ಕೋಲಾರ: ಜಿಲ್ಲೆಗೆ ನೂತನವಾಗಿ ವರ್ಗಾವಣೆಯಾಗಿರುವ ಕಾರ್ಮಿಕ ಅಧಿಕಾರಿ ವರಲಕ್ಷ್ಮೀ ಅವರನ್ನು ಗುರುವಾರ ಜಿಲ್ಲಾ ಕಟ್ಟಡ ಕಾರ್ಮಿಕರ ಸಮನ್ವಯ ಸಮಿತಿ ನೇತೃತ್ವದಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಕಟ್ಟಡ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಇಂಟೆಕ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹೊನ್ನೇನಹಳ್ಳಿ ಯಲ್ಲಪ್ಪ ಮಾತನಾಡಿ ಜಿಲ್ಲೆಯಲ್ಲಿ ಕಟ್ಟಡ ಕಾರ್ಮಿಕರು ಕಷ್ಟಪಟ್ಟು ದುಡಿಯುತ್ತಾ ತಮ್ಮ ತಮ್ಮ ಕುಟುಂಬಗಳ ಪೋಷಣೆಯಲ್ಲಿ ತೊಡಗಿದ್ದಾರೆ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿರುವ ಹಣದ ಸದ್ಬಳಕೆಗಾಗಿ ಕಾರ್ಮಿಕರು ಸಾಕಷ್ಟು ಅರ್ಜಿಗಳನ್ನು ಇಲಾಖೆಗೆ ಸಲ್ಲಿಸಿದ್ದಾರೆ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡುವ ಮೂಲಕ ಕಾರ್ಮಿಕರಿಗೆ ಅನುಕೂಲವಾಗುವಂತೆ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ನೂತನ ಕಾರ್ಮಿಕ ಅಧಿಕಾರಿ ವರಲಕ್ಷ್ಮೀ ಇಲಾಖೆಯು ಕಟ್ಟಡ ಕಾರ್ಮಿಕರ ಪರವಾಗಿದೆ ಏನೇ ಸಮಸ್ಯೆಗಳು ಇದ್ದರೂ ಗಮನಕ್ಕೆ ತನ್ನಿ ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನ ಮಾಡಲಾಗುತ್ತದೆ ಮುಂದೆ ಪ್ರತಿ ಎರಡು ತಿಂಗಳಿಗೊಮ್ಮೆ ಕಟ್ಟಡ ಕಾರ್ಮಿಕ ಸಂಘಟನೆಗಳೊಂದಿಗೆ ಸಭೆ ನಡೆಸಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಐಟಿಯುಟಿಸಿ ಜಿಲ್ಲಾ ಅಧ್ಯಕ್ಷ ಪ್ರಭಾಕರ್, ಕಟ್ಟಡ ಕಾರ್ಮಿಕ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ವೈ ಮುರಳೀಧರ್, ಮುಖಂಡರಾದ ಕೃಷ್ಣಮೂರ್ತಿ, ಮಾಲೂರು ರವಿಕುಮಾರ್, ಪವಿತ್ರ, ದೇವರಾಜ್, ಸುರೇಶ್ ಮುಂತಾದವರು ಇದ್ದರು
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…