ಮಹಾ ಕುಂಭಮೇಳದಲ್ಲಿ ಸರ ಮಾರುತ್ತಿದ್ದ ಇಂದೂರಿನ ಕಣ್ಣಿನ ಚೆಲುವೆ ಮೊನಾಲಿಸಾ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ತಾಗಿ ಟ್ರೆಂಡಿಂಗ್ ಅಲ್ಲಿದ್ದಾಳೆ.
ಅತಿಲೋಕ ಸುಂದರಿ…. ಮೊನಾಲಿಸಾ, ಮಹಾಕುಂಭ ಮೇಳದಲ್ಲಿ ರುದ್ರಾಕ್ಷಿ ಹಾರಗಳನ್ನು ಮಾರುತ್ತಿರುವ ಮೋಹಕ ಕಣ್ಣುಗಳ ಸುಂದರಿ. ಆ ಕಂಗಳಿಗೆ ಸೋತವರೆಷ್ಟೋ, ಆ ನಗುವಿಗೆ ಮನಸೋತವರೆಷ್ಟೋ.
ಈಕೆಯ ಹೆಸರು ಮೊನಾಲಿಸ ಅಂತೆ ಸದ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ ನಲ್ಲಿರುವ ಹುಡುಗಿ.. ಈಕೆಯ ಕಣ್ಣುಗಳು ಆಕರ್ಷಕವಾಗಿವೆ. ಆಕೆಯ ನಗು ನಿಷ್ಕಲ್ಮಶವಾಗಿದೆ.
ಈಕೆ ಕೋಬ್ರಾ ಜಿಪ್ಸಿ ಜನಾಂಗದ ಹುಡುಗಿ. ಆಲ್ಮೋಸ್ಟ್ ಈ ಜನಾಂಗದ ಎಲ್ಲರಿಗೂ ಇದೇ ರೀತಿಯ ಕಣ್ಣುಗಳು ಇರುತ್ತವೆ. ಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಿರುವ ಈ ಹುಡುಗಿಯ ಜನಾಂಗದ ಹಿನ್ನೆಲೆಯನ್ನು ತಿಳಿದುಕೊಳ್ಳದೆ, ಸುಮ್ಮನೇ ಕಣ್ಣುಗಳನ್ನು ವರ್ಣಿಸುತ್ತಾ, ಇಂಥದ್ದೊಂದು ಜನಾಂಗ ಇದೆಯೇ ಎಂಬ ಸಣ್ಣ ಕುತೂಹಲವೂ ನಮ್ಮ ಜನಕ್ಕೆ ಇಲ್ಲವಾಗಿದೆ.
ಇದೀಗ ನೆಟ್ಟಿಗರ ಹಾವಳಿಯಿಂದಾಗಿ ಅವರು ಕುಂಭಮೇಳ ತೊರೆದಿದ್ದಾರೆ ಎನ್ನಲಾಗಿದೆ. ಮಧ್ಯ ಪ್ರದೇಶ ಮೂಲದ ಮೊನಾಲಿಸಾ ರುದ್ರಾಕ್ಷಿ ಮಾಲೆ, ಮಣಿಸರಗಳ ಮಾರಾಟಕ್ಕೆಂದು ಕುಟುಂಬಸ್ಥರೊಂದಿಗೆ ಬಂದಿದ್ದರು. ಆದರೆ ರುದ್ರಾಕ್ಷಿ, ಮಾಲೆ ಖರೀದಿಸಲು ಬರುತ್ತಿದ್ದವರೆಲ್ಲ ಆಕೆ ಜತೆಗೆ ಸೆಲ್ಫಿ, ಫೋಟೋಗೆ ಮುಗಿಬಿದ್ದು, ವ್ಯಾಪಾರಕ್ಕೂ ಅಡ್ಡಿ ಪಡಿಸಿದ್ದಾರೆ. ಹೀಗಾಗಿ ಆಕೆಯನ್ನು ಅವರ ತಂದೆ ಮನೆಗೆ ಕಳಿಸಿದ್ದಾರೆಂದು ಆಕೆಯ ತಂಗಿ ಹೇಳಿದ್ದಾರೆ.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…