Categories: Trending

ಕಣ್ಣಿನ ಚೆಲುವೆ ಮೊನಾಲಿಸಾ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ಟ್ರೆಂಡಿಂಗ್….ನೆಟ್ಟಿಗರ ಹಾವಳಿಯಿಂದ ಕುಂಭಮೇಳ ತೊರೆದ ಮೊನಾಲಿಸಾ…!

ಮಹಾ ಕುಂಭಮೇಳದಲ್ಲಿ ಸರ ಮಾರುತ್ತಿದ್ದ ಇಂದೂರಿನ ಕಣ್ಣಿನ ಚೆಲುವೆ ಮೊನಾಲಿಸಾ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ತಾಗಿ ಟ್ರೆಂಡಿಂಗ್ ಅಲ್ಲಿದ್ದಾಳೆ.

ಅತಿಲೋಕ ಸುಂದರಿ…. ಮೊನಾಲಿಸಾ, ಮಹಾಕುಂಭ ಮೇಳದಲ್ಲಿ ರುದ್ರಾಕ್ಷಿ ಹಾರಗಳನ್ನು ಮಾರುತ್ತಿರುವ ಮೋಹಕ ಕಣ್ಣುಗಳ ಸುಂದರಿ. ಆ ಕಂಗಳಿಗೆ ಸೋತವರೆಷ್ಟೋ, ಆ ನಗುವಿಗೆ ಮನಸೋತವರೆಷ್ಟೋ.

ಈಕೆಯ ಹೆಸರು ಮೊನಾಲಿಸ ಅಂತೆ ಸದ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ ನಲ್ಲಿರುವ ಹುಡುಗಿ.. ಈಕೆಯ ಕಣ್ಣುಗಳು ಆಕರ್ಷಕವಾಗಿವೆ. ಆಕೆಯ ನಗು ನಿಷ್ಕಲ್ಮಶವಾಗಿದೆ.

ಈಕೆ ಕೋಬ್ರಾ ಜಿಪ್ಸಿ ಜನಾಂಗದ ಹುಡುಗಿ. ಆಲ್ಮೋಸ್ಟ್ ಈ ಜನಾಂಗದ ಎಲ್ಲರಿಗೂ ಇದೇ ರೀತಿಯ ಕಣ್ಣುಗಳು ಇರುತ್ತವೆ. ಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಿರುವ ಈ ಹುಡುಗಿಯ ಜನಾಂಗದ ಹಿನ್ನೆಲೆಯನ್ನು ತಿಳಿದುಕೊಳ್ಳದೆ, ಸುಮ್ಮನೇ ಕಣ್ಣುಗಳನ್ನು ವರ್ಣಿಸುತ್ತಾ, ಇಂಥದ್ದೊಂದು ಜನಾಂಗ ಇದೆಯೇ ಎಂಬ ಸಣ್ಣ ಕುತೂಹಲವೂ ನಮ್ಮ ಜನಕ್ಕೆ ಇಲ್ಲವಾಗಿದೆ.

ಈ ರೀಲ್ಸ್,  ಟ್ರೆಂಡಿಂಗ್, ಪಬ್ಲಿಸಿಟಿ ಇದ್ಯಾವುದರ ಇಮೇಜ್ ಕೂಡ ಇರದ ಈ ಹುಡುಗಿಗೆ ಒಬ್ಬ ವ್ಯಕ್ತಿ 5000 ಕೊಡಲು ಹೋದಾಗ ಆಕೆ ಅದನ್ನು ತಿರಸ್ಕರಿಸಿ ತನ್ನ ಬಳಿ ಏನಾದರು ಕೊಂಡರಷ್ಟೆ ಹಣ ಪಡೆಯುತ್ತೇನೆ ಅನ್ನುತ್ತಾಳೆ. ಕೊನೆಗೆ ಆ ವ್ಯಕ್ತಿ ರುದ್ರಾಕ್ಷಿ ಹಾರ ಪಡೆದು 1000 ಕೊಡುತ್ತಾನೆ. ಆಕೆಯ ಪ್ರಾಮಾಣಿಕತೆ, ಆಕೆಯ ಈ ವ್ಯಕ್ತಿತ್ವ ಮತ್ತು ವೃತ್ತಿ ಧರ್ಮ ಮಾತ್ರ ಎಲ್ಲರಿಗೂ ಇಷ್ಟವಾಗಿದೆ….

ಇದೀಗ ನೆಟ್ಟಿಗರ ಹಾವಳಿಯಿಂದಾಗಿ ಅವರು ಕುಂಭಮೇಳ ತೊರೆದಿದ್ದಾರೆ ಎನ್ನಲಾಗಿದೆ. ಮಧ್ಯ ಪ್ರದೇಶ ಮೂಲದ ಮೊನಾಲಿಸಾ ರುದ್ರಾಕ್ಷಿ ಮಾಲೆ, ಮಣಿಸರಗಳ ಮಾರಾಟಕ್ಕೆಂದು ಕುಟುಂಬಸ್ಥರೊಂದಿಗೆ ಬಂದಿದ್ದರು. ಆದರೆ ರುದ್ರಾಕ್ಷಿ, ಮಾಲೆ ಖರೀದಿಸಲು ಬರುತ್ತಿದ್ದವರೆಲ್ಲ ಆಕೆ ಜತೆಗೆ ಸೆಲ್ಫಿ, ಫೋಟೋಗೆ ಮುಗಿಬಿದ್ದು, ವ್ಯಾಪಾರಕ್ಕೂ ಅಡ್ಡಿ ಪಡಿಸಿದ್ದಾರೆ. ಹೀಗಾಗಿ ಆಕೆಯನ್ನು ಅವರ ತಂದೆ ಮನೆಗೆ ಕಳಿಸಿದ್ದಾರೆಂದು ಆಕೆಯ ತಂಗಿ ಹೇಳಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

15 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

20 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

2 days ago