Categories: ಕೋಲಾರ

ಕಂಪನಿಗಳು ಸ್ಥಳೀಯರಿಗೆ ಒಳ್ಳೆಯದು ಮಾಡಲಿ: ಇಲ್ಲ ತೊಂದರೆ ಅನುಭವಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಕಂಪನಿಗಳಿಂದ ವಸೂಲಿ ಮಾಡುವ ಜಾಯಮಾನ ನಮ್ಮದಲ್ಲ ನಿಮಗೆ ಬೇಕಾದರೆ ಹಣ ನಾವೇ ಕೊಡತ್ತೇವೆ ಸ್ಥಳೀಯರಿಗೆ ಒಳ್ಳೆಯದು ಮಾಡಲಿ ಇಲ್ಲದೇ ಹೋದರೆ ಕಂಪನಿಗಳಿಗೆ ತೊಂದರೆ ಕೊಡುವುದು ಗ್ಯಾರಂಟಿ ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು.

ತಾಲೂಕಿನ ವಕ್ಕಲೇರಿ ಗ್ರಾಮದ ಪ್ರೌಢಶಾಲಾ ಆವರಣದಲ್ಲಿ ಭಾನುವಾರ ಹೊಂಡಾ ಕಂಪನಿಯ ವತಿಯಿಂದ ನಡೆದ ಉಚಿತ ಆರೋಗ್ಯ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೆಲವು ಕಂಪನಿಗಳು ನಿರಂತರವಾಗಿ ಇಂತಹ ಸಾಮಾಜಿಕ ಚಟುವಟಿಕೆಗಳನ್ನು ಮಾಡಿಕೊಂಡು ಬಂದಿದ್ದಾರೆ ಇನ್ನೂ ಕೆಲವು ಕಂಪನಿಗಳಿಗೂ ನಮಗೂ ಸಂಬಂಧವೂ ಇಲ್ಲದಂತೆ ಇದ್ದಾರೆ ಅವರು ಸ್ಥಳೀಯರಿಗೆ ಒಳ್ಳೆಯದು ಮಾಡಿದರೆ ನಾವುಗಳು ಸಹ ಅವರ ಪರವಾಗಿ ಸಹಾಯಕ್ಕೆ ಸಿದ್ದ ಇಲ್ಲದೇ ಹೋದರೆ ತೊಂದರೆ ಕೊಡುವುದು ನಮಗೆ ಗೊತ್ತಿದೆ ಅವರು ಅನುಭವಿಸಬೇಕಾಗುತ್ತದೆ ಎಂದರು.

ಕೈಗಾರಿಕೆಗಳ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ( ಸಿಎಸ್ಆರ್) ಅನುದಾನವನ್ನು ಶಿಕ್ಷಣ ಹಾಗೂ ಆರೋಗ್ಯಕ್ಕೆ ಮೊದಲ ಅಧ್ಯತೆ ನೀಡಬೇಕು ನಂತರದಲ್ಲಿ ಪರಿಸರ ಸ್ನೇಹಿ ಚಟುವಟಿಕೆಗಳಿಗೆ ಬಳಕೆಯಾಗಬೇಕು
ಬಡವರು ಮತ್ತು ವೃದ್ಧರು ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡಬೇಕು ಗ್ರಾಮೀಣ ಪ್ರದೇಶದ ಜನರಿಗಾಗಿ ಇಂತಹ ದೊಡ್ಡ ಮಟ್ಟದಲ್ಲಿ ಆರೋಗ್ಯ ಮೇಳವನ್ನು ಆಯೋಜಿಸಿರುವುದು ನಿಜಕ್ಕೂ ಸಂತೋಷ ತಂದಿದೆ. ತಜ್ಞ ವೈದ್ಯರು ಬಂದಿದ್ದು, ಪ್ರತಿಯೊಬ್ಬರೂ ಈ ಆರೋಗ್ಯ ಮೇಳವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ 2013 ರಲ್ಲಿ ನರಸಾಪುರ ಕೈಗಾರಿಕಾ ಪ್ರದೇಶವು ಪ್ರಾರಂಭಕ್ಕೂ ಮುಂಚೆ ಸ್ಥಳೀಯವಾಗಿ ಶುದ್ದವಾದ ಕುಡಿಯುವ ನೀರಿಗೆ ಹಾಗೂ ಉದ್ಯೋಗಕ್ಕೆ ಸಮಸ್ಯೆಯಾಗಿತ್ತು ಇವತ್ತು ಸಾಕಷ್ಟು ಉದ್ಯೋಗ ನೀಡಿದೆ ಜೊತೆಗೆ ಕೈಗಾರಿಕೆಗಳ ಸಿಎಸ್ಆರ್ ಅನುದಾನದಿಂದ ಶುದ್ದನೀರಿನ ಘಟಕಗಳು ಸರ್ಕಾರಿ ಶಾಲೆಗಳ ದುರಸ್ತಿ, ಹೈ ಮಾಸ್ಕ್ ದೀಪಸ್ತಂಭಗಳು ಸೇರಿದಂತೆ ಸಾಮಾಜಿಕ ಚಟುವಟಿಕೆಗಳಿಗೆ ಅಧ್ಯತೆ ನೀಡಿದ್ದಾರೆ ಎಂದರು.

ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಿಕೊಳ್ಳುವುದು ಅತೀ ಅಗತ್ಯವಿದೆ ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಕೈಗಾರಿಕಗಳು ಇಂತಹ ಆರೋಗ್ಯ ಮೇಳಗಳನ್ನು ನಡೆಸಿವೆ ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಇಂತಹ ಶಿಬಿರಗಳನ್ನು ಮುಂದಿನ ದಿನಗಳಲ್ಲಿ ಪ್ರತಿ ಹೋಬಳಿ ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿ ನಡೆಸಿದರೆ ಇನ್ನಷ್ಟು ಅನುಕೂಲವನ್ನು ಪಡೆಯಬಹುದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಹೋಂಡಾ ಕಂಪನಿಯ ವಿಭಾಗೀಯ ಮುಖ್ಯಸ್ಥ ಸುನಿಲ್ ಕುಮಾರ್ ವಿಠ್ಠಲ್, ಆಡ್ಮೀನ್ ಜಯಂತ್, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ಲೋಕೇಶ್, ರಾಜಣ್ಣ, ಸದಸ್ಯರಾದ ಚಿನ್ನಮ್ಮ, ಬೊಟ್ಟುರಾಜಪ್ಪ, ಮಂಜುನಾಥ್, ಜ್ಯೋತಿ ಮುನಿಯಪ್ಪ, ಮುಖಂಡರಾದ ಹಿನಾಯತ್, ರಘು, ಹನುಮಂತಣ್ಣ, ರಾಮಯ್ಯ, ಪಿಡಿಒ ಭಾರತಿ ಮುಂತಾದವರು ಇದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ: ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…

5 hours ago

ಬೆಂ. ಗ್ರಾ ಜಿಲ್ಲೆಯಲ್ಲಿ ಶೇ.87.44ರಷ್ಟು ಎನ್ಯುಮರೇಷನ್ ಫಾರ್ಮ್ ವಿತರಣೆ- ಡಿಸಿ ಡಾ.ಕೆ ಎನ್ ಅನುರಾಧ

ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇಕಡ 87.44% ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ ಎಂದು…

7 hours ago

ವಸತಿ ಶಾಲೆಯಲ್ಲಿ ಅನುಮಾನಾಸ್ಪದ ವಿದ್ಯಾರ್ಥಿ ಸಾವು: ಶಿಕ್ಷಕರ ವಿರುದ್ಧ ಪೋಷಕರ ಆರೋಪ

ದೇವನಹಳ್ಳಿ: ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ…

8 hours ago

ಭ್ರಷ್ಟಾಚಾರ ಆರೋಪ: ಮೂವರು ಅಧಿಕಾರಿಗಳ 14 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…

11 hours ago

2026ರಲ್ಲಿ ‘ಸೂಪರ್ ಎಲ್ ನಿನೊ’ ಆತಂಕ: ಭಾರತಕ್ಕೆ ಕಡಿಮೆ ಮಳೆ, ಕೃಷಿ ಮತ್ತು ಜಲಮೂಲಗಳ ಮೇಲೆ ಗಂಭೀರ ಪರಿಣಾಮದ ಎಚ್ಚರಿಕೆ

ನವದೆಹಲಿ: 2026ರಲ್ಲಿ ರೂಪುಗೊಳ್ಳುತ್ತಿರುವ "ಸೂಪರ್ ಎಲ್ ನಿನೊ" ಪರಿಣಾಮ ದೇಶದ ಮಾನ್ಸೂನ್ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ…

17 hours ago

‘SIR ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮ ಆರೋಪ: ಸಾಕ್ಷ್ಯಾಧಾರಗಳೊಂದಿಗೆ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು’- ಆರ್ ಅಶೋಕ್

ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…

1 day ago