ಮಹಾ ಕುಂಭಮೇಳದಲ್ಲಿ ಸರ ಮಾರುತ್ತಿದ್ದ ಇಂದೂರಿನ ಕಣ್ಣಿನ ಚೆಲುವೆ ಮೊನಾಲಿಸಾ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ತಾಗಿ ಟ್ರೆಂಡಿಂಗ್ ಅಲ್ಲಿದ್ದಾಳೆ.
ಅತಿಲೋಕ ಸುಂದರಿ…. ಮೊನಾಲಿಸಾ, ಮಹಾಕುಂಭ ಮೇಳದಲ್ಲಿ ರುದ್ರಾಕ್ಷಿ ಹಾರಗಳನ್ನು ಮಾರುತ್ತಿರುವ ಮೋಹಕ ಕಣ್ಣುಗಳ ಸುಂದರಿ. ಆ ಕಂಗಳಿಗೆ ಸೋತವರೆಷ್ಟೋ, ಆ ನಗುವಿಗೆ ಮನಸೋತವರೆಷ್ಟೋ.
ಈಕೆಯ ಹೆಸರು ಮೊನಾಲಿಸ ಅಂತೆ ಸದ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ ನಲ್ಲಿರುವ ಹುಡುಗಿ.. ಈಕೆಯ ಕಣ್ಣುಗಳು ಆಕರ್ಷಕವಾಗಿವೆ. ಆಕೆಯ ನಗು ನಿಷ್ಕಲ್ಮಶವಾಗಿದೆ.
ಈಕೆ ಕೋಬ್ರಾ ಜಿಪ್ಸಿ ಜನಾಂಗದ ಹುಡುಗಿ. ಆಲ್ಮೋಸ್ಟ್ ಈ ಜನಾಂಗದ ಎಲ್ಲರಿಗೂ ಇದೇ ರೀತಿಯ ಕಣ್ಣುಗಳು ಇರುತ್ತವೆ. ಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಿರುವ ಈ ಹುಡುಗಿಯ ಜನಾಂಗದ ಹಿನ್ನೆಲೆಯನ್ನು ತಿಳಿದುಕೊಳ್ಳದೆ, ಸುಮ್ಮನೇ ಕಣ್ಣುಗಳನ್ನು ವರ್ಣಿಸುತ್ತಾ, ಇಂಥದ್ದೊಂದು ಜನಾಂಗ ಇದೆಯೇ ಎಂಬ ಸಣ್ಣ ಕುತೂಹಲವೂ ನಮ್ಮ ಜನಕ್ಕೆ ಇಲ್ಲವಾಗಿದೆ.
ಇದೀಗ ನೆಟ್ಟಿಗರ ಹಾವಳಿಯಿಂದಾಗಿ ಅವರು ಕುಂಭಮೇಳ ತೊರೆದಿದ್ದಾರೆ ಎನ್ನಲಾಗಿದೆ. ಮಧ್ಯ ಪ್ರದೇಶ ಮೂಲದ ಮೊನಾಲಿಸಾ ರುದ್ರಾಕ್ಷಿ ಮಾಲೆ, ಮಣಿಸರಗಳ ಮಾರಾಟಕ್ಕೆಂದು ಕುಟುಂಬಸ್ಥರೊಂದಿಗೆ ಬಂದಿದ್ದರು. ಆದರೆ ರುದ್ರಾಕ್ಷಿ, ಮಾಲೆ ಖರೀದಿಸಲು ಬರುತ್ತಿದ್ದವರೆಲ್ಲ ಆಕೆ ಜತೆಗೆ ಸೆಲ್ಫಿ, ಫೋಟೋಗೆ ಮುಗಿಬಿದ್ದು, ವ್ಯಾಪಾರಕ್ಕೂ ಅಡ್ಡಿ ಪಡಿಸಿದ್ದಾರೆ. ಹೀಗಾಗಿ ಆಕೆಯನ್ನು ಅವರ ತಂದೆ ಮನೆಗೆ ಕಳಿಸಿದ್ದಾರೆಂದು ಆಕೆಯ ತಂಗಿ ಹೇಳಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…