ನಗರದಲ್ಲಿ ಶ್ರೀ ಸಪ್ತಮಾತೃಕ ಮಾರಿಯಮ್ಮ ದೇವತೆಯ ಕರಗ ಮಹೋತ್ಸವದ ಅಂಗವಾಗಿ ಕರಗ ದೇವಾಲಯದ ಸಮೀಪದ ಏಳು ಸುತ್ತಿನ ಕೋಟೆ ಆವರಣದಲ್ಲಿ ಒನಕೆ ನಾಟ್ಯ ಮತ್ತು ವಸಂತೋತ್ಸವ ಆಚರಣೆಯು ಬಹಳ ಸಂಭ್ರಮ, ಸಡಗರದಿಂದ ನಡೆಯಿತು.
ಕರಗ ಹೊತ್ತಿದ್ದ ಪೂಜಾರಿ ಮುನಿರತ್ನಂ ಬಾಲಾಜಿ ಅವರು ಪೂಜೆ ಸಲ್ಲಿಸಿ, ಒನಕೆ ಹಾಗೂ ಓಕುಳಿ ನೀರಿನ ತಪ್ಪಲೆಯನ್ನು ತಲೆಯ ಮೇಲಿಟ್ಟುಗೊಂಡು ನೀಡಿದ ನಾಟ್ಯ ಪ್ರದರ್ಶನ ನೆರೆದಿದ್ದ ಭಕ್ತಾದಿಗಳನ್ನು ರೋಮಾಂಚನಗೊಳಿಸಿತು.
ದೇವಾಲಯ ಹಾಗೂ ಸುತ್ತಮುತ್ತಲ ಮನೆಗಳ ಮೇಲಿಂದ ನೂರಾರು ಭಕ್ತರು ಮೈನವಿರೇಳಿಸುವ ನಾಟ್ಯವನ್ನು ಕಣ್ತುಂಬಿಕೊಂಡರು.
ಇದರೊಂದಿಗೆ ವಹ್ನಿಕುಲ ಮತಸ್ಥರು ಓಕುಳಿ ನೀರನ್ನು ಎರಚುತ್ತಾ, ಮಡಿಕೆ ಹೊಡೆಯುವ ವಸಂತೋತ್ಸವ ಆಚರಣೆಯನ್ನು ಉತ್ಸಾಹ ಸಂಭ್ರಮಗಳಿಂದ ಆಚರಿಸಿದರು.
ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಮಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀ ಸಪ್ತಮಾತೃಕ ಮಾರಿಯಮ್ಮ ದೇವತೆಯ ಕರಗ ಮಹೋತ್ಸವ ನಗರದಲ್ಲಿ ವಿಜೃಂಭಣೆಯಿಂದ ನಡೆದಿದ್ದು, ಮೇ.5ರಂದು ಆರಂಭವಾದ ಧಾರ್ಮಿಕ ಕಾರ್ಯಭಗಳು ಮೇ.20ರಂದು ಮಾರಿಯಮ್ಮ ದೇವಿ, ಪಿಳೇಕಮ್ಮ ದೇವಿ, ಶ್ರೀ ಮುತ್ಯಾಲಮ್ಮ ದೇವಿ, ಶ್ರೀ ದೊಡ್ಡಮ್ಮ ದೇವಿಗೆ ಆರತಿಗಳನ್ನು ಬೆಳಗುವ ಮೂಲಕ ಸಮಾರೋಪಗೊಳ್ಳಲಿವೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…