Categories: Trending

ಕಣ್ಣಿನ ಚೆಲುವೆ ಮೊನಾಲಿಸಾ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ಟ್ರೆಂಡಿಂಗ್….ನೆಟ್ಟಿಗರ ಹಾವಳಿಯಿಂದ ಕುಂಭಮೇಳ ತೊರೆದ ಮೊನಾಲಿಸಾ…!

ಮಹಾ ಕುಂಭಮೇಳದಲ್ಲಿ ಸರ ಮಾರುತ್ತಿದ್ದ ಇಂದೂರಿನ ಕಣ್ಣಿನ ಚೆಲುವೆ ಮೊನಾಲಿಸಾ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ತಾಗಿ ಟ್ರೆಂಡಿಂಗ್ ಅಲ್ಲಿದ್ದಾಳೆ.

ಅತಿಲೋಕ ಸುಂದರಿ…. ಮೊನಾಲಿಸಾ, ಮಹಾಕುಂಭ ಮೇಳದಲ್ಲಿ ರುದ್ರಾಕ್ಷಿ ಹಾರಗಳನ್ನು ಮಾರುತ್ತಿರುವ ಮೋಹಕ ಕಣ್ಣುಗಳ ಸುಂದರಿ. ಆ ಕಂಗಳಿಗೆ ಸೋತವರೆಷ್ಟೋ, ಆ ನಗುವಿಗೆ ಮನಸೋತವರೆಷ್ಟೋ.

ಈಕೆಯ ಹೆಸರು ಮೊನಾಲಿಸ ಅಂತೆ ಸದ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ ನಲ್ಲಿರುವ ಹುಡುಗಿ.. ಈಕೆಯ ಕಣ್ಣುಗಳು ಆಕರ್ಷಕವಾಗಿವೆ. ಆಕೆಯ ನಗು ನಿಷ್ಕಲ್ಮಶವಾಗಿದೆ.

ಈಕೆ ಕೋಬ್ರಾ ಜಿಪ್ಸಿ ಜನಾಂಗದ ಹುಡುಗಿ. ಆಲ್ಮೋಸ್ಟ್ ಈ ಜನಾಂಗದ ಎಲ್ಲರಿಗೂ ಇದೇ ರೀತಿಯ ಕಣ್ಣುಗಳು ಇರುತ್ತವೆ. ಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಿರುವ ಈ ಹುಡುಗಿಯ ಜನಾಂಗದ ಹಿನ್ನೆಲೆಯನ್ನು ತಿಳಿದುಕೊಳ್ಳದೆ, ಸುಮ್ಮನೇ ಕಣ್ಣುಗಳನ್ನು ವರ್ಣಿಸುತ್ತಾ, ಇಂಥದ್ದೊಂದು ಜನಾಂಗ ಇದೆಯೇ ಎಂಬ ಸಣ್ಣ ಕುತೂಹಲವೂ ನಮ್ಮ ಜನಕ್ಕೆ ಇಲ್ಲವಾಗಿದೆ.

ಈ ರೀಲ್ಸ್,  ಟ್ರೆಂಡಿಂಗ್, ಪಬ್ಲಿಸಿಟಿ ಇದ್ಯಾವುದರ ಇಮೇಜ್ ಕೂಡ ಇರದ ಈ ಹುಡುಗಿಗೆ ಒಬ್ಬ ವ್ಯಕ್ತಿ 5000 ಕೊಡಲು ಹೋದಾಗ ಆಕೆ ಅದನ್ನು ತಿರಸ್ಕರಿಸಿ ತನ್ನ ಬಳಿ ಏನಾದರು ಕೊಂಡರಷ್ಟೆ ಹಣ ಪಡೆಯುತ್ತೇನೆ ಅನ್ನುತ್ತಾಳೆ. ಕೊನೆಗೆ ಆ ವ್ಯಕ್ತಿ ರುದ್ರಾಕ್ಷಿ ಹಾರ ಪಡೆದು 1000 ಕೊಡುತ್ತಾನೆ. ಆಕೆಯ ಪ್ರಾಮಾಣಿಕತೆ, ಆಕೆಯ ಈ ವ್ಯಕ್ತಿತ್ವ ಮತ್ತು ವೃತ್ತಿ ಧರ್ಮ ಮಾತ್ರ ಎಲ್ಲರಿಗೂ ಇಷ್ಟವಾಗಿದೆ….

ಇದೀಗ ನೆಟ್ಟಿಗರ ಹಾವಳಿಯಿಂದಾಗಿ ಅವರು ಕುಂಭಮೇಳ ತೊರೆದಿದ್ದಾರೆ ಎನ್ನಲಾಗಿದೆ. ಮಧ್ಯ ಪ್ರದೇಶ ಮೂಲದ ಮೊನಾಲಿಸಾ ರುದ್ರಾಕ್ಷಿ ಮಾಲೆ, ಮಣಿಸರಗಳ ಮಾರಾಟಕ್ಕೆಂದು ಕುಟುಂಬಸ್ಥರೊಂದಿಗೆ ಬಂದಿದ್ದರು. ಆದರೆ ರುದ್ರಾಕ್ಷಿ, ಮಾಲೆ ಖರೀದಿಸಲು ಬರುತ್ತಿದ್ದವರೆಲ್ಲ ಆಕೆ ಜತೆಗೆ ಸೆಲ್ಫಿ, ಫೋಟೋಗೆ ಮುಗಿಬಿದ್ದು, ವ್ಯಾಪಾರಕ್ಕೂ ಅಡ್ಡಿ ಪಡಿಸಿದ್ದಾರೆ. ಹೀಗಾಗಿ ಆಕೆಯನ್ನು ಅವರ ತಂದೆ ಮನೆಗೆ ಕಳಿಸಿದ್ದಾರೆಂದು ಆಕೆಯ ತಂಗಿ ಹೇಳಿದ್ದಾರೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

14 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

21 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

22 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago