ಅರಣ್ಯಕ್ಕೆ ಅತಿಕ್ರಮ ಪ್ರವೇಶ ಮಾಡಿ ಕಡವೆ(ಸಾಂಬಾರ್) ಬೇಟೆಯಾಡಿ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಯನ್ನ ಕಾವೇರಿ ವನ್ಯಜೀವಿಧಾಮದ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮರಿಯಮಂಗಲ ಗ್ರಾಮದ ಅರ್ಪದರಾಜು (59) ಬಂಧಿತ ಆರೋಪಿಯಾಗಿದ್ದು , ಅದೇ ಗ್ರಾಮದ ಜಾನು ಹಾಗೂ ಕರಿಯಪ್ಪ ಪರಾರಿಯಾಗಿರುವ ಆರೋಪಿಗಳಾಗಿದ್ದಾರೆ.
ಘಟನೆ ವಿವರ:
ಕಾವೇರಿ ಅಭಯಾರಣ್ಯದ ಕಂಪಾರ್ಟ್ ಮೆಂಟ್ 26 ರ ಹನೂರು ವನ್ಯಜೀವಿ ವಲಯದ ಶಾಗ್ಯಂ ಶಾಖೆಯ ಕಾರಯ್ಯನ ಬೆಟ್ಟ ಗಸ್ತಿನ ಬೂದಿಕುಂಟೆ ಕಾಲುದಾರಿ ಅರಣ್ಯ ಪ್ರದೇಶಕ್ಕೆ ಮೂವರು ವ್ಯಕ್ತಿಗಳು ಅತಿಕ್ರಮ ಪ್ರವೇಶ ಮಾಡಿ, ನಾಡ ಬಂದೂಕಿನ ಮೂಲಕ ಕಡವೆ ಬೇಟೆಯಾಡಿ ಮಾಂಸ ಸಾಗಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕಾವೇರಿ ವನ್ಯಜೀವಿಧಾಮದ ಡಿ ಸಿ ಎಫ್ ಸುರೇಂದ್ರ ಹಾಗೂ ಎಸಿಎಫ್ ಅಂಕರಾಜು ರವರ ಮಾರ್ಗದರ್ಶನದಲ್ಲಿ ಆರ್ ಎಫ್ ಓ ನಿರಂಜನ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿ ಜೆಎಂಎಫ್ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ದಾಳಿಯ ವೇಳೆ ಇನ್ನಿಬ್ಬರು ಆರೋಪಿಗಳು ಪರಾರಿಯಾಗಿದ್ದು ಇವರ ಬಂಧನಕ್ಕೆ ಈಗಾಗಲೇ ತಂಡ ರಚನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಬಂಧಿತನಿಂದ ನಾಡ ಬಂದೂಕು, ನೂರು ಕೆಜಿ ಕಡವೆಯ ಹಸಿಮಾಂಸ, ಕಬ್ಬಿಣದ ಚಾಕು, ಮದ್ದು ತುಂಬಿದ ಪ್ಲಾಸ್ಟಿಕ್ ಚೀಲ, ಕಬ್ಬಿಣದ ಗುಂಡು, ಕಬ್ಬಿಣದ ಮೊಳೆ, ಕಬ್ಬಿಣದ ಬಾಲ್ಸ್ ತುಂಬಿದ ಪ್ಲಾಸ್ಟಿಕ್ ಡಬ್ಬಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.
ದಾಳಿಯಲ್ಲಿ ಉಪವಲಯ ಅರಣ್ಯ ಅಧಿಕಾರಿಗಳಾದ ಶ್ರೀನಿ ಆನಂದ್ ಗಸ್ತು ವನಪಾಲಕರಾದ ಯಲಗೂರಪ್ಪ ಗುಬ್ಬಿ ಶಿವಲಿಂಗಪ್ಪ, ಎಪಿ ಕ್ಯಾಂಪ್ ನ ಸಿಬ್ಬಂದಿ ಪಾಲ್ಗೊಂಡಿದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…