Categories: ಕೋಲಾರ

ಕಟ್ಟಡ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಕೋಲಾರ: ರಾಜ್ಯಾದ್ಯಂತವಿರುವ ಕಟ್ಟಡ ನಿರ್ಮಾಣ ಕಾರ್ಮಿಕರ ಸಮಸ್ಯೆಗಳಿಗೆ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕೋಲಾರ ಜಿಲ್ಲಾ ಕಟ್ಟಡ ಕಾರ್ಮಿಕರ ಸಮನ್ವಯ ಸಮಿತಿ ನೇತೃತ್ವದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಸಿಐಟಿಯು ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷ ಪಿ.ಶ್ರೀನಿವಾಸ್ ಮಾತನಾಡಿ,
ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಕಾನೂನುಬದ್ಧವಾಗಿ ಇದುವರೆಗೂ ಸಿಗುತ್ತಿದ್ದ ಸೌಲಭ್ಯಗಳು ಸಿಗುತ್ತಿಲ್ಲ. ಈ ಬಗ್ಗೆ ಇಲಾಖೆಯ ಅಧಿಕಾರಿಗಳ ಜೊತೆಗೂ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಜಾರಿ ಮಾಡಿಲ್ಲ.
ಶೈಕ್ಷಣಿಕ ಸಹಾಯಧನ, ಮದುವೆ ಸಹಾಯಧನ, ವೈದ್ಯಕೀಯ ಪರಿಹಾರಕ್ಕೆ ಸಲ್ಲಿಕೆಯಾದ ಸಾವಿರಾರು ಅರ್ಜಿಗಳು ಕಳೆದ ಒಂದು ವರ್ಷದಿಂದ ಕೊಳೆಯುತ್ತಿವೆ. ಪಿಂಚಣಿದಾರರ ಪಿಂಚಣಿ ನಿಂತುಹೋಗಿದೆ. ಕಾರ್ಮಿಕರ ಜೀವನ ಕಷ್ಟಕ್ಕೆ ಸಿಲುಕಿದೆ. ಶೈಕ್ಷಣಿಕ ಸಹಾಯಧನ ಬಿಡುಗಡೆಗಾಗಿ ನಾವು ಕೊನೆಗೆ ಹೈಕೋರ್ಟ್ ಮೆಟ್ಟಿಲಿಗೆ ಹೋಗಬೇಕಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯ ಸರಕಾರಕ್ಕೆ ಕಟ್ಟಡ ಕಾರ್ಮಿಕರು ಕೇಳದಿದ್ದರೂ, ಲ್ಯಾಪ್‌ಟಾಪ್, ವೈದ್ಯಕೀಯ ತಪಾಸಣೆ, ಪೌಷ್ಟಿಕಾಂಶ (ಆಯುರ್ವೇದ) ಕಿಟ್ ಗಳನ್ನು ಖರೀದಿಸಿ ಇದಕ್ಕಾಗಿ ಮಂಡಳಿಯ ನೂರಾರು ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ. ಇದರಲ್ಲಿ ಭಾರಿ ಭ್ರಷ್ಟಾಚಾರ ನಡೆಸಿದ್ದಾರೆ. ಖರೀದಿ ಮೇಲಿರುವ ಕಲ್ಯಾಣ ಮಂಡಳಿ ಉತ್ಸುಕತೆ, ಡಿಬಿಟಿ ಮೂಲಕ ಕಾರ್ಮಿಕರಿಗೆ ನೇರವಾಗಿ ಸಂದಾಯವಾಗುವ ಸೌಲಭ್ಯಗಳನ್ನು ಕೊಡಲು ನಿರಾಸಕ್ತಿ ಕಾಣುತ್ತಿದೆ. ನೋಂದಣಿ ಮತ್ತು ಮರುನೋಂದಣಿಗಾಗಿ ಸಲ್ಲಿಸಿಲಾದ ಅರ್ಜಿಗಳನ್ನು ಸಕಾರಣವಿಲ್ಲದೇ ರದ್ದುಗೊಳಿಸಲಾಗುತ್ತಿದೆ. ಇದು ಕಲ್ಯಾಣ ಮಂಡಳಿಗೆ ಕಾರ್ಮಿಕರ ಹಿತಾಸಕ್ತಿ ಮುಖ್ಯವಾಗಿಲ್ಲ, ಸಾಮಾಜಿಕ ಸುರಕ್ಷೆ ನೀಡುವ ಉದ್ದೇಶದಿಂದ ಸ್ಥಾಪಿಸಲಾದ ಕಲ್ಯಾಣ ಮಂಡಳಿಯ ಸದುದ್ದೇಶವು ಮಣ್ಣುಪಾಲಾಗಿದೆ. ಕಲ್ಯಾಣ ಮಂಡಳಿ ಅನುಸರಿಸುತ್ತಿರುವ ಕಾರ್ಮಿಕ ವಿರೋಧಿ, ಬಡಜನ ವಿರೋಧಿ ನಡೆಯನ್ನು ಕಟ್ಟಡ ಕಾರ್ಮಿಕರಾದ ನಾವು ಖಂಡಿಸುತ್ತೇವೆ. ಸರಕಾರದ ಈ ನಡೆಯನ್ನು ಸರಿಪಡಿಸಿಕೊಳ್ಳಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷ ಹೊನ್ನೇನಹಳ್ಳಿ ಯಲ್ಲಪ್ಪ ಮಾತನಾಡಿ, ಶೈಕ್ಷಣಿಕ ಸಹಾಯಧನ ಸಂಬಂಧಿಸಿ ಹೊರಡಿಸಲಾಗಿದ್ದ 2023ರ ಅಧಿಸೂಚನೆಯನ್ನು ರದ್ದುಮಾಡಿ, ಕರ್ನಾಟಕ ಹೈಕೋರ್ಟ್ ಆದೇಶದಂತೆ ಕನಿಷ್ಟ ಕಾಲೇಜು ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯಧನ ನೀಡಬೇಕು. ಅರ್ಜಿ ಸಲ್ಲಿಕೆ ಅವಧಿಯನ್ನು ಆಗಸ್ಟ್ 31 ರವರೆಗೆ ವಿಸ್ತರಿಸಬೇಕು. ನೋಂದಣಿ ಮತ್ತು ಮರು ನೋಂದಣಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಸಕಾರಣವಿಲ್ಲದೇ, ಅರ್ಜಿ ಸಲ್ಲಿಕೆಯಲ್ಲಿನ ಸಣ್ಣಪುಟ್ಟ ದೋಷಗಳನ್ನೇ ಮುಂದು ಮಾಡಿ ತಿರಸ್ಕರಿಸಲಾಗುತ್ತಿದೆ. ಇದು ನಿಲ್ಲಬೇಕು. ಅರ್ಜಿ ಸಲ್ಲಿಕೆಯಲ್ಲಿ ದೋಷವಿದ್ದರೂ ನೈಜ ಕಾರ್ಮಿಕರಾಗಿದ್ದಲ್ಲಿ ಅವರ ಅರ್ಜಿಯನ್ನು ಮಾನ್ಯ ಮಾಡಬೇಕು. ಹಾಗೂ ಕಾಲಮಿತಿಯಲ್ಲಿ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ಕೆಲವೆಡೆ ಬಿಲ್ಡಿಂಗ್ ಲೈಸನ್ಸ್ ಸಲ್ಲಿಸದಿರುವ ಕಾರಣವನ್ನು ಮುಂದು ಮಾಡಿ ಅರ್ಜಿಗಳನ್ನು ತಿರಸ್ಕರಿಸಲಾಗುತ್ತಿದೆ. ಇದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಪಿಂಚಣಿಗಾಗಿ ಸಲ್ಲಿಸಲಾದ ಸಾವಿರಾರು ಅರ್ಜಿಗಳನ್ನು ವಿಲೇವಾರಿ ಮಾಡಬೇಕು ಕಾರ್ಮಿಕ ಇಲಾಖೆಗಾಗಿ ಪ್ರತ್ಯೇಕವಾಗಿ ತರಲಾದ ಹೊಸ ಸಾಫ್ಟ್ ವೇರ್ ನಲ್ಲಿ ಅನೇಕ ರೀತಿಯ ತಾಂತ್ರಿಕ ದೋಷಗಳು ಪದೇ ಪದೇ ಕಾಣಿಸಿಕೊಳ್ಳುತ್ತಿವೆ. ಇದರಿಂದ ಸಕಾಲದಲ್ಲಿ ವಿವಿಧ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಸರಿಪಡಿಸಬೇಕು ಕಳೆದ ವರ್ಷದಲ್ಲಿ ಕಲ್ಯಾಣ ಮಂಡಳಿಯಿಂದ ಲ್ಯಾಪ್ ಟಾಪ್ ಖರೀದಿ, ಮಹಿಳೆಯರಿಗಾಗಿ ಪ್ಯಾಡ್ ಖರೀದಿ, ಖಾಸಗಿ ಆಸ್ಪತ್ರೆಗಳ ಮೂಲಕ ವೈದ್ಯಕೀಯ ತಪಾಸಣೆ ಹೆಸರಲ್ಲಿ ಭಾರಿ ಅವ್ಯವಹಾರ ನಡೆದಿದೆ. ಜೊತೆಗೆ ಇತ್ತೀಚೆಗೆ ಆಯುರ್ವೇದ ಕಂಪನಿಯಿಂದ ಪೌಷ್ಟಿಕಾಂಶ ಕಿಟ್ ಖರೀದಿ ಮಾಡಲಾಗಿದೆ. ಇದರಲ್ಲಿಯೂ ಕೊಟ್ಯಾಂತರ ಅವ್ಯವಹಾರ ನಡೆದಿದೆ. ಇದರ ಜೊತೆಯಲ್ಲಿ ಸ್ಕೂಲ್ ಕಿಟ್ ಬರಲು ಸಿದ್ಧವಾಗಿದೆ ಎಂಬ ಸುದ್ದಿಯೂ ಹರಿದಾಡುತ್ತಿದೆ. ಈ ಎಲ್ಲ ಖರೀದಿಗಳ ತನಿಖೆಯಾಗಬೇಕು. ಯಾವುದೇ ಕಿಟ್ ಗಳನ್ನು ಖರೀದಿಸಿ ನೀಡುವುದನ್ನು ನಿಲ್ಲಿಸಬೇಕು. ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಎಲ್ಲ ಖರೀದಿ ಅವ್ಯವಹಾರಗಳ ಬಗ್ಗೆಯೂ ತನಿಖೆಯಾಗಬೇಕು. ಭ್ರಷ್ಟಾಚಾರ, ಲಂಚಗುಳಿತನದಿಂದ ಕಲ್ಯಾಣ ಮಂಡಳಿಯನ್ನು ಮುಕ್ತಗೊಳಿಸಬೇಕು ಎಂದು ಒತ್ತಾಯಿಸಿದರು

ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ಭೀಮರಾಜ್, ವಿಜಯಕೃಷ್ಣ, ಪ್ರಭಾಕರ್, ಆಶಾ, ಶಿವಣ್ಣ, ಕೃಷ್ಣಮೂರ್ತಿ, ಪ್ರವೀಜ್ ತಾಜ್, ನವೀನ್ ಕುಮಾರ್ ಮುಂತಾದವರು ಇದ್ದರು

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

6 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

20 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

21 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

22 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

22 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

1 day ago