Categories: ಕೋಲಾರ

ಕಟ್ಟಡ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿ

ಕೋಲಾರ: ಕಟ್ಟಡ ಕಾರ್ಮಿಕರ ಸೌಲಭ್ಯಗಳ ಅರ್ಜಿ ಸ್ವೀಕಾರ ವಿಳಂಬ ನೀತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ರಾಜ್ಯ ‌ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಸಿಐಟಿಯು ನೇತೃತ್ವದಲ್ಲಿ ಶನಿವಾರ ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಪಿ.ಶ್ರೀನಿವಾಸ್ ಮಾತನಾಡಿ, ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ನೆಪದಲ್ಲಿ ತಡೆಹಿಡಿಯಲಾದ ಕಟ್ಟಡ ಕಾರ್ಮಿಕರ ಸೌಲಭ್ಯಗಳ ಅರ್ಜಿಗಳನ್ನು ಕೂಡಲೇ ಸ್ವೀಕರಿಸಲು ಕ್ರಮವಹಿಸಬೇಕು ಮತ್ತು ಶೈಕ್ಷಣಿಕ ಅರ್ಜಿಗಳನ್ನು ಸ್ವೀಕರಿಸುವ ಅವಧಿಯನ್ನು ಆಗಸ್ಟ್ ವರೆಗೆ ವಿಸ್ತರಿಬೇಕೆಂದು ಒತ್ತಾಯಿಸಿದರು

ಕರ್ನಾಟಕದ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳು ಚುನಾವಣೆ ಹೊತ್ತಿನಲ್ಲಿ ಯಾವುದೇ ತಡೆಯಿಲ್ಲದೆ ಜಾರಿಗೊಳ್ಳುತ್ತಿವೆ. ಆದರೆ, ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ ಅಧಿಕಾರಿಗಳು ಚುನಾವಣಾ‌ ನೀತಿ ಸಂಹಿತೆ ನೆಪ‌ ಹಾಗೂ ತಂತ್ರಾಂಶದ ನೆಪವೂಡ್ಡಿ ಫಲಾನುಭವಿ ಕಾರ್ಮಿಕರಿಗೆ ಪಿಂಚಣಿ, ವೈದ್ಯಕೀಯ, ಹೆರಿಗೆ, ಮದುವೆ ಸಹಾಯಧನ ಅರ್ಜಿಗಳ ಸ್ವೀಕಾರವನ್ನು ತಡೆವೂಡ್ಡಿರುವುದು ಮತ್ತು ಬಡ‌ಕಾರ್ಮಿಕರಿಗೆ ನ್ಯಾಯಬದ್ದವಾಗಿ ಸಿಗಬೇಕಾದ ಸೌಲಭ್ಯಗಳನ್ನು ನಿರಾಕರಿಸುತ್ತಿದ್ದಾರೆ ಎಂದು ಆರೋಪಿಸಿದರು

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಭೀಮರಾಜ್ ಮಾತನಾಡಿ ಕಲ್ಯಾಣ ಮಂಡಳಿಯಲ್ಲಿ ಸಾವಿರಾರು ಕೋಟಿ ಸೆಸ್ ಹಣ ಇದೆ. ಅಲ್ಲದೆ ಈ ಪ್ರಕರಣದಲ್ಲಿ ವಾದ‌ ಮಾಡಲು ನೇಮಿಸಿದ ವಕೀಲರಿಗೆ ಲಕ್ಷಾಂತರ ಶುಲ್ಕವನ್ನು ಮಂಡಳಿಯು ನೀಡುತ್ತಿದೆ. ಹಾಗೂ ನೂರಾರು ಕೋಟಿ ರುಪಾಯಿಗಳ ಅನಗತ್ಯ ಖರೀದಿಗಳನ್ನು ಮಾಡಲಾಗುತ್ತಿದೆ.ಆದರೆ ಬಡ ಕಾರ್ಮಿಕರ ಇಬ್ಬರು ‌ಮಕ್ಕಳಿಗೆ ಮಾತ್ರ ಹೈಕೋರ್ಟ್ ಆದೇಶದಂತೆ ರೂ 60 ಸಾವಿರ ‌ಮತ್ತು 55 ಸಾವಿರ‌ ರುಪಾಯಿಗಳನ್ನು ಪಾವತಿಸಲು ವಿಫಲವಾಗಿದೆ. ಈ ಹಿನ್ನಲೆಯಲ್ಲಿ ಇದೇ‌ ಜೂನ್ 7 ರಂದು ಕಲ್ಯಾಣ ಮಂಡಳಿಯ ವಿರುದ್ಧ ಹೈಕೋರ್ಟನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ಫೆಡರೇಶನ್ ನಿರ್ಧರಿಸಿದೆ ಎಂದರು

ಸರಕಾರವು ಕೂಡಲೇ ಆನ್‌ಲೈನ್ ನಲ್ಲಿ ಮಂಡಳಿಯ ಸೌಲಭ್ಯಗಳ ಅರ್ಜಿಗಳನ್ನು ಸ್ವೀಕರಿಸಲು ಕ್ರಮವಹಿಸಬೇಕು ಶೈಕ್ಷಣಿಕ ಸಹಾಯಧನ ಕೋರಿ ಅರ್ಜಿ ಸಲ್ಲಿಸುವಾಗ ಹಲವಾರು ತಾಂತ್ರಿಕ ಸಮಸ್ಯೆಗಳು ಬರುತ್ತಿದ್ದು, ಇವುಗಳನ್ನು ತಕ್ಷಣ ಬಗೆಹರಿಸಲು ಕ್ರಮ ವಹಿಸಬೇಕು ನೊಂದಣಿ. ನವೀಕರಣ, ಸೌಲಭ್ಯದ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಬೇಕು. ಈ ಅರ್ಜಿಗಳನ್ನು ತಿರಸ್ಕರಿಸುವಾಗ ಕಛೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಬೇಕು ಮತ್ತು ಸ್ಪಷ್ಟವಾದ ಕಾರಣಗಳನ್ನು ನೀಡಬೇಕು ಹೊಸ ಅರ್ಜಿ ಹಾಗೂ ನವೀಕರಣ ಕುರಿತು ಉಂಟಾಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಪಾತಕೋಟ ನವೀನ್ ಕುಮಾರ್, ಸಹ ಕಾರ್ಯದರ್ಶಿ ವಿಜಯಕೃಷ್ಣ, ಮುಖಂಡರಾದ ಆರೋಗ್ಯನಾಥನ್, ಮಹಮ್ಮದ್ ಮುಸ್ತಫಾ, ರಾಮಚಂದ್ರಪ್ಪ ಇದ್ದರು

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago