Categories: ಕೋಲಾರ

ಕಟ್ಟಡ ಕಾರ್ಮಿಕರಾದ ಲಕ್ಷ್ಮೀಗೆ ಹೆರಿಗೆ ಬಾಂಡ್ ವಿತರಣೆ

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕೋನೇಟಿ ತಿಮ್ಮನಹಳ್ಳಿ ಗ್ರಾಮದ ಕಟ್ಟಡ ಕಾರ್ಮಿಕರಾದ ಲಕ್ಷ್ಮೀ ಅವರಿಗೆ ಕಲ್ಯಾಣ ಮಂಡಳಿಯಿಂದ ನೀಡುವ 30 ಸಾವಿರದ ಹರಿಗೆ ಬಾಂಡ್ ಅನ್ನು ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಮಂಗಳವಾರ ಕಾರ್ಮಿಕ ಇಲಾಖೆಯ ಸಿಬ್ಬಂದಿ ಪ್ರಕಾಶ್ ಅವರು ವಿತರಿಸಿದರು.

ಈ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಹೊನ್ನೇನಹಳ್ಳಿ ಯಲ್ಲಪ್ಪ ಮಾತನಾಡಿ ಕಟ್ಟಡ ಕಾರ್ಮಿಕರು ಹಾಗೂ ಇತರೆ ವೃತ್ತಿಯನ್ನು ಮಾಡುವ ಕಾರ್ಮಿಕರಿಗೆ ಇಲಾಖೆಯಿಂದ ನೀಡುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಲು ಸಂಘದಿಂದ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ ಯಾವುದೇ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಅಥವಾ ಇತರೆ ನಿರ್ಮಾಣ ಕಾರ್ಮಿಕರಾಗಿದ್ದರೆ, ರಾಜ್ಯ ಕಾರ್ಮಿಕ ಇಲಾಖೆಯಲ್ಲಿ ಹೆಸರು ನೋಂದಣಿ ಮಾಡಿಕೊಳ್ಳುವ ಮೂಲಕ ಸರಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಎಂದರು,

ಕೋಲಾರ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘವು ಕಾರ್ಮಿಕರನ್ನು ಗುರುತಿಸಿ ನೋಂದಣಿಗೆ ಅರ್ಜಿಗಳನ್ನು ಪಡೆಯಲಾಗುತ್ತದೆ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾದರೆ ಅಂತಹ ಫಲಾನುಭವಿಗಳಿಗೆ ಮಂಡಳಿಯಿಂದ ವಿವಿಧ ರೀತಿಯ ಪಿಂಚಣಿ ಸೌಲಭ್ಯ, ವಸತಿ ಸೌಲಭ್ಯ, ಹೆರಿಗೆ ಸೌಲಭ್ಯ ನೋಂದಾಯಿತ ಫಲಾನುಭವಿಗಳ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷಾ ಸೌಲಭ್ಯ ಶೈಕ್ಷಣಿಕ ಸಹಾಯಧನ ಸೇರಿದಂತೆ 19 ರೀತಿಯ ವಿವಿಧ ಸೌಲಭ್ಯಗಳು ಸಿಗುತ್ತದೆ ಸಂಘದಿಂದಲ್ಲೂ ನೋಂದಣಿ ಮಾಡಿಸಲಾಗುವುದು ಸದುಪಯೋಗ ಪಡಿಸಿಕೊಳ್ಳಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ಸಿಬ್ಬಂದಿ ಸುರೇಶ್ ಇದ್ದರು.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

2 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

8 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

22 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

23 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

24 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

24 hours ago