ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಕಂಪ್ಯೂಟರ್ ಡಿಟಿಪಿ ಕುರಿತ 45 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರಬೇಕು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಜುಲೈ 31 ಕೊನೆಯ ದಿನವಾಗಿದೆ.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಅರ್ಜಿಯನ್ನು ಗೂಗಲ್ ಫಾರ್ಮ್ ಲಿಂಕ್ https://docs.google.com/forms/d/e/1FAIpQLS_EphjQf06zNFLdaapM4JnBLenbByyWtv52n2V1rtlPLLRA/viewform?usp=sf_link ಬಳಸಿ ಸಲ್ಲಿಸಬಹುದು.
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…