Categories: ಕೋಲಾರ

ಕಟ್ಟಡ ಕಾರ್ಮಿಕರಾದ ಲಕ್ಷ್ಮೀಗೆ ಹೆರಿಗೆ ಬಾಂಡ್ ವಿತರಣೆ

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕೋನೇಟಿ ತಿಮ್ಮನಹಳ್ಳಿ ಗ್ರಾಮದ ಕಟ್ಟಡ ಕಾರ್ಮಿಕರಾದ ಲಕ್ಷ್ಮೀ ಅವರಿಗೆ ಕಲ್ಯಾಣ ಮಂಡಳಿಯಿಂದ ನೀಡುವ 30 ಸಾವಿರದ ಹರಿಗೆ ಬಾಂಡ್ ಅನ್ನು ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಮಂಗಳವಾರ ಕಾರ್ಮಿಕ ಇಲಾಖೆಯ ಸಿಬ್ಬಂದಿ ಪ್ರಕಾಶ್ ಅವರು ವಿತರಿಸಿದರು.

ಈ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಹೊನ್ನೇನಹಳ್ಳಿ ಯಲ್ಲಪ್ಪ ಮಾತನಾಡಿ ಕಟ್ಟಡ ಕಾರ್ಮಿಕರು ಹಾಗೂ ಇತರೆ ವೃತ್ತಿಯನ್ನು ಮಾಡುವ ಕಾರ್ಮಿಕರಿಗೆ ಇಲಾಖೆಯಿಂದ ನೀಡುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಲು ಸಂಘದಿಂದ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ ಯಾವುದೇ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಅಥವಾ ಇತರೆ ನಿರ್ಮಾಣ ಕಾರ್ಮಿಕರಾಗಿದ್ದರೆ, ರಾಜ್ಯ ಕಾರ್ಮಿಕ ಇಲಾಖೆಯಲ್ಲಿ ಹೆಸರು ನೋಂದಣಿ ಮಾಡಿಕೊಳ್ಳುವ ಮೂಲಕ ಸರಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಎಂದರು,

ಕೋಲಾರ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘವು ಕಾರ್ಮಿಕರನ್ನು ಗುರುತಿಸಿ ನೋಂದಣಿಗೆ ಅರ್ಜಿಗಳನ್ನು ಪಡೆಯಲಾಗುತ್ತದೆ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾದರೆ ಅಂತಹ ಫಲಾನುಭವಿಗಳಿಗೆ ಮಂಡಳಿಯಿಂದ ವಿವಿಧ ರೀತಿಯ ಪಿಂಚಣಿ ಸೌಲಭ್ಯ, ವಸತಿ ಸೌಲಭ್ಯ, ಹೆರಿಗೆ ಸೌಲಭ್ಯ ನೋಂದಾಯಿತ ಫಲಾನುಭವಿಗಳ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷಾ ಸೌಲಭ್ಯ ಶೈಕ್ಷಣಿಕ ಸಹಾಯಧನ ಸೇರಿದಂತೆ 19 ರೀತಿಯ ವಿವಿಧ ಸೌಲಭ್ಯಗಳು ಸಿಗುತ್ತದೆ ಸಂಘದಿಂದಲ್ಲೂ ನೋಂದಣಿ ಮಾಡಿಸಲಾಗುವುದು ಸದುಪಯೋಗ ಪಡಿಸಿಕೊಳ್ಳಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ಸಿಬ್ಬಂದಿ ಸುರೇಶ್ ಇದ್ದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

4 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

4 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

5 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

6 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

8 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

15 hours ago