Categories: ಕೋಲಾರ

ಕಟ್ಟಡ ಕಾರ್ಮಿಕರಾದ ಲಕ್ಷ್ಮೀಗೆ ಹೆರಿಗೆ ಬಾಂಡ್ ವಿತರಣೆ

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕೋನೇಟಿ ತಿಮ್ಮನಹಳ್ಳಿ ಗ್ರಾಮದ ಕಟ್ಟಡ ಕಾರ್ಮಿಕರಾದ ಲಕ್ಷ್ಮೀ ಅವರಿಗೆ ಕಲ್ಯಾಣ ಮಂಡಳಿಯಿಂದ ನೀಡುವ 30 ಸಾವಿರದ ಹರಿಗೆ ಬಾಂಡ್ ಅನ್ನು ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಮಂಗಳವಾರ ಕಾರ್ಮಿಕ ಇಲಾಖೆಯ ಸಿಬ್ಬಂದಿ ಪ್ರಕಾಶ್ ಅವರು ವಿತರಿಸಿದರು.

ಈ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಹೊನ್ನೇನಹಳ್ಳಿ ಯಲ್ಲಪ್ಪ ಮಾತನಾಡಿ ಕಟ್ಟಡ ಕಾರ್ಮಿಕರು ಹಾಗೂ ಇತರೆ ವೃತ್ತಿಯನ್ನು ಮಾಡುವ ಕಾರ್ಮಿಕರಿಗೆ ಇಲಾಖೆಯಿಂದ ನೀಡುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಲು ಸಂಘದಿಂದ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ ಯಾವುದೇ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಅಥವಾ ಇತರೆ ನಿರ್ಮಾಣ ಕಾರ್ಮಿಕರಾಗಿದ್ದರೆ, ರಾಜ್ಯ ಕಾರ್ಮಿಕ ಇಲಾಖೆಯಲ್ಲಿ ಹೆಸರು ನೋಂದಣಿ ಮಾಡಿಕೊಳ್ಳುವ ಮೂಲಕ ಸರಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಎಂದರು,

ಕೋಲಾರ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘವು ಕಾರ್ಮಿಕರನ್ನು ಗುರುತಿಸಿ ನೋಂದಣಿಗೆ ಅರ್ಜಿಗಳನ್ನು ಪಡೆಯಲಾಗುತ್ತದೆ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾದರೆ ಅಂತಹ ಫಲಾನುಭವಿಗಳಿಗೆ ಮಂಡಳಿಯಿಂದ ವಿವಿಧ ರೀತಿಯ ಪಿಂಚಣಿ ಸೌಲಭ್ಯ, ವಸತಿ ಸೌಲಭ್ಯ, ಹೆರಿಗೆ ಸೌಲಭ್ಯ ನೋಂದಾಯಿತ ಫಲಾನುಭವಿಗಳ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷಾ ಸೌಲಭ್ಯ ಶೈಕ್ಷಣಿಕ ಸಹಾಯಧನ ಸೇರಿದಂತೆ 19 ರೀತಿಯ ವಿವಿಧ ಸೌಲಭ್ಯಗಳು ಸಿಗುತ್ತದೆ ಸಂಘದಿಂದಲ್ಲೂ ನೋಂದಣಿ ಮಾಡಿಸಲಾಗುವುದು ಸದುಪಯೋಗ ಪಡಿಸಿಕೊಳ್ಳಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ಸಿಬ್ಬಂದಿ ಸುರೇಶ್ ಇದ್ದರು.

Ramesh Babu

Journalist

Recent Posts

KSRTC ಬಸ್-ಕಂಟೇನರ್ ಲಾರಿ ನಡುವೆ ಅಪಘಾತ; ಕೆಲವರಿಗೆ ಗಾಯ

ಹೊಸಕೋಟೆ: ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ KSRTC ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ಹೊಸಕೋಟೆ ಸಮೀಪದ…

4 hours ago

ರಾಜ್ಯಸಭೆ, ಪರಿಷತ್ ಚುನಾವಣೆ: ಬಿಜೆಪಿ ಅಚ್ಚರಿ ನಿರ್ಧಾರ, ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ನಿರಾಕರಣೆ

ಬೆಂಗಳೂರು: 2026ರ ರಾಜ್ಯಸಭೆ ಹಾಗೂ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದ್ದು, ಕರ್ನಾಟಕದಿಂದ ರಾಜ್ಯಸಭೆಗೆ…

7 hours ago

ಅಳಬೇಡಿ ಸ್ವಾಮಿ ಅಳಬೇಡಿ, ದಯವಿಟ್ಟು ಅಳಬೇಡಿ, ಸ್ವಲ್ಪ ನಕ್ಕು ಬಿಡಿ…..

ನಾನು ವಿದ್ಯಾವಂತನಾಗಿರಲಿಲ್ಲ, ಅದರಿಂದಾಗಿ ಯಶಸ್ವಿಯಾಗಲಿಲ್ಲ. ನಾನು ಬುದ್ದಿವಂತನಾಗಿರಲಿಲ್ಲ, ಅದರಿಂದಾಗಿ ಜನಪ್ರಿಯನಾಗಲಿಲ್ಲ. ನಾನು ಪ್ರತಿಭಾವಂತನಾಗಿರಲಿಲ್ಲ, ಅದರಿಂದಾಗಿ ಪ್ರಖ್ಯಾತನಾಗಲಿಲ್ಲ. ನಾನು ಶ್ರೀಮಂತನಾಗಿರಲಿಲ್ಲ, ಅದರಿಂದಾಗಿ…

10 hours ago

ದೊಡ್ಡಬಳ್ಳಾಪುರ ಯೋಗಾ ಪ್ರತಿಭೆ, ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಪುರಸ್ಕೃತೆ ಜಾಹ್ನವಿ ಎಂ.ಆರ್ ಗೆ ಸನ್ಮಾನ

ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…

22 hours ago

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

1 day ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

1 day ago