ಕಗ್ಗಂಟಾದ ದೊಡ್ಡಬಳ್ಳಾಪುರ ಕಾಂಗ್ರೆಸ್ ಟಿಕೆಟ್!: ಹಾಲಿ ಶಾಸಕ ವೆಂಕಟರಮಣಯ್ಯ‌ ಹಾಗೂ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ನಡುವೆ ಟಿಕೆಟ್ ಫೈಟ್

ರಾಜ್ಯದಲ್ಲಿ 2023ರ ಸಾರ್ವತ್ರಿಕ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಮೂರು ರಾಜಕೀಯ ಪಕ್ಷಗಳು ಒಂದಿಲ್ಲೊಂದು ಯಾತ್ರೆ, ಸಮಾವೇಶಗಳ ಮೂಲಕ ರಾಜ್ಯ ಪರ್ಯಾಟನೆ ಮಾಡುತ್ತಿವೆ. ಜೆಡಿಎಸ್ ಪಕ್ಷ ಒಂದು ಹೆಜ್ಜೆ ಮುಂದೆ ಹೋಗಿ ವಿಧಾನಸಭಾ ಮಹಾಯುದ್ಧಕ್ಕೆ ತನ್ನ 93 ಸೇನಾನಿಗಳ ಹೆಸರನ್ನು ಪ್ರಕಟಿಸಿ ಅಖೈರುಗೊಳಿಸಿ ಯುದ್ಧಕ್ಕೆ ಸನ್ನದ್ಧು ಮಾಡಿದೆ.

ಇತ್ತ ಈ ಬಾರಿ ಶತಯಾಗತವಾಗಿ ಅಧಿಕಾರ ಚುಕ್ಕಾಣಿ ಹಿಡಿಯಲು 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ತಯಾರಿ ನಡೆಸಿರುವ ಕಾಂಗ್ರೆಸ್ ಪಕ್ಷದ ನಾಯಕರು ಕೂಡ ತನ್ನ ಅಭ್ಯರ್ಥಿಗಳನ್ನು ಶೀಘ್ರವಾಗಿ ಅಖೈರು ಮಾಡಲು ತೀರ್ಮಾನಿಸಿದೆ. ಇದರ ಭಾಗವಾಗಿ ಎಲ್ಲಾ ಜಿಲ್ಲೆಗಳಗೆ ಉಸ್ತುವಾರಿಗಳನ್ನು ನೇಮಕ ಮಾಡಿ 224 ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಪದಾಧಿಕಾರಿಗಳ ಸಭೆ ನಡೆಸುತ್ತಿದೆ.

ಈ ಹಿನ್ನೆಲೆ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳನ್ನು ಅಂತಿಮ ಮಾಡುವ ಸಲುವಾಗಿ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗ ರೆಡ್ಡಿ, ಎಂಎಲ್ಸಿ ರವಿ, ಜಿಲ್ಲಾ ವೀಕ್ಷಕಿ ಪದ್ಮಾವತಿ, ಜಿಲ್ಲಾಧ್ಯಕ್ಷರ ನೇತೃತ್ವದ ಸಮಿತಿ ಸಭೆಯಲ್ಲಿ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ, ನೆಲಮಂಗಲ ಕ್ಷೇತ್ರದ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹ ಮಾಡಲಾಯಿತು.

ಈ ವೇಳೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿ ಮಾರ್ಪಟ್ಟಿದೆ. ಕೆಲ ಪದಾಧಿಕಾರಿಗಳು ಶಾಸಕ ವೆಂಕಟರಮಣಯ್ಯ ಪರ ಬ್ಯಾಟಿಂಗ್ ಮಾಡಿದರೆ ಇನ್ನೂ ಕೆಲವು ಪದಾಧಿಕಾರಿಗಳು, ಮುಖಂಡರುಗಳು ಮತ್ತೋರ್ವ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕೆಎಂಎಫ್ ನಿರ್ದೇಶಕ ಬಿಸಿ ಆನಂದ್ ಪರ ವಕಾಲತ್ತು ವಹಿಸಿದ್ದಾರೆ.

ನೇರಾನೇರ ಅಭಿಪ್ರಾಯ ಸಂಗ್ರಹದ ವೇಳೆ ಗೊಂದಲದ ವಾತಾವರಣ ಸೃಷ್ಟಿಯಾಗಿ ಸಭೆಯನ್ನು ನಾಳೆಗೆ ಮುಂದೂಡಲಾಗಿದೆ ಎನ್ನಲಾಗಿದೆ.

ಅಂತಿಮವಾಗಿ ಯಾರ ಕೈ ಸೇರಲಿದೆ ‘ಬಿ’ಫಾರಂ?

ಕಾಂಗ್ರೆಸ್ ಟಿಕೆಟ್ ಗಾಗಿ ಶಾಸಕ ವೆಂಕಟರಮಣಯ್ಯ ಮತ್ತು ಕೆಎಂಎಫ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ಮಧ್ಯೆ ಬಿರುಸಿನ ಕಾದಾಟ ನಡೆಯುತ್ತಿದೆ. ತಾಲೂಕಿನಲ್ಲಿಯೂ ಪ್ರಮುಖ ಮುಖಂಡರುಗಳು ಕೂಡ ಶಾಸಕ ವೆಂಕಟರಮಣಯ್ಯ ವಿರುದ್ಧ ಅಸಮಾಧಾನವನ್ನು ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಮುಂದೆ ವ್ಯಕ್ತಪಡಿಸಿದ್ದರು. ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿಯೂ ಇಂತಹದೆ ಘಟನೆ ಪುನರಾವರ್ತಿತವಾಗಿದೆ ಎಂದು ಮುಖಂಡರು ತಿಳಿಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

10 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

11 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

11 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

11 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

13 hours ago

ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಆರೋಪ: ಚಾಲಕ, ಮಣ್ಣು ಸಮೇತ ಟಿಪ್ಪರ್ ಲಾರಿಗಳ ವಶ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…

17 hours ago