 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

6 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

14 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago