ಕಣ್ಮನ ಸೆಳೆದ ಮೈನವಿರೇಳಿಸುವ ಒನಕೆ ನಾಟ್ಯ ಉತ್ಸವ

ನಗರದಲ್ಲಿ ಶ್ರೀ ಸಪ್ತಮಾತೃಕ ಮಾರಿಯಮ್ಮ ದೇವತೆಯ ಕರಗ ಮಹೋತ್ಸವದ ಅಂಗವಾಗಿ ಕರಗ ದೇವಾಲಯದ ಸಮೀಪದ ಏಳು ಸುತ್ತಿನ ಕೋಟೆ ಆವರಣದಲ್ಲಿ ಒನಕೆ ನಾಟ್ಯ ಮತ್ತು ವಸಂತೋತ್ಸವ ಆಚರಣೆಯು ಬಹಳ ಸಂಭ್ರಮ, ಸಡಗರದಿಂದ ನಡೆಯಿತು.

ಕರಗ ಹೊತ್ತಿದ್ದ ಪೂಜಾರಿ ಮುನಿರತ್ನಂ ಬಾಲಾಜಿ ಅವರು ಪೂಜೆ ಸಲ್ಲಿಸಿ, ಒನಕೆ ಹಾಗೂ ಓಕುಳಿ ನೀರಿನ ತಪ್ಪಲೆಯನ್ನು ತಲೆಯ ಮೇಲಿಟ್ಟುಗೊಂಡು ನೀಡಿದ ನಾಟ್ಯ ಪ್ರದರ್ಶನ ನೆರೆದಿದ್ದ ಭಕ್ತಾದಿಗಳನ್ನು ರೋಮಾಂಚನಗೊಳಿಸಿತು.

ದೇವಾಲಯ ಹಾಗೂ ಸುತ್ತಮುತ್ತಲ ಮನೆಗಳ ಮೇಲಿಂದ ನೂರಾರು ಭಕ್ತರು ಮೈನವಿರೇಳಿಸುವ ನಾಟ್ಯವನ್ನು ಕಣ್ತುಂಬಿಕೊಂಡರು.

ಇದರೊಂದಿಗೆ ವಹ್ನಿಕುಲ ಮತಸ್ಥರು ಓಕುಳಿ ನೀರನ್ನು ಎರಚುತ್ತಾ, ಮಡಿಕೆ ಹೊಡೆಯುವ ವಸಂತೋತ್ಸವ ಆಚರಣೆಯನ್ನು ಉತ್ಸಾಹ ಸಂಭ್ರಮಗಳಿಂದ ಆಚರಿಸಿದರು.

ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಮಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀ ಸಪ್ತಮಾತೃಕ ಮಾರಿಯಮ್ಮ ದೇವತೆಯ ಕರಗ ಮಹೋತ್ಸವ ನಗರದಲ್ಲಿ ವಿಜೃಂಭಣೆಯಿಂದ ನಡೆದಿದ್ದು, ಮೇ.5ರಂದು ಆರಂಭವಾದ ಧಾರ್ಮಿಕ ಕಾರ್ಯಭಗಳು ಮೇ.20ರಂದು ಮಾರಿಯಮ್ಮ ದೇವಿ, ಪಿಳೇಕಮ್ಮ ದೇವಿ, ಶ್ರೀ ಮುತ್ಯಾಲಮ್ಮ ದೇವಿ, ಶ್ರೀ ದೊಡ್ಡಮ್ಮ ದೇವಿಗೆ ಆರತಿಗಳನ್ನು ಬೆಳಗುವ ಮೂಲಕ ಸಮಾರೋಪಗೊಳ್ಳಲಿವೆ.

Ramesh Babu

Journalist

Recent Posts

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

14 minutes ago

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

10 hours ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

11 hours ago

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

16 hours ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

18 hours ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

22 hours ago