ಕಣ್ಮನ ಸೆಳೆದ ಮೈನವಿರೇಳಿಸುವ ಒನಕೆ ನಾಟ್ಯ ಉತ್ಸವ

ನಗರದಲ್ಲಿ ಶ್ರೀ ಸಪ್ತಮಾತೃಕ ಮಾರಿಯಮ್ಮ ದೇವತೆಯ ಕರಗ ಮಹೋತ್ಸವದ ಅಂಗವಾಗಿ ಕರಗ ದೇವಾಲಯದ ಸಮೀಪದ ಏಳು ಸುತ್ತಿನ ಕೋಟೆ ಆವರಣದಲ್ಲಿ ಒನಕೆ ನಾಟ್ಯ ಮತ್ತು ವಸಂತೋತ್ಸವ ಆಚರಣೆಯು ಬಹಳ ಸಂಭ್ರಮ, ಸಡಗರದಿಂದ ನಡೆಯಿತು.

ಕರಗ ಹೊತ್ತಿದ್ದ ಪೂಜಾರಿ ಮುನಿರತ್ನಂ ಬಾಲಾಜಿ ಅವರು ಪೂಜೆ ಸಲ್ಲಿಸಿ, ಒನಕೆ ಹಾಗೂ ಓಕುಳಿ ನೀರಿನ ತಪ್ಪಲೆಯನ್ನು ತಲೆಯ ಮೇಲಿಟ್ಟುಗೊಂಡು ನೀಡಿದ ನಾಟ್ಯ ಪ್ರದರ್ಶನ ನೆರೆದಿದ್ದ ಭಕ್ತಾದಿಗಳನ್ನು ರೋಮಾಂಚನಗೊಳಿಸಿತು.

ದೇವಾಲಯ ಹಾಗೂ ಸುತ್ತಮುತ್ತಲ ಮನೆಗಳ ಮೇಲಿಂದ ನೂರಾರು ಭಕ್ತರು ಮೈನವಿರೇಳಿಸುವ ನಾಟ್ಯವನ್ನು ಕಣ್ತುಂಬಿಕೊಂಡರು.

ಇದರೊಂದಿಗೆ ವಹ್ನಿಕುಲ ಮತಸ್ಥರು ಓಕುಳಿ ನೀರನ್ನು ಎರಚುತ್ತಾ, ಮಡಿಕೆ ಹೊಡೆಯುವ ವಸಂತೋತ್ಸವ ಆಚರಣೆಯನ್ನು ಉತ್ಸಾಹ ಸಂಭ್ರಮಗಳಿಂದ ಆಚರಿಸಿದರು.

ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಮಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀ ಸಪ್ತಮಾತೃಕ ಮಾರಿಯಮ್ಮ ದೇವತೆಯ ಕರಗ ಮಹೋತ್ಸವ ನಗರದಲ್ಲಿ ವಿಜೃಂಭಣೆಯಿಂದ ನಡೆದಿದ್ದು, ಮೇ.5ರಂದು ಆರಂಭವಾದ ಧಾರ್ಮಿಕ ಕಾರ್ಯಭಗಳು ಮೇ.20ರಂದು ಮಾರಿಯಮ್ಮ ದೇವಿ, ಪಿಳೇಕಮ್ಮ ದೇವಿ, ಶ್ರೀ ಮುತ್ಯಾಲಮ್ಮ ದೇವಿ, ಶ್ರೀ ದೊಡ್ಡಮ್ಮ ದೇವಿಗೆ ಆರತಿಗಳನ್ನು ಬೆಳಗುವ ಮೂಲಕ ಸಮಾರೋಪಗೊಳ್ಳಲಿವೆ.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

9 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

12 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

12 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

24 hours ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago