ಕಣ್ಣು ಕಾಣದಿದ್ದರೂ ರುಚಿ ರುಚಿ, ಘಮಘಮಿಸುವ ಅಡುಗೆ ಮಾಡುವ ಯೂಟ್ಯೂಬರ್: ಆ ಮಹಿಳೆ ಯಾರು, ಯೂಟ್ಯೂಬ್ ಚಾನೆಲ್ ಹೆಸರೇನು ಎಂಬ ಮಾಹಿತಿ ಇಲ್ಲಿದೆ…

ಕುಣಿಯೋದಕ್ಕೆ ಕೈಲಾಗದವನು ನೆಲ ಡೊಂಕು‌ ಎಂದು ಹೇಳಿ ನುಣಿಚಿಕೊಳ್ಳುವುದುಂಟು, ಆದರೆ ಸಾಧನೆ ಮಾಡುವ ಛಲ ಇದ್ದವನು ಯಾವ ಕುಂಟು ನೆಪ ಹೇಳದೇ ಸಾಧನೆ ಮಾಡಿ‌ ತೋರಿಸುತ್ತಾನೆ.

ಮನುಷ್ಯನಿಗೆ ಪಂಚೇಂದ್ರಿಯಗಳು ಅತಿ ಮುಖ್ಯ, ದೇಹದಲ್ಲಿ ಯಾವುದಾದರೂ ಒಂದು ಪಂಚೇಂದ್ರಿಯವನ್ನ ಶಾಶ್ವತವಾಗಿ ಕಳೆದುಕೊಂಡರೂ ಜೀವನದಲ್ಲಿ ತುಂಬಾ‌ ಸಮಸ್ಯೆ ಅನುಭವಿಸಬೇಕಾಗುತ್ತದೆ. ಪಂಚೇಂದ್ರಿಯ ಲೋಪಕ್ಕೆ ಒಳಗಾಗಿರುವವರು ಜೀವನದಲ್ಲಿ ಕುಗ್ಗಿ ಹೋಗಿರುತ್ತಾರೆ. ಅದರಲ್ಲಿ ಕೆಲವರು ಕುಗ್ಗದೇ, ಜಗ್ಗದೇ ಎಲ್ಲವನ್ನೂ ಸವಾಲಾಗಿ ಸ್ವೀಕರಿಸಿ ಹಲವು ಮಹತ್ತರವಾದ ಸಾಧನೆಗಳನ್ನು ಮಾಡಿ ಇತರರಿಗೂ ಸ್ಫೂರ್ತಿಯಾಗಿ ನಿಂತಿರುವ ಹಲವಾರು ಉದಾಹರಣೆ ನಮ್ಮ ಕಣ್ಣು ಮುಂದಿವೆ.

ಎಲ್ಲವನ್ನೂ ಮೆಟ್ಟಿ ನಿಂತು ಸಾಧನೆ ಮಾಡಿರುವವರ ಸಾಲಿಗೆ ಸೇರಿರುವ ದೊಡ್ಡಬಳ್ಳಾಪುರ ನಗರದ ಅಂಧ ಮಹಿಳೆ ಭೂಮಿಕಾ…

ಭೂಮಿಕಾ ಅವರಿಗೆ ಕಣ್ಣು ಕಾಣದಿದ್ದರೂ ರುಚಿ ರುಚಿಯಾದ, ಘಮಘಮಿಸುವ ಅಡುಗೆ ಮಾಡುತ್ತಾರೆ. ಅಡುಗೆ ಮಾಡುವುದನ್ನು ತನ್ನ ಪತಿಯ ಬಳಿ ವಿಡಿಯೋ ಮಾಡಿಸಿ ನಂತರ ಯೂಟ್ಯೂಬ್ ಗೆ ಅಪ್ಲೋಡ್ ಮಾಡುತ್ತಾರೆ. ಇದೂವರೆಗೆ ಸುಮಾರು ಸಾವಿರ ಅಡುಗೆ ಮಾಡಿರುವ ವಿಡಿಯೋಗಳನ್ನು ಭೂಮಿಕಾ ಅವರು ತಮ್ಮ ಯೂಟ್ಯೂಬ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ.

ಭೂಮಿಕಾ ಅವರು ದೃಷ್ಟಿ ಕಳೆದುಕೊಂಡಿದ್ದು ಹೇಗೆ?

