ರಾಜ್ಯದಲ್ಲಿ 2023ರ ಸಾರ್ವತ್ರಿಕ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಮೂರು ರಾಜಕೀಯ ಪಕ್ಷಗಳು ಒಂದಿಲ್ಲೊಂದು ಯಾತ್ರೆ, ಸಮಾವೇಶಗಳ ಮೂಲಕ ರಾಜ್ಯ ಪರ್ಯಾಟನೆ ಮಾಡುತ್ತಿವೆ. ಜೆಡಿಎಸ್ ಪಕ್ಷ ಒಂದು ಹೆಜ್ಜೆ ಮುಂದೆ ಹೋಗಿ ವಿಧಾನಸಭಾ ಮಹಾಯುದ್ಧಕ್ಕೆ ತನ್ನ 93 ಸೇನಾನಿಗಳ ಹೆಸರನ್ನು ಪ್ರಕಟಿಸಿ ಅಖೈರುಗೊಳಿಸಿ ಯುದ್ಧಕ್ಕೆ ಸನ್ನದ್ಧು ಮಾಡಿದೆ.
ಇತ್ತ ಈ ಬಾರಿ ಶತಯಾಗತವಾಗಿ ಅಧಿಕಾರ ಚುಕ್ಕಾಣಿ ಹಿಡಿಯಲು 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ತಯಾರಿ ನಡೆಸಿರುವ ಕಾಂಗ್ರೆಸ್ ಪಕ್ಷದ ನಾಯಕರು ಕೂಡ ತನ್ನ ಅಭ್ಯರ್ಥಿಗಳನ್ನು ಶೀಘ್ರವಾಗಿ ಅಖೈರು ಮಾಡಲು ತೀರ್ಮಾನಿಸಿದೆ. ಇದರ ಭಾಗವಾಗಿ ಎಲ್ಲಾ ಜಿಲ್ಲೆಗಳಗೆ ಉಸ್ತುವಾರಿಗಳನ್ನು ನೇಮಕ ಮಾಡಿ 224 ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಪದಾಧಿಕಾರಿಗಳ ಸಭೆ ನಡೆಸುತ್ತಿದೆ.
ಈ ಹಿನ್ನೆಲೆ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳನ್ನು ಅಂತಿಮ ಮಾಡುವ ಸಲುವಾಗಿ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗ ರೆಡ್ಡಿ, ಎಂಎಲ್ಸಿ ರವಿ, ಜಿಲ್ಲಾ ವೀಕ್ಷಕಿ ಪದ್ಮಾವತಿ, ಜಿಲ್ಲಾಧ್ಯಕ್ಷರ ನೇತೃತ್ವದ ಸಮಿತಿ ಸಭೆಯಲ್ಲಿ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ, ನೆಲಮಂಗಲ ಕ್ಷೇತ್ರದ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹ ಮಾಡಲಾಯಿತು.
ಈ ವೇಳೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿ ಮಾರ್ಪಟ್ಟಿದೆ. ಕೆಲ ಪದಾಧಿಕಾರಿಗಳು ಶಾಸಕ ವೆಂಕಟರಮಣಯ್ಯ ಪರ ಬ್ಯಾಟಿಂಗ್ ಮಾಡಿದರೆ ಇನ್ನೂ ಕೆಲವು ಪದಾಧಿಕಾರಿಗಳು, ಮುಖಂಡರುಗಳು ಮತ್ತೋರ್ವ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕೆಎಂಎಫ್ ನಿರ್ದೇಶಕ ಬಿಸಿ ಆನಂದ್ ಪರ ವಕಾಲತ್ತು ವಹಿಸಿದ್ದಾರೆ.
ನೇರಾನೇರ ಅಭಿಪ್ರಾಯ ಸಂಗ್ರಹದ ವೇಳೆ ಗೊಂದಲದ ವಾತಾವರಣ ಸೃಷ್ಟಿಯಾಗಿ ಸಭೆಯನ್ನು ನಾಳೆಗೆ ಮುಂದೂಡಲಾಗಿದೆ ಎನ್ನಲಾಗಿದೆ.
ಅಂತಿಮವಾಗಿ ಯಾರ ಕೈ ಸೇರಲಿದೆ ‘ಬಿ’ಫಾರಂ?
ಕಾಂಗ್ರೆಸ್ ಟಿಕೆಟ್ ಗಾಗಿ ಶಾಸಕ ವೆಂಕಟರಮಣಯ್ಯ ಮತ್ತು ಕೆಎಂಎಫ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ಮಧ್ಯೆ ಬಿರುಸಿನ ಕಾದಾಟ ನಡೆಯುತ್ತಿದೆ. ತಾಲೂಕಿನಲ್ಲಿಯೂ ಪ್ರಮುಖ ಮುಖಂಡರುಗಳು ಕೂಡ ಶಾಸಕ ವೆಂಕಟರಮಣಯ್ಯ ವಿರುದ್ಧ ಅಸಮಾಧಾನವನ್ನು ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಮುಂದೆ ವ್ಯಕ್ತಪಡಿಸಿದ್ದರು. ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿಯೂ ಇಂತಹದೆ ಘಟನೆ ಪುನರಾವರ್ತಿತವಾಗಿದೆ ಎಂದು ಮುಖಂಡರು ತಿಳಿಸಿದ್ದಾರೆ.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…