ಕಣ್ಮನ ಸೆಳೆದ ವೀರತಿಪ್ಪಯ್ಯಸ್ವಾಮಿ ಜಾತ್ರೆಯ ನೀರುಬಂಡಿಗಳ ಮೆರವಣಿಗೆ

ತೂಬಗೆರೆ (ಕೆಳಗಿನ ಜೂಗನಹಳ್ಳಿ): ತೂಬಗೆರೆ ಹೋಬಳಿಯ ಕೆಳಗಿನ ಜೂಗನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಗೌರಿಬಿದನೂರು ತಾಲ್ಲೂಕಿನ ಪೂಜಾರಹಳ್ಳಿ ಗ್ರಾಮದಲ್ಲಿ ಯುಗಾದಿ ಹಬ್ಬದ ಮಾರನೇ ದಿನ ಸಂಪ್ರದಾಯಬದ್ಧವಾಗಿ ನಡೆಯುವ ಶ್ರೀ ವೀರತಿಪ್ಪಯ್ಯಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಅಲಂಕಾರಿಕ ನೀರು ಬಂಡಿಗಳ ಮೆರವಣಿಗೆಯೊಂದಿಗೆ ಭಾಗವಹಿಸಿದ್ದರು.

ಜಾತ್ರೆಯ ಪ್ರಮುಖ ಆಕರ್ಷಣೆಯಾಗಿ ಸಿಂಗರಿಸಲ್ಪಟ್ಟ ನೀರುಬಂಡಿಗಳ ಮೆರವಣಿಗೆ ಎಲ್ಲರ ಕಣ್ಮನ ಸೆಳೆಯಿತು. ಘಾಟಿ ಸುಬ್ರಹ್ಮಣ್ಯ ಸುತ್ತಮುತ್ತಲಿನ ಗ್ರಾಮಗಳ ರೈತರು ತಮ್ಮ ದನಗಳನ್ನು ಅಲಂಕರಿಸಿ, ನೀರುಬಂಡಿಗಳನ್ನು ಕಟ್ಟಿಕೊಂಡು ಭಕ್ತಿಭಾವದಿಂದ ಮೆರವಣಿಗೆ ನಡೆಸಿದ ದೃಶ್ಯ ಗಮನಾರ್ಹವಾಗಿತ್ತು.

ಬಣ್ಣಬಣ್ಣದ ಅಲಂಕಾರಗಳಿಂದ ಸಜ್ಜುಗೊಂಡ ಎತ್ತುಗಳು, ಕಳಶಗಳು ಮತ್ತು ಸಂಪ್ರದಾಯಬದ್ಧ ನೀರುಬಂಡಿಗಳು ಜಾತ್ರೆಯ ಸೊಬಗನ್ನು ಹೆಚ್ಚಿಸಿತು. ಗ್ರಾಮೀಣ ಸಂಸ್ಕೃತಿ, ಪರಂಪರೆ ಮತ್ತು ರೈತರ ಜೀವನಶೈಲಿಯನ್ನು ಪ್ರತಿಬಿಂಬಿಸಿದ ಈ ಮೆರವಣಿಗೆಗೆ ಸಾವಿರಾರು ಜನ ಸಾಕ್ಷಿಯಾದರು.

ಪರಿಷೆಗೆ ಬಂದಿದ್ದ ಭಕ್ತರಿಗೆ ಮಜ್ಜಿಗೆ ಮತ್ತು ಪಾನಕ ವಿತರಣೆ ಮಾಡಲಾಯಿತು. ಭಕ್ತರ ಸಂಭ್ರಮ ಹಾಗೂ ಅಪಾರ ಭಕ್ತ ಸಮೂಹ ಸೇರಿ ಜಾತ್ರೆಗೆ ವಿಶೇಷ ಮೆರುಗು ತಂದವು. ಇಂತಹ ಸಾಂಪ್ರದಾಯಿಕ ಉತ್ಸವಗಳು ಸಮಾಜದಲ್ಲಿ ಒಗ್ಗಟ್ಟು ಮತ್ತು ಸಂಸ್ಕೃತಿ ಮೌಲ್ಯಗಳನ್ನು ಬಲಪಡಿಸುತ್ತವೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಧಾ ಮಂಜುನಾಥ್, ಮುಖಂಡರಾದ ಕುಮಾರ್, ಯುವ ಮುಖಂಡ ಉದಯ ಆರಾಧ್ಯ ಹಾಗೂ ಸುತ್ತಮುತ್ತಲಿನ ರೈತರು ಜಾತ್ರೆಯಲ್ಲಿ ಭಾಗವಹಿಸಿ ಭಕ್ತರೊಂದಿಗೆ ಬೆರೆತು ಹಬ್ಬದ ಉತ್ಸಾಹ ಹಂಚಿಕೊಂಡರು.

Ramesh Babu

Journalist

Recent Posts

ಕೋಲಾರದಲ್ಲಿ ಪವಿತ್ರ ರಂಜಾನ್‌ ಸಂಭ್ರಮದಿಂದ ಆಚರಣೆ

ಕೋಲಾರ: ಮುಸಲ್ಮಾನರ ಪವಿತ್ರ ರಂಜಾನ್‌ ಹಬ್ಬವನ್ನು ಕೋಲಾರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಂಭ್ರಮದಿಂದ ಶನಿವಾರ ಆಚರಣೆ ಮಾಡಲಾಯಿತು. ನಗರದ ಈದ್ಗಾ…

2 hours ago

ಮಾಸ್ಕ್ ರಾಬರಿ ಗ್ಯಾಂಗ್ ಫುಲ್ ಆ್ಯಕ್ಟೀವ್: ಒಂದೇ ದಿನ ಮೂರು ಮನೆಗಳಲ್ಲಿ ಕಳ್ಳತನ

ದೇವನಹಳ್ಳಿ ಹೊರ ವಲಯದಲ್ಲಿ ಮಾಸ್ಕ್ ರಾಬರಿ ಗ್ಯಾಂಗ್ ಫುಲ್ ಆ್ಯಕ್ಟೀವ್ ಆಗಿದೆ.. ಆವತಿ ಗ್ರಾಮದಲ್ಲಿ ಒಂದೇ ದಿನ ಮೂರು ಮನೆಗಳಲ್ಲಿ…

7 hours ago

ಯುಗಾದಿ ಹಬ್ಬದ ಸಂದರ್ಭದಲ್ಲಿ ಗ್ರಾಮದಲ್ಲಿ ಬೈಕ್ ವೀಲಿಂಗ್ ವಿಚಾರ: ಪ್ರಶ್ನೆ ಮಾಡಿದ್ದಕ್ಕೆ ಹಲ್ಲೆ: ದೊಣ್ಣೆ ಹಿಡಿದು ಬಡಿದಾಡಿಕೊಂಡ ಯುವಕರ ಗುಂಪು

ಯುಗಾದಿ ಹಬ್ಬದ ಸಂದರ್ಭದಲ್ಲಿ ನಶೆಯಲ್ಲಿ ವೀಲಿಂಗ್ ಮಾಡುತ್ತಿರುವಾಗ ಗ್ರಾಮದವರು ಪ್ನಶ್ನೆ ಮಾಡಿದ್ದಕ್ಕೆ  ಯುವಕರು ದೊಣ್ಣೆ ಹಿಡಿದು ಹಲ್ಲೆ ಮಾಡಿರುವ ಘಟನೆ…

8 hours ago

ಉಪಚುನಾವಣೆ, ಪ್ರಚಾರ ಮತ್ತು ಅದಕ್ಕಾಗಿ ಪಡುತ್ತಿರುವ ಶ್ರಮ……

ಹಾಲಿ ಶಾಸಕರ ನಿಧನದಿಂದಾಗಿ ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಘೋಷಣೆಯಾಗಿದೆ. ಈಗ ನಾವು ಅವರ ಕುಟುಂಬಗಳ ನಿರ್ವಹಣೆಗಾಗಿ,…

15 hours ago

ಮೊಬೈಲ್ ಕ್ಯಾಂಟೀನ್ ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು…

1 day ago

ಮಾ.21, 22ರಂದು ಹಾದ್ರೀಪುರ ‌ಕ್ರಿಕೆಟ್ ಟೂರ್ನಮೆಂಟ್

ಮಾ.21, 22ರಂದು ದೊಡ್ಡಬಳ್ಳಾಪುರದ‌ ಹಾದ್ರೀಪುರ ಗ್ರಾಮದಲ್ಲಿ‌ ಎರಡನೇ‌ ವರ್ಷದ ಹಾದ್ರೀಪುರ ‌ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಲಾಗಿದೆ... ಜೈ ಆಂಜನೇಯ, ರಾಕ್…

1 day ago