ಮಹಾ ಕುಂಭಮೇಳದಲ್ಲಿ ಸರ ಮಾರುತ್ತಿದ್ದ ಇಂದೂರಿನ ಕಣ್ಣಿನ ಚೆಲುವೆ ಮೊನಾಲಿಸಾ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ತಾಗಿ ಟ್ರೆಂಡಿಂಗ್ ಅಲ್ಲಿದ್ದಾಳೆ.
ಅತಿಲೋಕ ಸುಂದರಿ…. ಮೊನಾಲಿಸಾ, ಮಹಾಕುಂಭ ಮೇಳದಲ್ಲಿ ರುದ್ರಾಕ್ಷಿ ಹಾರಗಳನ್ನು ಮಾರುತ್ತಿರುವ ಮೋಹಕ ಕಣ್ಣುಗಳ ಸುಂದರಿ. ಆ ಕಂಗಳಿಗೆ ಸೋತವರೆಷ್ಟೋ, ಆ ನಗುವಿಗೆ ಮನಸೋತವರೆಷ್ಟೋ.
ಈಕೆಯ ಹೆಸರು ಮೊನಾಲಿಸ ಅಂತೆ ಸದ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ ನಲ್ಲಿರುವ ಹುಡುಗಿ.. ಈಕೆಯ ಕಣ್ಣುಗಳು ಆಕರ್ಷಕವಾಗಿವೆ. ಆಕೆಯ ನಗು ನಿಷ್ಕಲ್ಮಶವಾಗಿದೆ.
ಈಕೆ ಕೋಬ್ರಾ ಜಿಪ್ಸಿ ಜನಾಂಗದ ಹುಡುಗಿ. ಆಲ್ಮೋಸ್ಟ್ ಈ ಜನಾಂಗದ ಎಲ್ಲರಿಗೂ ಇದೇ ರೀತಿಯ ಕಣ್ಣುಗಳು ಇರುತ್ತವೆ. ಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಿರುವ ಈ ಹುಡುಗಿಯ ಜನಾಂಗದ ಹಿನ್ನೆಲೆಯನ್ನು ತಿಳಿದುಕೊಳ್ಳದೆ, ಸುಮ್ಮನೇ ಕಣ್ಣುಗಳನ್ನು ವರ್ಣಿಸುತ್ತಾ, ಇಂಥದ್ದೊಂದು ಜನಾಂಗ ಇದೆಯೇ ಎಂಬ ಸಣ್ಣ ಕುತೂಹಲವೂ ನಮ್ಮ ಜನಕ್ಕೆ ಇಲ್ಲವಾಗಿದೆ.
ಇದೀಗ ನೆಟ್ಟಿಗರ ಹಾವಳಿಯಿಂದಾಗಿ ಅವರು ಕುಂಭಮೇಳ ತೊರೆದಿದ್ದಾರೆ ಎನ್ನಲಾಗಿದೆ. ಮಧ್ಯ ಪ್ರದೇಶ ಮೂಲದ ಮೊನಾಲಿಸಾ ರುದ್ರಾಕ್ಷಿ ಮಾಲೆ, ಮಣಿಸರಗಳ ಮಾರಾಟಕ್ಕೆಂದು ಕುಟುಂಬಸ್ಥರೊಂದಿಗೆ ಬಂದಿದ್ದರು. ಆದರೆ ರುದ್ರಾಕ್ಷಿ, ಮಾಲೆ ಖರೀದಿಸಲು ಬರುತ್ತಿದ್ದವರೆಲ್ಲ ಆಕೆ ಜತೆಗೆ ಸೆಲ್ಫಿ, ಫೋಟೋಗೆ ಮುಗಿಬಿದ್ದು, ವ್ಯಾಪಾರಕ್ಕೂ ಅಡ್ಡಿ ಪಡಿಸಿದ್ದಾರೆ. ಹೀಗಾಗಿ ಆಕೆಯನ್ನು ಅವರ ತಂದೆ ಮನೆಗೆ ಕಳಿಸಿದ್ದಾರೆಂದು ಆಕೆಯ ತಂಗಿ ಹೇಳಿದ್ದಾರೆ.
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಇಂದು…
ನಮ್ಮ ನಿಷ್ಠೆ ಪ್ರಕೃತಿಗೆ....... ಹರಕೆ ಮತ್ತು ಶಾಪ, ಜೊತೆಗೆ ನಿನ್ನೆಯ ನಾಗರ ಪಂಚಮಿ...... ಎರಡೂ ನಮ್ಮ ನಡುವಿನ ಪ್ರಬಲ ನಂಬಿಕೆಗಳು.......…
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು ಮತ್ತು ಶಾಸಕರುಗಳ ಜೊತೆ ನಡೆಸಿದ ಸಭೆಯಲ್ಲಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…
ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…