ಈ ವರ್ಷ ಕಡಿಮೆ ಮಳೆಯಾಗಿ ಬರಗಾಲದ ಛಾಯೆ ಇರುವದರಿಂದ ಅರಣ್ಯದೊಳಗಿನ ಪ್ರಾಣಿ-ಪಕ್ಷಿಗಳಿಗೆ ವನ್ಯಜೀವಿಗಳಿಗೆ ನೀರಿನ ಕೊರತೆ ಆಗದಂತೆ ನೀರುಗುಂಡಿ (ವಾಟರ್ ಹೋಲ್)ಗಳಿಗೆ ಜಲಪೂರಣ ಮಾಡುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ನೀಡಿದ್ದ ಸೂಚನೆಯಂತೆ, ಅರಣ್ಯ ಇಲಾಖೆ ಕೆರೆ, ಕಟ್ಟೆಗೆ ನೀರು ತುಂಬಿಸುವ ಕಾರ್ಯ ಆರಂಭಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಈಶ್ವರ್ ಖಂಡ್ರೆ, ಬಂಡೀಪುರ ರಕ್ಷಿತ ಅರಣ್ಯಕ್ಕೆ ಇತ್ತೀಚೆಗೆ ನಾನು ಭೇಟಿ ನೀಡಿದ್ದಾಗ, ಮಳೆಯ ಕೊರತೆಯಿಂದ ಬೇಸಿಗೆ ಪೂರ್ವದಲ್ಲೇ ಬಿರುಬಿಸಿಲು ಕಾಣಿಸಿಕೊಂಡಿದ್ದು, ನೀರಿಲ್ಲದೆ ಬರಿದಾಗುತ್ತಿರುವ ಜಲಗುಂಡಿಗಳನ್ನು ಕಂಡು ಕಳವಳ ವ್ಯಕ್ತಪಡಿಸಿದ್ದೆ. ಇದರಿಂದ ನೀರು ಅರಸಿ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬರುವ ಕಾರಣ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗುವ ಅಪಾಯವಿದ್ದು, ತಕ್ಷಣವೇ ರಾಜ್ಯದಾದ್ಯಂತ ಕಾನನದೊಳಗಿರುವ ಜಲ ಗುಂಡಿಗಳಿಗೆ ಮರುಪೂರಣ ಮಾಡಿ ಜಿಪಿಎಸ್ ವಿಡಿಯೋ ಮತ್ತು ಚಿತ್ರ ಕಳುಹಿಸುವಂತೆ ಸೂಚನೆ ನೀಡಿದ್ದೆ. ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾಗಿರುವ ವಲಯ ಅರಣ್ಯಾಧಿಕಾರಿಗಳು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಮುಖ್ಯ ಅರಣ್ಯ ಸಂರಕ್ಷಾಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬರುವ ಅರಣ್ಯದೊಳಗಿನ ಕೆರೆ, ಕಟ್ಟೆ ಸೇರಿದಂತೆ ಎಲ್ಲ ಜಲಗುಂಡಿಗಳಿಗೆ ಸೌರ ಪಂಪ್ ಸೆಟ್ ಅಳವಡಿಸಿದ ಕೊಳವೆ ಬಾವಿಗಳಿಂದ ಮತ್ತು ಟ್ಯಾಂಕರ್ ಮೂಲಕ ನೀರು ಹಾಯಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.
ಅರಣ್ಯದೊಳಗೆ ನಿಯಮಾನುಸಾರ ಅವಕಾಶ ಇರುವ ಕಡೆ ಕೊಳವೆ ಬಾವಿ ಕೊರೆಸಿ, ಸೌರ ಪಂಪ್ ಸೆಟ್ ಅಳವಡಿಸಿ ಅದಕ್ಕೆ ಆನೆ ದಾಳಿ ಮಾಡದಂತೆ ರೈಲ್ವೆ ಬ್ಯಾರಿಕೇಡ್ ಹಾಕಲು ಅಥವಾ ಇತರ ಯಾವುದೇ ಮೂಲಗಳಿಂದ ನೀರು ಹಾಯಿಸಲು ಮತ್ತು ಮೃಗಾಲಯಗಳಲ್ಲಿನ ಗುಂಡಿಗಳಿಗೆ ಟ್ಯಾಂಕರ್ ಮೂಲಕ ನೀರು ತುಂಬಿಸಲು ಸೂಚನೆ ನೀಡಿದ್ದೇನೆ ಎಂದರು.
ಒಟ್ಟಾರೆಯಾಗಿ ಮಳೆಗಾಲ ಆರಂಭವಾಗುವವರೆಗೆ ವನ್ಯಜೀವಿಗಳು ನೀರು ಹುಡುಕಿಕೊಂಡು ಅರಣ್ಯದಿಂದ ನಾಡಿಗೆ ಬಾರದಂತೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದ್ದೇನೆ ಎಂದು ಹೇಳಿದರು.
ಅದೇರೀತಿ ಪ್ರಾಣಿ ಪ್ರಿಯರು ನೀರಿನ ತೊಟ್ಟಿಗಳಿಗೆ ನೀರು ತುಂಬಿಸಿ ಪ್ರಾಣಿಗಳ ದಾಹ ತೀರಿಸುತ್ತಿರುವುದು ಶ್ಲಾಘನೀಯ.
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…