ಕಣ್ಮನ ಸೆಳೆದ ಮೈನವಿರೇಳಿಸುವ ಒನಕೆ ನಾಟ್ಯ ಉತ್ಸವ

ನಗರದಲ್ಲಿ ಶ್ರೀ ಸಪ್ತಮಾತೃಕ ಮಾರಿಯಮ್ಮ ದೇವತೆಯ ಕರಗ ಮಹೋತ್ಸವದ ಅಂಗವಾಗಿ ಕರಗ ದೇವಾಲಯದ ಸಮೀಪದ ಏಳು ಸುತ್ತಿನ ಕೋಟೆ ಆವರಣದಲ್ಲಿ ಒನಕೆ ನಾಟ್ಯ ಮತ್ತು ವಸಂತೋತ್ಸವ ಆಚರಣೆಯು ಬಹಳ ಸಂಭ್ರಮ, ಸಡಗರದಿಂದ ನಡೆಯಿತು.

ಕರಗ ಹೊತ್ತಿದ್ದ ಪೂಜಾರಿ ಮುನಿರತ್ನಂ ಬಾಲಾಜಿ ಅವರು ಪೂಜೆ ಸಲ್ಲಿಸಿ, ಒನಕೆ ಹಾಗೂ ಓಕುಳಿ ನೀರಿನ ತಪ್ಪಲೆಯನ್ನು ತಲೆಯ ಮೇಲಿಟ್ಟುಗೊಂಡು ನೀಡಿದ ನಾಟ್ಯ ಪ್ರದರ್ಶನ ನೆರೆದಿದ್ದ ಭಕ್ತಾದಿಗಳನ್ನು ರೋಮಾಂಚನಗೊಳಿಸಿತು.

ದೇವಾಲಯ ಹಾಗೂ ಸುತ್ತಮುತ್ತಲ ಮನೆಗಳ ಮೇಲಿಂದ ನೂರಾರು ಭಕ್ತರು ಮೈನವಿರೇಳಿಸುವ ನಾಟ್ಯವನ್ನು ಕಣ್ತುಂಬಿಕೊಂಡರು.

ಇದರೊಂದಿಗೆ ವಹ್ನಿಕುಲ ಮತಸ್ಥರು ಓಕುಳಿ ನೀರನ್ನು ಎರಚುತ್ತಾ, ಮಡಿಕೆ ಹೊಡೆಯುವ ವಸಂತೋತ್ಸವ ಆಚರಣೆಯನ್ನು ಉತ್ಸಾಹ ಸಂಭ್ರಮಗಳಿಂದ ಆಚರಿಸಿದರು.

ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಮಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀ ಸಪ್ತಮಾತೃಕ ಮಾರಿಯಮ್ಮ ದೇವತೆಯ ಕರಗ ಮಹೋತ್ಸವ ನಗರದಲ್ಲಿ ವಿಜೃಂಭಣೆಯಿಂದ ನಡೆದಿದ್ದು, ಮೇ.5ರಂದು ಆರಂಭವಾದ ಧಾರ್ಮಿಕ ಕಾರ್ಯಭಗಳು ಮೇ.20ರಂದು ಮಾರಿಯಮ್ಮ ದೇವಿ, ಪಿಳೇಕಮ್ಮ ದೇವಿ, ಶ್ರೀ ಮುತ್ಯಾಲಮ್ಮ ದೇವಿ, ಶ್ರೀ ದೊಡ್ಡಮ್ಮ ದೇವಿಗೆ ಆರತಿಗಳನ್ನು ಬೆಳಗುವ ಮೂಲಕ ಸಮಾರೋಪಗೊಳ್ಳಲಿವೆ.

Ramesh Babu

Journalist

Recent Posts

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

2 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

10 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

12 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

22 hours ago

ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ- ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ- ಶಾಸಕ ಧೀರಜ್‌ ಮುನಿರಾಜ್

ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್‌…

1 day ago

ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ…

1 day ago