ನಗರದಲ್ಲಿ ಶ್ರೀ ಸಪ್ತಮಾತೃಕ ಮಾರಿಯಮ್ಮ ದೇವತೆಯ ಕರಗ ಮಹೋತ್ಸವದ ಅಂಗವಾಗಿ ಕರಗ ದೇವಾಲಯದ ಸಮೀಪದ ಏಳು ಸುತ್ತಿನ ಕೋಟೆ ಆವರಣದಲ್ಲಿ ಒನಕೆ ನಾಟ್ಯ ಮತ್ತು ವಸಂತೋತ್ಸವ ಆಚರಣೆಯು ಬಹಳ ಸಂಭ್ರಮ, ಸಡಗರದಿಂದ ನಡೆಯಿತು.
ಕರಗ ಹೊತ್ತಿದ್ದ ಪೂಜಾರಿ ಮುನಿರತ್ನಂ ಬಾಲಾಜಿ ಅವರು ಪೂಜೆ ಸಲ್ಲಿಸಿ, ಒನಕೆ ಹಾಗೂ ಓಕುಳಿ ನೀರಿನ ತಪ್ಪಲೆಯನ್ನು ತಲೆಯ ಮೇಲಿಟ್ಟುಗೊಂಡು ನೀಡಿದ ನಾಟ್ಯ ಪ್ರದರ್ಶನ ನೆರೆದಿದ್ದ ಭಕ್ತಾದಿಗಳನ್ನು ರೋಮಾಂಚನಗೊಳಿಸಿತು.
ದೇವಾಲಯ ಹಾಗೂ ಸುತ್ತಮುತ್ತಲ ಮನೆಗಳ ಮೇಲಿಂದ ನೂರಾರು ಭಕ್ತರು ಮೈನವಿರೇಳಿಸುವ ನಾಟ್ಯವನ್ನು ಕಣ್ತುಂಬಿಕೊಂಡರು.
ಇದರೊಂದಿಗೆ ವಹ್ನಿಕುಲ ಮತಸ್ಥರು ಓಕುಳಿ ನೀರನ್ನು ಎರಚುತ್ತಾ, ಮಡಿಕೆ ಹೊಡೆಯುವ ವಸಂತೋತ್ಸವ ಆಚರಣೆಯನ್ನು ಉತ್ಸಾಹ ಸಂಭ್ರಮಗಳಿಂದ ಆಚರಿಸಿದರು.
ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಮಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀ ಸಪ್ತಮಾತೃಕ ಮಾರಿಯಮ್ಮ ದೇವತೆಯ ಕರಗ ಮಹೋತ್ಸವ ನಗರದಲ್ಲಿ ವಿಜೃಂಭಣೆಯಿಂದ ನಡೆದಿದ್ದು, ಮೇ.5ರಂದು ಆರಂಭವಾದ ಧಾರ್ಮಿಕ ಕಾರ್ಯಭಗಳು ಮೇ.20ರಂದು ಮಾರಿಯಮ್ಮ ದೇವಿ, ಪಿಳೇಕಮ್ಮ ದೇವಿ, ಶ್ರೀ ಮುತ್ಯಾಲಮ್ಮ ದೇವಿ, ಶ್ರೀ ದೊಡ್ಡಮ್ಮ ದೇವಿಗೆ ಆರತಿಗಳನ್ನು ಬೆಳಗುವ ಮೂಲಕ ಸಮಾರೋಪಗೊಳ್ಳಲಿವೆ.
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…