Categories: ಕೋಲಾರ

ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ದೊರೆಯುವ ಶೈಕ್ಷಣಿಕ ಸಹಾಯಧನ ಕಡಿತ ಮಾಡಿರುವ ಆದೇಶವನ್ನು ವಾಪಸ್ ಪಡೆದು ಹೈಕೋರ್ಟ್ ಆದೇಶದಂತೆ ಬಾಕಿ ಇರುವ ಶೈಕ್ಷಣಿಕ ಧನ ಸಹಾಯವನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ವತಿಯಿಂದ ಬುಧವಾರ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನಾಕಾರನ್ನು ಉದ್ದೇಶಿಸಿ ಸಂಘದ ಜಿಲ್ಲಾಧ್ಯಕ್ಷ ಪಿ.ಶ್ರೀನಿವಾಸ್ ಮಾತನಾಡಿ ಅತ್ಯಂತ ಸಂಕಷ್ಠದಲ್ಲಿ ಜೀವನ ನಡೆಸುತ್ತಿರುವ ಕಟ್ಟಡ ಕಾರ್ಮಿಕರು ತನ್ನ ಮಕ್ಕಳನ್ನು ವಿದ್ಯಾಭ್ಯಾಸ ಮಾಡಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮಂಡಳಿಯಿಂದ ದೊರೆಯುವ ವಿದ್ಯಾರ್ಥಿ ವೇತನದಿಂದ ಪ್ರಯೋಜನವಾಗುತ್ತಿತ್ತು. ಕಳೆದ ವರ್ಷ ಪೂರ್ವನ್ವಯವಾಗುವಂತೆ ವಿದ್ಯಾರ್ಥಿವೇತನವನ್ನು ಭಾರೀ ಪ್ರಮಾಣದಲ್ಲಿ ಕಡಿತ ಮಾಡಿರುವುದು ಖಂಡನೀಯ. ಕೂಡಲೇ ಈ ಆದೇಶವನ್ನು ವಾಪಸು ಪಡೆದು, ಹಿಂದಿನಂತೆ ವಿದ್ಯಾರ್ಥಿವೇತನ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.

ನೈಜ ಕಟ್ಟಡ ಕಾರ್ಮಿಕರ ನೋಂದಣಿ ಮತ್ತು ನವೀಕರಣ ಅರ್ಜಿಗಳನ್ನು ಸಕಾರಣವಿಲ್ಲದೇ ತಿರಸ್ಕರಿಸುವುದು ನಿಲ್ಲಬೇಕು ಹಾಗೂ ವಿಳಂಬ ಮಾಡದೇ ಕಾರ್ಡು ವಿತರಣೆ ಆಗಬೇಕು. ಸೌಲಭ್ಯಗಳಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡಬೇಕು. ಪಿಂಚಣಿದಾರರಿಗೆ ಪ್ರತಿ ತಿಂಗಳು ೫ನೇ ತಾರೀಖಿನೊಳಗೆ ಹಣವನ್ನು ಬಿಡುಗಡೆ ಮಾಡಬೇಕು. ಟೆಂಡರ್ ಆಧಾರಿತ ಎಲ್ಲ ಖರೀದಿ ವ್ಯವಹಾರಗಳನ್ನು ನಿಲ್ಲಿಸಬೇಕು, ಇದುವರೆಗೆ ನಡೆದಿರುವ ಖರೀದಿಗಳಲ್ಲಿ ಅವ್ಯವಹಾರಗಳ ನಡೆದಿದ್ದು, ಈ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಭೀಮರಾಜ್ ಮಾತನಾಡಿ, ನೈಜ ಕಟ್ಟಡ ಕಾರ್ಮಿಕರು ಸಲ್ಲಿಸುವ ಸೌಲಭ್ಯದ ಅರ್ಜಿಗಳನ್ನು ತಿರಸ್ಕರಿದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ, ಅವರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಬೇಕು. ನಗರಸಭೆ, ಪುರಸಭೆ ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ಖಾಸಗಿ ಕಟ್ಟಡಗಳಿಂದ ಸೆಸ್ ಸಂಗ್ರಹ ಮಾಡಲು ವಿಶೇಷ ಯೋಜನೆ ರೂಪಿಸಬೇಕು. ಕಳೆದ ವರ್ಷ ಸಾಪ್ಟ್ ವೇರ್ ಸಮರ್ಪಕವಾಗಿ ಕೆಲಸ ಮಾಡದೇ ಹಲವು ಮಂದಿ ಪಿಂಚಣಿ ಅರ್ಜಿ ಸಲ್ಲಿಸಲು ಸಾಧ್ಯವಾಗಲಿಲ್ಲ. ಅಂತವರು ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕು. ತಿರಸ್ಕೃತ ನೋಂದಣಿ, ನವೀಕರಣ, ಸೌಲಭ್ಯದ ಅರ್ಜಿಗಳ ಕುರಿತು ಮೇಲ್ಮನವಿ ಸಲ್ಲಿಸಲು ಆನ್‌ಲೈನ್‌ನಲ್ಲಿ ಅವಕಾಶ ನೀಡಬೇಕು. ಈ ಮೇಲ್ಮನವಿ ಪ್ರಾಧಿಕಾರಿಗಳ ಕಾರ್ಯನಿರ್ವಹಣೆ ಕುರಿತು ಅಗತ್ಯ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಬೇಕು ಎಂದು ಕಾರ್ಮಿಕ ಅಧಿಕಾರಿಗಳ ಮೂಲಕ ಕಾರ್ಮಿಕ ಸಚಿವರಿಗೆ ಮನವಿಯ ಮೂಲಕ ಒತ್ತಾಯಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಸಂಘದ ಕಾರ್ಯಾಧ್ಯಕ್ಷ ಕೆ.ಮಂಜುನಾಥ್, ಜಿಲ್ಲಾ ಸಹ ಕಾರ್ಯದರ್ಶಿ ಎಂ.ವಿಜಯಕೃಷ್ಣ, ತಾಲೂಕು ಅಧ್ಯಕ್ಷ ಹೊಗರಿ ನಾಗರಾಜ್, ಮುಖಂಡರಾದ ಗುರುಸ್ವಾಮಿ, ಅಪ್ಪಯ್ಯಣ್ಣ, ಕೇಶವರಾವ್ ಅಶೋಕರಾವ್, ಚಂದ್ರಪ್ಪ, ವೆಂಕಟೇಶ್, ಪೆರುಮಾಳಪ್ಪ, ಗೋಪಾಲ್, ದಶರತ್, ದಿಂಬ ಮಂಜುನಾಥ್, ಮುನಿಯಪ್ಪ ಮತ್ತಿತತರು ವಹಿಸಿದ್ದರು.

Ramesh Babu

Journalist

Recent Posts

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

7 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

8 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

8 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

11 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

18 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

18 hours ago