ನಗರದಲ್ಲಿ ಶ್ರೀ ಸಪ್ತಮಾತೃಕ ಮಾರಿಯಮ್ಮ ದೇವತೆಯ ಕರಗ ಮಹೋತ್ಸವದ ಅಂಗವಾಗಿ ಕರಗ ದೇವಾಲಯದ ಸಮೀಪದ ಏಳು ಸುತ್ತಿನ ಕೋಟೆ ಆವರಣದಲ್ಲಿ ಒನಕೆ ನಾಟ್ಯ ಮತ್ತು ವಸಂತೋತ್ಸವ ಆಚರಣೆಯು ಬಹಳ ಸಂಭ್ರಮ, ಸಡಗರದಿಂದ ನಡೆಯಿತು.
ಕರಗ ಹೊತ್ತಿದ್ದ ಪೂಜಾರಿ ಮುನಿರತ್ನಂ ಬಾಲಾಜಿ ಅವರು ಪೂಜೆ ಸಲ್ಲಿಸಿ, ಒನಕೆ ಹಾಗೂ ಓಕುಳಿ ನೀರಿನ ತಪ್ಪಲೆಯನ್ನು ತಲೆಯ ಮೇಲಿಟ್ಟುಗೊಂಡು ನೀಡಿದ ನಾಟ್ಯ ಪ್ರದರ್ಶನ ನೆರೆದಿದ್ದ ಭಕ್ತಾದಿಗಳನ್ನು ರೋಮಾಂಚನಗೊಳಿಸಿತು.
ದೇವಾಲಯ ಹಾಗೂ ಸುತ್ತಮುತ್ತಲ ಮನೆಗಳ ಮೇಲಿಂದ ನೂರಾರು ಭಕ್ತರು ಮೈನವಿರೇಳಿಸುವ ನಾಟ್ಯವನ್ನು ಕಣ್ತುಂಬಿಕೊಂಡರು.
ಇದರೊಂದಿಗೆ ವಹ್ನಿಕುಲ ಮತಸ್ಥರು ಓಕುಳಿ ನೀರನ್ನು ಎರಚುತ್ತಾ, ಮಡಿಕೆ ಹೊಡೆಯುವ ವಸಂತೋತ್ಸವ ಆಚರಣೆಯನ್ನು ಉತ್ಸಾಹ ಸಂಭ್ರಮಗಳಿಂದ ಆಚರಿಸಿದರು.
ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಮಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀ ಸಪ್ತಮಾತೃಕ ಮಾರಿಯಮ್ಮ ದೇವತೆಯ ಕರಗ ಮಹೋತ್ಸವ ನಗರದಲ್ಲಿ ವಿಜೃಂಭಣೆಯಿಂದ ನಡೆದಿದ್ದು, ಮೇ.5ರಂದು ಆರಂಭವಾದ ಧಾರ್ಮಿಕ ಕಾರ್ಯಭಗಳು ಮೇ.20ರಂದು ಮಾರಿಯಮ್ಮ ದೇವಿ, ಪಿಳೇಕಮ್ಮ ದೇವಿ, ಶ್ರೀ ಮುತ್ಯಾಲಮ್ಮ ದೇವಿ, ಶ್ರೀ ದೊಡ್ಡಮ್ಮ ದೇವಿಗೆ ಆರತಿಗಳನ್ನು ಬೆಳಗುವ ಮೂಲಕ ಸಮಾರೋಪಗೊಳ್ಳಲಿವೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…