Categories: ಕೋಲಾರ

ಕಂಪನಿಗಳು ಸ್ಥಳೀಯರಿಗೆ ಒಳ್ಳೆಯದು ಮಾಡಲಿ: ಇಲ್ಲ ತೊಂದರೆ ಅನುಭವಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಕಂಪನಿಗಳಿಂದ ವಸೂಲಿ ಮಾಡುವ ಜಾಯಮಾನ ನಮ್ಮದಲ್ಲ ನಿಮಗೆ ಬೇಕಾದರೆ ಹಣ ನಾವೇ ಕೊಡತ್ತೇವೆ ಸ್ಥಳೀಯರಿಗೆ ಒಳ್ಳೆಯದು ಮಾಡಲಿ ಇಲ್ಲದೇ ಹೋದರೆ ಕಂಪನಿಗಳಿಗೆ ತೊಂದರೆ ಕೊಡುವುದು ಗ್ಯಾರಂಟಿ ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು.

ತಾಲೂಕಿನ ವಕ್ಕಲೇರಿ ಗ್ರಾಮದ ಪ್ರೌಢಶಾಲಾ ಆವರಣದಲ್ಲಿ ಭಾನುವಾರ ಹೊಂಡಾ ಕಂಪನಿಯ ವತಿಯಿಂದ ನಡೆದ ಉಚಿತ ಆರೋಗ್ಯ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೆಲವು ಕಂಪನಿಗಳು ನಿರಂತರವಾಗಿ ಇಂತಹ ಸಾಮಾಜಿಕ ಚಟುವಟಿಕೆಗಳನ್ನು ಮಾಡಿಕೊಂಡು ಬಂದಿದ್ದಾರೆ ಇನ್ನೂ ಕೆಲವು ಕಂಪನಿಗಳಿಗೂ ನಮಗೂ ಸಂಬಂಧವೂ ಇಲ್ಲದಂತೆ ಇದ್ದಾರೆ ಅವರು ಸ್ಥಳೀಯರಿಗೆ ಒಳ್ಳೆಯದು ಮಾಡಿದರೆ ನಾವುಗಳು ಸಹ ಅವರ ಪರವಾಗಿ ಸಹಾಯಕ್ಕೆ ಸಿದ್ದ ಇಲ್ಲದೇ ಹೋದರೆ ತೊಂದರೆ ಕೊಡುವುದು ನಮಗೆ ಗೊತ್ತಿದೆ ಅವರು ಅನುಭವಿಸಬೇಕಾಗುತ್ತದೆ ಎಂದರು.

ಕೈಗಾರಿಕೆಗಳ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ( ಸಿಎಸ್ಆರ್) ಅನುದಾನವನ್ನು ಶಿಕ್ಷಣ ಹಾಗೂ ಆರೋಗ್ಯಕ್ಕೆ ಮೊದಲ ಅಧ್ಯತೆ ನೀಡಬೇಕು ನಂತರದಲ್ಲಿ ಪರಿಸರ ಸ್ನೇಹಿ ಚಟುವಟಿಕೆಗಳಿಗೆ ಬಳಕೆಯಾಗಬೇಕು
ಬಡವರು ಮತ್ತು ವೃದ್ಧರು ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡಬೇಕು ಗ್ರಾಮೀಣ ಪ್ರದೇಶದ ಜನರಿಗಾಗಿ ಇಂತಹ ದೊಡ್ಡ ಮಟ್ಟದಲ್ಲಿ ಆರೋಗ್ಯ ಮೇಳವನ್ನು ಆಯೋಜಿಸಿರುವುದು ನಿಜಕ್ಕೂ ಸಂತೋಷ ತಂದಿದೆ. ತಜ್ಞ ವೈದ್ಯರು ಬಂದಿದ್ದು, ಪ್ರತಿಯೊಬ್ಬರೂ ಈ ಆರೋಗ್ಯ ಮೇಳವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ 2013 ರಲ್ಲಿ ನರಸಾಪುರ ಕೈಗಾರಿಕಾ ಪ್ರದೇಶವು ಪ್ರಾರಂಭಕ್ಕೂ ಮುಂಚೆ ಸ್ಥಳೀಯವಾಗಿ ಶುದ್ದವಾದ ಕುಡಿಯುವ ನೀರಿಗೆ ಹಾಗೂ ಉದ್ಯೋಗಕ್ಕೆ ಸಮಸ್ಯೆಯಾಗಿತ್ತು ಇವತ್ತು ಸಾಕಷ್ಟು ಉದ್ಯೋಗ ನೀಡಿದೆ ಜೊತೆಗೆ ಕೈಗಾರಿಕೆಗಳ ಸಿಎಸ್ಆರ್ ಅನುದಾನದಿಂದ ಶುದ್ದನೀರಿನ ಘಟಕಗಳು ಸರ್ಕಾರಿ ಶಾಲೆಗಳ ದುರಸ್ತಿ, ಹೈ ಮಾಸ್ಕ್ ದೀಪಸ್ತಂಭಗಳು ಸೇರಿದಂತೆ ಸಾಮಾಜಿಕ ಚಟುವಟಿಕೆಗಳಿಗೆ ಅಧ್ಯತೆ ನೀಡಿದ್ದಾರೆ ಎಂದರು.

ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಿಕೊಳ್ಳುವುದು ಅತೀ ಅಗತ್ಯವಿದೆ ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಕೈಗಾರಿಕಗಳು ಇಂತಹ ಆರೋಗ್ಯ ಮೇಳಗಳನ್ನು ನಡೆಸಿವೆ ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಇಂತಹ ಶಿಬಿರಗಳನ್ನು ಮುಂದಿನ ದಿನಗಳಲ್ಲಿ ಪ್ರತಿ ಹೋಬಳಿ ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿ ನಡೆಸಿದರೆ ಇನ್ನಷ್ಟು ಅನುಕೂಲವನ್ನು ಪಡೆಯಬಹುದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಹೋಂಡಾ ಕಂಪನಿಯ ವಿಭಾಗೀಯ ಮುಖ್ಯಸ್ಥ ಸುನಿಲ್ ಕುಮಾರ್ ವಿಠ್ಠಲ್, ಆಡ್ಮೀನ್ ಜಯಂತ್, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ಲೋಕೇಶ್, ರಾಜಣ್ಣ, ಸದಸ್ಯರಾದ ಚಿನ್ನಮ್ಮ, ಬೊಟ್ಟುರಾಜಪ್ಪ, ಮಂಜುನಾಥ್, ಜ್ಯೋತಿ ಮುನಿಯಪ್ಪ, ಮುಖಂಡರಾದ ಹಿನಾಯತ್, ರಘು, ಹನುಮಂತಣ್ಣ, ರಾಮಯ್ಯ, ಪಿಡಿಒ ಭಾರತಿ ಮುಂತಾದವರು ಇದ್ದರು.

Ramesh Babu

Journalist

Recent Posts

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

8 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

8 hours ago

ಹೊರಗುತ್ತಿಗೆ ನೇಮಕಾತಿಯಲ್ಲೂ ಎಸ್‌ಸಿ, ಎಸ್‌ಟಿಗೆ ಮೀಸಲಾತಿ ಕಡ್ಡಾಯ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP-TSP ಅನುದಾನವನ್ನು ಸಮರ್ಪಕವಾಗಿ ಬಳಸದ ಇಲಾಖೆಗಳ ಮುಂದಿನ ಹಣಕಾಸು…

8 hours ago

ಆತ್ರೇಯ ಆಯುರ್ವೇದ ಕಾಲೇಜಿಗೆ ಬೀಗ; 400 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ: ಪರ್ಯಾಯ ವ್ಯವಸ್ಥೆಗೆ ಆಗ್ರಹಿಸಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

  ದೊಡ್ಡಬಳ್ಳಾಪುರ: ತಾಲೂಕಿನ ಕೋಡಿಗೆಹಳ್ಳಿಯಲ್ಲಿರುವ ಆತ್ರೇಯ ಆಯುರ್ವೇದ ಕಾಲೇಜು ಆಡಳಿತ ಮಂಡಳಿಯು ಬ್ಯಾಂಕ್ ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಕಾಲೇಜಿಗೆ ಬೀಗ…

8 hours ago

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶ ಅಸಂಬದ್ಧ: ಸುಪ್ರೀಂಕೋರ್ಟ್‌ ಮೆಟ್ಟಿಲೇರಲು ಸರ್ಕಾರದ ಚಿಂತನೆ – ಸಚಿವ ಚಲುವರಾಯಸ್ವಾಮಿ

ತಮಿಳುನಾಡಿಗೆ ನಿತ್ಯ 6 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವಂತೆ CWRC ನೀಡಿರುವ ಆದೇಶ ಅಸಂಬದ್ಧವಾಗಿದ್ದು, ಅತ್ಯಂತ ನೋವು ಹಾಗೂ…

14 hours ago

ಮೋರಿ ಬಳಿ ತ್ಯಾಜ್ಯ ರಾಶಿ; ದುರ್ವಾಸನೆ, ಸೊಳ್ಳೆ ಕಾಟಕ್ಕೆ ವಿನಾಯಕನಗರ ನಿವಾಸಿಗಳ ಪರದಾಟ

ದೊಡ್ಡಬಳ್ಳಾಪುರ: ನಗರದ ವಿನಾಯಕನಗರದ ಸರ್ಕಾರಿ ಪ್ರಾಥಮಿಕ ಶಾಲೆ ಸಮೀಪದಲ್ಲಿರುವ ರಾಜಕಾಲುವೆಗೆ ಅಡ್ಡಲಾಗಿ ನಿರ್ಮಿಸಿರುವ ಮೋರಿ ಬಳಿ ತ್ಯಾಜ್ಯ ರಾಶಿ ಬಿದ್ದಿದ್ದು,…

16 hours ago