Categories: ಕೋಲಾರ

ಕಟ್ಟಡ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಕಾರ್ಮಿಕ ಅಧಿಕಾರಿ ವರಲಕ್ಷ್ಮೀಗೆ ಮನವಿ

ಕೋಲಾರ: ಜಿಲ್ಲೆಗೆ ನೂತನವಾಗಿ ವರ್ಗಾವಣೆಯಾಗಿರುವ ಕಾರ್ಮಿಕ ಅಧಿಕಾರಿ ವರಲಕ್ಷ್ಮೀ ಅವರನ್ನು ಗುರುವಾರ ಜಿಲ್ಲಾ ಕಟ್ಟಡ ಕಾರ್ಮಿಕರ ಸಮನ್ವಯ ಸಮಿತಿ ನೇತೃತ್ವದಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಕಟ್ಟಡ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಇಂಟೆಕ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹೊನ್ನೇನಹಳ್ಳಿ ಯಲ್ಲಪ್ಪ ಮಾತನಾಡಿ ಜಿಲ್ಲೆಯಲ್ಲಿ ಕಟ್ಟಡ ಕಾರ್ಮಿಕರು ಕಷ್ಟಪಟ್ಟು ದುಡಿಯುತ್ತಾ ತಮ್ಮ ತಮ್ಮ ಕುಟುಂಬಗಳ ಪೋಷಣೆಯಲ್ಲಿ ತೊಡಗಿದ್ದಾರೆ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿರುವ ಹಣದ ಸದ್ಬಳಕೆಗಾಗಿ ಕಾರ್ಮಿಕರು ಸಾಕಷ್ಟು ಅರ್ಜಿಗಳನ್ನು ಇಲಾಖೆಗೆ ಸಲ್ಲಿಸಿದ್ದಾರೆ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡುವ ಮೂಲಕ ಕಾರ್ಮಿಕರಿಗೆ ಅನುಕೂಲವಾಗುವಂತೆ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ನೂತನ ಕಾರ್ಮಿಕ ಅಧಿಕಾರಿ ವರಲಕ್ಷ್ಮೀ ಇಲಾಖೆಯು ಕಟ್ಟಡ ಕಾರ್ಮಿಕರ ಪರವಾಗಿದೆ ಏನೇ ಸಮಸ್ಯೆಗಳು ಇದ್ದರೂ ಗಮನಕ್ಕೆ ತನ್ನಿ ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನ ಮಾಡಲಾಗುತ್ತದೆ ಮುಂದೆ ಪ್ರತಿ ಎರಡು ತಿಂಗಳಿಗೊಮ್ಮೆ ಕಟ್ಟಡ ಕಾರ್ಮಿಕ ಸಂಘಟನೆಗಳೊಂದಿಗೆ ಸಭೆ ನಡೆಸಲಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಐಟಿಯುಟಿಸಿ ಜಿಲ್ಲಾ ಅಧ್ಯಕ್ಷ ಪ್ರಭಾಕರ್, ಕಟ್ಟಡ ಕಾರ್ಮಿಕ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ವೈ ಮುರಳೀಧರ್, ಮುಖಂಡರಾದ ಕೃಷ್ಣಮೂರ್ತಿ, ಮಾಲೂರು ರವಿಕುಮಾರ್, ಪವಿತ್ರ, ದೇವರಾಜ್, ಸುರೇಶ್ ಮುಂತಾದವರು ಇದ್ದರು

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

14 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

20 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago