ಕಟ್ಟಡ ಕೂಲಿ ಕಾರ್ಮಿಕರಿಗೆ ಸೇಫ್ಟಿ ಕಿಟ್ ಕುರಿತ ತರಬೇತಿ: ನ್ಯೂಟ್ರಿಷನ್ ಕಿಟ್ ನಿಂದ ಯಾವ ಪ್ರಯೋಜನವಿಲ್ಲ- ಕೂಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷೆ ಭಾಗ್ಯಲಕ್ಷ್ಮೀ ಎಚ್.ವಿ ಆರೋಪ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಮುಂಭಾಗದಲ್ಲಿ ಕಟ್ಟಡ ಕಾರ್ಮಿಕರ ಮತ್ತು ಇತರೆ ಕೂಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ(ರಿ) ದಿಂದ ಅಯೋಜನೆ ಮಾಡಲಾಗಿದ್ದು ಕಾರ್ಯಕ್ರಮದಲ್ಲಿ ಕಟ್ಟಡ ಕೂಲಿ ಕಾರ್ಮಿಕರಿಗೆ ಸೇಫ್ಟಿ ಕಿಟ್ನ್ ಬಗ್ಗೆ ತರಬೇತಿಯನ್ನ ನೀಡಲಾಗಿತು.

ತರಬೇತಿಯಲ್ಲಿ ನೂರಕ್ಕೂ ಹೆಚ್ಚು ಕಾರ್ಮಿಕರು ಭಾಗವಹಿಸಿದರು, ಕಟ್ಟಡ ಕಾರ್ಮಿಕರ ಮತ್ತು ಇತರೆ ಕೂಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರಾದ ಭಾಗ್ಯಲಕ್ಷ್ಮೀ ಎಚ್.ವಿ. ಮಾತನಾಡಿ, ಕಾರ್ಮಿಕ ಇಲಾಖೆ ಈ ಮೊದಲು ನ್ಯೂಟ್ರಿಷನ್ ಕಿಟ್ ಅನ್ನು ವಿತರಿಸಿದ್ದು, ಇದರಿಂದ ಕಾರ್ಮಿಕರಿಗೆ ಯಾವುದೇ ಪ್ರಯೋಜನವಾಗಿಲ್ಲ, ನಮಗೆ ಬೇಕಾದ ಆರೋಗ್ಯ ಸೌಲಭ್ಯವನ್ನ ನಾವೇ ಪಡೆದು ಕೊಳ್ಳುತ್ತೇವೆ. ನ್ಯೂಟ್ರಿಷನ್ ಕಿಟ್ ನಿಂದ ಕಾರ್ಮಿಕರಿಗೆ ಯಾವುದೇ ಪ್ರಯೋಜನವಿಲ್ಲ. ಆ ಹಣವನ್ನ ಕಾರ್ಮಿಕರ ಖಾತೆಗೆ ಜಮಾ ಮಾಡು ಬೇಕೆಂದು ಕಾರ್ಮಿಕರು ಒತ್ತಾಯಿಸಿದರು.

ಕಾರ್ಮಿಕರ ಮನವಿಗೆ ಸ್ಪಂದಿಸಿದ ಕಾರ್ಮಿಕರ ಇಲಾಖೆ ಎಲೆಕ್ಟ್ರಿಷಿಯನ್ ಕಿಟ್, ವೆಲ್ಡಿಂಗ್ ಕಿಟ್‌ಗಳನ್ನು ನೀಡಿದ್ದು, ಅದರಲ್ಲಿ ಕಾರ್ಮಿಕ ಇಲಾಖೆ ನೀಡಿದ ಯಂತ್ರಗಳ ಕಳಪೆ ಗುಣಮಟ್ಟತಾಗಿತ್ತು, ಕಾರ್ಮಿಕ ಇಲಾಖೆ ಕಾರ್ಮಿಕರಿಗೆ ಸಹಾಯವಾಗುವಂತ ಯೋಜನೆಗಳನ್ನು ಮಾಡುವ ಬದಲಿಗೆ ಯಾವುದೋ ಸಂಸ್ಥೆಯನ್ನ ಉದ್ಧಾರ ಮಾಡುವ ಯೋಜನೆಗಳನ್ನ ಜಾರಿಗೆ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

10 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

14 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

21 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

22 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago