Categories: ಕೋಲಾರ

ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ದೊರೆಯುವ ಶೈಕ್ಷಣಿಕ ಸಹಾಯಧನ ಕಡಿತ ಮಾಡಿರುವ ಆದೇಶವನ್ನು ವಾಪಸ್ ಪಡೆದು ಹೈಕೋರ್ಟ್ ಆದೇಶದಂತೆ ಬಾಕಿ ಇರುವ ಶೈಕ್ಷಣಿಕ ಧನ ಸಹಾಯವನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ವತಿಯಿಂದ ಬುಧವಾರ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನಾಕಾರನ್ನು ಉದ್ದೇಶಿಸಿ ಸಂಘದ ಜಿಲ್ಲಾಧ್ಯಕ್ಷ ಪಿ.ಶ್ರೀನಿವಾಸ್ ಮಾತನಾಡಿ ಅತ್ಯಂತ ಸಂಕಷ್ಠದಲ್ಲಿ ಜೀವನ ನಡೆಸುತ್ತಿರುವ ಕಟ್ಟಡ ಕಾರ್ಮಿಕರು ತನ್ನ ಮಕ್ಕಳನ್ನು ವಿದ್ಯಾಭ್ಯಾಸ ಮಾಡಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮಂಡಳಿಯಿಂದ ದೊರೆಯುವ ವಿದ್ಯಾರ್ಥಿ ವೇತನದಿಂದ ಪ್ರಯೋಜನವಾಗುತ್ತಿತ್ತು. ಕಳೆದ ವರ್ಷ ಪೂರ್ವನ್ವಯವಾಗುವಂತೆ ವಿದ್ಯಾರ್ಥಿವೇತನವನ್ನು ಭಾರೀ ಪ್ರಮಾಣದಲ್ಲಿ ಕಡಿತ ಮಾಡಿರುವುದು ಖಂಡನೀಯ. ಕೂಡಲೇ ಈ ಆದೇಶವನ್ನು ವಾಪಸು ಪಡೆದು, ಹಿಂದಿನಂತೆ ವಿದ್ಯಾರ್ಥಿವೇತನ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.

ನೈಜ ಕಟ್ಟಡ ಕಾರ್ಮಿಕರ ನೋಂದಣಿ ಮತ್ತು ನವೀಕರಣ ಅರ್ಜಿಗಳನ್ನು ಸಕಾರಣವಿಲ್ಲದೇ ತಿರಸ್ಕರಿಸುವುದು ನಿಲ್ಲಬೇಕು ಹಾಗೂ ವಿಳಂಬ ಮಾಡದೇ ಕಾರ್ಡು ವಿತರಣೆ ಆಗಬೇಕು. ಸೌಲಭ್ಯಗಳಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡಬೇಕು. ಪಿಂಚಣಿದಾರರಿಗೆ ಪ್ರತಿ ತಿಂಗಳು ೫ನೇ ತಾರೀಖಿನೊಳಗೆ ಹಣವನ್ನು ಬಿಡುಗಡೆ ಮಾಡಬೇಕು. ಟೆಂಡರ್ ಆಧಾರಿತ ಎಲ್ಲ ಖರೀದಿ ವ್ಯವಹಾರಗಳನ್ನು ನಿಲ್ಲಿಸಬೇಕು, ಇದುವರೆಗೆ ನಡೆದಿರುವ ಖರೀದಿಗಳಲ್ಲಿ ಅವ್ಯವಹಾರಗಳ ನಡೆದಿದ್ದು, ಈ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಭೀಮರಾಜ್ ಮಾತನಾಡಿ, ನೈಜ ಕಟ್ಟಡ ಕಾರ್ಮಿಕರು ಸಲ್ಲಿಸುವ ಸೌಲಭ್ಯದ ಅರ್ಜಿಗಳನ್ನು ತಿರಸ್ಕರಿದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ, ಅವರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಬೇಕು. ನಗರಸಭೆ, ಪುರಸಭೆ ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ಖಾಸಗಿ ಕಟ್ಟಡಗಳಿಂದ ಸೆಸ್ ಸಂಗ್ರಹ ಮಾಡಲು ವಿಶೇಷ ಯೋಜನೆ ರೂಪಿಸಬೇಕು. ಕಳೆದ ವರ್ಷ ಸಾಪ್ಟ್ ವೇರ್ ಸಮರ್ಪಕವಾಗಿ ಕೆಲಸ ಮಾಡದೇ ಹಲವು ಮಂದಿ ಪಿಂಚಣಿ ಅರ್ಜಿ ಸಲ್ಲಿಸಲು ಸಾಧ್ಯವಾಗಲಿಲ್ಲ. ಅಂತವರು ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕು. ತಿರಸ್ಕೃತ ನೋಂದಣಿ, ನವೀಕರಣ, ಸೌಲಭ್ಯದ ಅರ್ಜಿಗಳ ಕುರಿತು ಮೇಲ್ಮನವಿ ಸಲ್ಲಿಸಲು ಆನ್‌ಲೈನ್‌ನಲ್ಲಿ ಅವಕಾಶ ನೀಡಬೇಕು. ಈ ಮೇಲ್ಮನವಿ ಪ್ರಾಧಿಕಾರಿಗಳ ಕಾರ್ಯನಿರ್ವಹಣೆ ಕುರಿತು ಅಗತ್ಯ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಬೇಕು ಎಂದು ಕಾರ್ಮಿಕ ಅಧಿಕಾರಿಗಳ ಮೂಲಕ ಕಾರ್ಮಿಕ ಸಚಿವರಿಗೆ ಮನವಿಯ ಮೂಲಕ ಒತ್ತಾಯಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಸಂಘದ ಕಾರ್ಯಾಧ್ಯಕ್ಷ ಕೆ.ಮಂಜುನಾಥ್, ಜಿಲ್ಲಾ ಸಹ ಕಾರ್ಯದರ್ಶಿ ಎಂ.ವಿಜಯಕೃಷ್ಣ, ತಾಲೂಕು ಅಧ್ಯಕ್ಷ ಹೊಗರಿ ನಾಗರಾಜ್, ಮುಖಂಡರಾದ ಗುರುಸ್ವಾಮಿ, ಅಪ್ಪಯ್ಯಣ್ಣ, ಕೇಶವರಾವ್ ಅಶೋಕರಾವ್, ಚಂದ್ರಪ್ಪ, ವೆಂಕಟೇಶ್, ಪೆರುಮಾಳಪ್ಪ, ಗೋಪಾಲ್, ದಶರತ್, ದಿಂಬ ಮಂಜುನಾಥ್, ಮುನಿಯಪ್ಪ ಮತ್ತಿತತರು ವಹಿಸಿದ್ದರು.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

7 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

8 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

8 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

10 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

14 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

14 hours ago