ಅರಣ್ಯಕ್ಕೆ ಅತಿಕ್ರಮ ಪ್ರವೇಶ ಮಾಡಿ ಕಡವೆ(ಸಾಂಬಾರ್) ಬೇಟೆಯಾಡಿ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಯನ್ನ ಕಾವೇರಿ ವನ್ಯಜೀವಿಧಾಮದ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮರಿಯಮಂಗಲ ಗ್ರಾಮದ ಅರ್ಪದರಾಜು (59) ಬಂಧಿತ ಆರೋಪಿಯಾಗಿದ್ದು , ಅದೇ ಗ್ರಾಮದ ಜಾನು ಹಾಗೂ ಕರಿಯಪ್ಪ ಪರಾರಿಯಾಗಿರುವ ಆರೋಪಿಗಳಾಗಿದ್ದಾರೆ.
ಘಟನೆ ವಿವರ:
ಕಾವೇರಿ ಅಭಯಾರಣ್ಯದ ಕಂಪಾರ್ಟ್ ಮೆಂಟ್ 26 ರ ಹನೂರು ವನ್ಯಜೀವಿ ವಲಯದ ಶಾಗ್ಯಂ ಶಾಖೆಯ ಕಾರಯ್ಯನ ಬೆಟ್ಟ ಗಸ್ತಿನ ಬೂದಿಕುಂಟೆ ಕಾಲುದಾರಿ ಅರಣ್ಯ ಪ್ರದೇಶಕ್ಕೆ ಮೂವರು ವ್ಯಕ್ತಿಗಳು ಅತಿಕ್ರಮ ಪ್ರವೇಶ ಮಾಡಿ, ನಾಡ ಬಂದೂಕಿನ ಮೂಲಕ ಕಡವೆ ಬೇಟೆಯಾಡಿ ಮಾಂಸ ಸಾಗಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕಾವೇರಿ ವನ್ಯಜೀವಿಧಾಮದ ಡಿ ಸಿ ಎಫ್ ಸುರೇಂದ್ರ ಹಾಗೂ ಎಸಿಎಫ್ ಅಂಕರಾಜು ರವರ ಮಾರ್ಗದರ್ಶನದಲ್ಲಿ ಆರ್ ಎಫ್ ಓ ನಿರಂಜನ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿ ಜೆಎಂಎಫ್ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ದಾಳಿಯ ವೇಳೆ ಇನ್ನಿಬ್ಬರು ಆರೋಪಿಗಳು ಪರಾರಿಯಾಗಿದ್ದು ಇವರ ಬಂಧನಕ್ಕೆ ಈಗಾಗಲೇ ತಂಡ ರಚನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಬಂಧಿತನಿಂದ ನಾಡ ಬಂದೂಕು, ನೂರು ಕೆಜಿ ಕಡವೆಯ ಹಸಿಮಾಂಸ, ಕಬ್ಬಿಣದ ಚಾಕು, ಮದ್ದು ತುಂಬಿದ ಪ್ಲಾಸ್ಟಿಕ್ ಚೀಲ, ಕಬ್ಬಿಣದ ಗುಂಡು, ಕಬ್ಬಿಣದ ಮೊಳೆ, ಕಬ್ಬಿಣದ ಬಾಲ್ಸ್ ತುಂಬಿದ ಪ್ಲಾಸ್ಟಿಕ್ ಡಬ್ಬಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.
ದಾಳಿಯಲ್ಲಿ ಉಪವಲಯ ಅರಣ್ಯ ಅಧಿಕಾರಿಗಳಾದ ಶ್ರೀನಿ ಆನಂದ್ ಗಸ್ತು ವನಪಾಲಕರಾದ ಯಲಗೂರಪ್ಪ ಗುಬ್ಬಿ ಶಿವಲಿಂಗಪ್ಪ, ಎಪಿ ಕ್ಯಾಂಪ್ ನ ಸಿಬ್ಬಂದಿ ಪಾಲ್ಗೊಂಡಿದ್ದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…