ಭೂಮಿಕಾ ಅವರು ಹುಟ್ಟಿನಿಂದಲೇ ಅಂಧತ್ವ ಹೊಂದಿದವರಲ್ಲ. ಮದುವೆಯಾಗಿ 10 ವರ್ಷಗಳ ನಂತರ ತಮ್ಮ ದೃಷ್ಟಿ ಕಳೆದುಕೊಂಡವರು. 5ಲಕ್ಷ ಜನರಲ್ಲಿ ಒಬ್ಬರಿಗೆ ಮಾತ್ರ ಬರುವ ಅಪರೂಪದ ಕಣ್ಣಿನ ಕಾಯಿಲೆ ‘ಆಪ್ಟಿಕಲ್ ನೂರೈಟಿಸ್’ ಇವರ ಅಂಧತ್ವಕ್ಕೆ ಕಾರಣವಾಗಿದೆ.

2010ರಲ್ಲಿ ಸಣ್ಣದಾಗಿ ತಲೆನೋವು ಬಂದಿರುತ್ತದೆ. ತಲೆನೋವಿಗೆ ಚಿಕಿತ್ಸೆ ಪಡೆಯಲು ಹೋದಾಗ ಕಣ್ಣಿನ ಸಮಸ್ಯೆ ಇರುವ ಬಗ್ಗೆ ವೈದ್ಯರು ಕುಟುಂಬದವರಿಗೆ ತಿಳಿಸುತ್ತಾರೆ. ನಂತರ ನಾನಾ ಕಡೆ, ವಿವಿಧ ಕಣ್ಣಿನ ಪರೀಕ್ಷೆ, ಆರ್ಯುವೇದ ಪರೀಕ್ಷೆಗಳನ್ನು ತಜ್ಞ ವೈದ್ಯರಿಂದ ಮಾಡಿಸಿಕೊಂಡರು ಸರಿಹೋಗದ ಕಾಯಿಲೆ.

ಹಂತಹಂತವಾಗಿ 2018ರಲ್ಲಿ ಸಂಪೂರ್ಣವಾಗಿ ತಮ್ಮ ದೃಷ್ಟಿಯನ್ನು ಕಳೆದುಕೊಂಡು ಶಾಶ್ವತ ಕತ್ತಲ ಲೋಕಕ್ಕೆ ಬರುತ್ತಾರೆ. ಕಣ್ಣು ಕಳೆದುಕೊಂಡ ಭೂಮಿಕಾ ಅವರು ಮಾನಸಿಕವಾಗಿ ವ್ಯಥೆಗೊಳಗಾಗಿ ಜೀವನ ಸಾಕೆನಿಸುವ ಮಟ್ಟಕ್ಕೆ ಚಿಂತನೆ ಮಾಡುತ್ತಾರೆ. ಆಗ ಭೂಮಿಕಾ ಕುಟುಂಬ ಕುಗ್ಗಿ ಹೋಗಿದ್ದ ಜೀವಕ್ಕೆ ಆತ್ಮಸ್ಥೈರ್ಯ ತುಂಬಿ ಖಿನ್ನತೆಯಿಂದ ಹೊರತಂದು ಖುಷಿಯಾಗಿಡುತ್ತಾರೆ.

ಆಗ ಪತಿ ಸುದರ್ಶನ್ ಹಾಗೂ ಅತ್ತೆ, ಮಾವ ಸಹಕಾರದಿಂದ ಅಂಧತ್ವ ನಡುವೆಯೂ ಚಟುವಟಿಕೆಯಿಂದ ಇರುವ ತರಬೇತಿಯನ್ನು ಪಡೆದುಕೊಂಡರು. ನಂತರ ಕುಟುಂಬಸ್ಥರ ಸಲಹೆ ಮೇರೆಗೆ ಕುಕ್ಕಿಂಗ್ ಯೂಟ್ಯೂಬ್ ಚಾನೆಲ್ ಪ್ರಾರಂಭ ಮಾಡಿ ಒಂದಷ್ಟು ವೀಕ್ಷಕರನ್ನ ಪಡೆದು ಅದರಿಂದ ಆದಾಯ ಗಳಿಸುವ ಮಟ್ಟಕ್ಕೆ ಬಂದಿದ್ದಾರೆ.

ಅಡುಗೆ ಕೋಣೆಯಲ್ಲಿ ಯಾವ ಪದಾರ್ಥ, ಯಾವ ವಸ್ತು ಎಲ್ಲಿರುತ್ತೆ ಎಂಬುದು ಚೆನ್ನಾಗಿ ಗೊತ್ತು, ಚಕಚಕ ಅಂತಾ ತರಕಾರಿ ಕಟ್ ಮಾಡುತ್ತಾರೆ, ಲವಲವಿಕೆಯಿಂದ ಅಡುಗೆ ಮನೆಯಲ್ಲಿ ಓಡಾಡುತ್ತಾರೆ. ತರಕಾರಿ, ಹಣ್ಣುಗಳನ್ನು ಕೈಗಳಿಂದ ಸ್ಪರ್ಶಿಸಿ ಹಾಗೂ ವಾಸನೆ ನೋಡಿ ಕೊಳೆತು ಹೋಗಿದಿಯೋ, ಅಥವಾ ಚೆನ್ನಾಗಿದಿಯೋ ಎಂಬುದು ತಿಳಿದುಕೊಳ್ಳುತ್ತಾರೆ. ಚೆನ್ನಾಗಿದ್ದರೆ ಮಾತ್ರ ಅಡುಗೆಗೆ ಬಳಸುತ್ತಾರೆ.

ಅಡುಗೆ ಕೋಣೆಯನ್ನು ಶುಚಿಯಾಗಿ ಇಟ್ಟಿಕೊಳ್ಳುವದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ, ಅಡುಗೆ ಮಾಡುವುದಕ್ಕೂ ಮುನ್ನ ಅಡುಗೆ ಮಾಡುವ ಗೌನ್ ಧರಿಸುವ ಇವರ ವಿಶೇಷತೆ. ಬಹಳ ಸುಲಭವಾಗಿ ಮತ್ತು ಕಡಿಮೆ ಪದಾರ್ಥಗಳಿಂದ ಆಡುಗೆ ಮಾಡುತ್ತಾರೆ.

ಬ್ಯಾಚುಲರ್ಸ್ ಯುವಕ ಯುವತಿಯರು ಸುಲಭವಾಗಿ ಸ್ವತಃ ತಾವೇ ಅಡುಗೆ ಮಾಡಿಕೊಳ್ಳುಲು ಅನುಕೂಲವಾಗುಂತೆ ಅಡುಗೆ ಮಾಡುವ ಮೂಲಕ‌ ಸಲಹೆ ನೀಡುತ್ತಾರೆ.

ಭೂಮಿಕಾ ಅವರು ಮಾಡಿದಂತಹ ಅಡುಗೆ, ವಿಧ ವಿಧ ಅಡುಗೆಗಳನ್ನು ಮಾಡುವುದು ಹೇಗೆ ಎಂಬುದನ್ನು ತಿಳಿದುಕೊಳ್ಳಲು ‘ಭೂಮಿಕಾ ಕಿಚನ್’ ಯೂಟ್ಯೂಬ್ ಚಾನೆಲ್ ನ್ನು ವೀಕ್ಷಿಸಿ, ಸಬ್ ಸ್ಕ್ರೈಬ್ ಆಗಿ ಭೂಮಿಕಾ ಅವರನ್ನು ಪ್ರೋತ್ಸಾಹಿಸಬೇಕಾಗಿದೆ.

ಒಟ್ಟಾರೆ ಇವರ ಸಾಧನೆಗೆ ನಾವೆಲ್ಲರೂ ಮೆಚ್ಚುಗೆ ವ್ಯಕ್ತಪಡಿಸಲೇಬೇಕಾಗಿದೆ. ಕೆಲವರು ಅಡುಗೆ ಮನೆಗೆ ಹೋಗೋದೆ ಕಷ್ಟ. ಅಂತಹವರು ಭೂಮಿಕಾ ಕಿಚನ್ ನೋಡಿದರೆ ಖಂಡಿತ ಅಡುಗೆ ಮಾಡಲು ಮುಂದಾಗುತ್ತಾರೆ ಆದ್ದರಿಂದ ಭೂಮಿಕಾ ಅವರು ಎಲ್ಲರಿಗೂ ಸ್ಫೂರ್ತಿದಾಯಕ ಮಹಿಳೆಯಾಗಿದ್ದಾರೆ.

Ramesh Babu

Journalist

Recent Posts

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

4 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

4 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

11 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

22 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago