ನಗರದಲ್ಲಿ ಶ್ರೀ ಸಪ್ತಮಾತೃಕ ಮಾರಿಯಮ್ಮ ದೇವತೆಯ ಕರಗ ಮಹೋತ್ಸವದ ಅಂಗವಾಗಿ ಕರಗ ದೇವಾಲಯದ ಸಮೀಪದ ಏಳು ಸುತ್ತಿನ ಕೋಟೆ ಆವರಣದಲ್ಲಿ ಒನಕೆ ನಾಟ್ಯ ಮತ್ತು ವಸಂತೋತ್ಸವ ಆಚರಣೆಯು ಬಹಳ ಸಂಭ್ರಮ, ಸಡಗರದಿಂದ ನಡೆಯಿತು.
ಕರಗ ಹೊತ್ತಿದ್ದ ಪೂಜಾರಿ ಮುನಿರತ್ನಂ ಬಾಲಾಜಿ ಅವರು ಪೂಜೆ ಸಲ್ಲಿಸಿ, ಒನಕೆ ಹಾಗೂ ಓಕುಳಿ ನೀರಿನ ತಪ್ಪಲೆಯನ್ನು ತಲೆಯ ಮೇಲಿಟ್ಟುಗೊಂಡು ನೀಡಿದ ನಾಟ್ಯ ಪ್ರದರ್ಶನ ನೆರೆದಿದ್ದ ಭಕ್ತಾದಿಗಳನ್ನು ರೋಮಾಂಚನಗೊಳಿಸಿತು.
ದೇವಾಲಯ ಹಾಗೂ ಸುತ್ತಮುತ್ತಲ ಮನೆಗಳ ಮೇಲಿಂದ ನೂರಾರು ಭಕ್ತರು ಮೈನವಿರೇಳಿಸುವ ನಾಟ್ಯವನ್ನು ಕಣ್ತುಂಬಿಕೊಂಡರು.
ಇದರೊಂದಿಗೆ ವಹ್ನಿಕುಲ ಮತಸ್ಥರು ಓಕುಳಿ ನೀರನ್ನು ಎರಚುತ್ತಾ, ಮಡಿಕೆ ಹೊಡೆಯುವ ವಸಂತೋತ್ಸವ ಆಚರಣೆಯನ್ನು ಉತ್ಸಾಹ ಸಂಭ್ರಮಗಳಿಂದ ಆಚರಿಸಿದರು.
ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಮಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀ ಸಪ್ತಮಾತೃಕ ಮಾರಿಯಮ್ಮ ದೇವತೆಯ ಕರಗ ಮಹೋತ್ಸವ ನಗರದಲ್ಲಿ ವಿಜೃಂಭಣೆಯಿಂದ ನಡೆದಿದ್ದು, ಮೇ.5ರಂದು ಆರಂಭವಾದ ಧಾರ್ಮಿಕ ಕಾರ್ಯಭಗಳು ಮೇ.20ರಂದು ಮಾರಿಯಮ್ಮ ದೇವಿ, ಪಿಳೇಕಮ್ಮ ದೇವಿ, ಶ್ರೀ ಮುತ್ಯಾಲಮ್ಮ ದೇವಿ, ಶ್ರೀ ದೊಡ್ಡಮ್ಮ ದೇವಿಗೆ ಆರತಿಗಳನ್ನು ಬೆಳಗುವ ಮೂಲಕ ಸಮಾರೋಪಗೊಳ್ಳಲಿವೆ.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…