ನಗರದಲ್ಲಿ ಶ್ರೀ ಸಪ್ತಮಾತೃಕ ಮಾರಿಯಮ್ಮ ದೇವತೆಯ ಕರಗ ಮಹೋತ್ಸವದ ಅಂಗವಾಗಿ ಕರಗ ದೇವಾಲಯದ ಸಮೀಪದ ಏಳು ಸುತ್ತಿನ ಕೋಟೆ ಆವರಣದಲ್ಲಿ ಒನಕೆ ನಾಟ್ಯ ಮತ್ತು ವಸಂತೋತ್ಸವ ಆಚರಣೆಯು ಬಹಳ ಸಂಭ್ರಮ, ಸಡಗರದಿಂದ ನಡೆಯಿತು.
ಕರಗ ಹೊತ್ತಿದ್ದ ಪೂಜಾರಿ ಮುನಿರತ್ನಂ ಬಾಲಾಜಿ ಅವರು ಪೂಜೆ ಸಲ್ಲಿಸಿ, ಒನಕೆ ಹಾಗೂ ಓಕುಳಿ ನೀರಿನ ತಪ್ಪಲೆಯನ್ನು ತಲೆಯ ಮೇಲಿಟ್ಟುಗೊಂಡು ನೀಡಿದ ನಾಟ್ಯ ಪ್ರದರ್ಶನ ನೆರೆದಿದ್ದ ಭಕ್ತಾದಿಗಳನ್ನು ರೋಮಾಂಚನಗೊಳಿಸಿತು.
ದೇವಾಲಯ ಹಾಗೂ ಸುತ್ತಮುತ್ತಲ ಮನೆಗಳ ಮೇಲಿಂದ ನೂರಾರು ಭಕ್ತರು ಮೈನವಿರೇಳಿಸುವ ನಾಟ್ಯವನ್ನು ಕಣ್ತುಂಬಿಕೊಂಡರು.
ಇದರೊಂದಿಗೆ ವಹ್ನಿಕುಲ ಮತಸ್ಥರು ಓಕುಳಿ ನೀರನ್ನು ಎರಚುತ್ತಾ, ಮಡಿಕೆ ಹೊಡೆಯುವ ವಸಂತೋತ್ಸವ ಆಚರಣೆಯನ್ನು ಉತ್ಸಾಹ ಸಂಭ್ರಮಗಳಿಂದ ಆಚರಿಸಿದರು.
ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಮಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀ ಸಪ್ತಮಾತೃಕ ಮಾರಿಯಮ್ಮ ದೇವತೆಯ ಕರಗ ಮಹೋತ್ಸವ ನಗರದಲ್ಲಿ ವಿಜೃಂಭಣೆಯಿಂದ ನಡೆದಿದ್ದು, ಮೇ.5ರಂದು ಆರಂಭವಾದ ಧಾರ್ಮಿಕ ಕಾರ್ಯಭಗಳು ಮೇ.20ರಂದು ಮಾರಿಯಮ್ಮ ದೇವಿ, ಪಿಳೇಕಮ್ಮ ದೇವಿ, ಶ್ರೀ ಮುತ್ಯಾಲಮ್ಮ ದೇವಿ, ಶ್ರೀ ದೊಡ್ಡಮ್ಮ ದೇವಿಗೆ ಆರತಿಗಳನ್ನು ಬೆಳಗುವ ಮೂಲಕ ಸಮಾರೋಪಗೊಳ್ಳಲಿವೆ.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…