ಕಣ್ಮನ ಸೆಳೆದ ವೀರತಿಪ್ಪಯ್ಯಸ್ವಾಮಿ ಜಾತ್ರೆಯ ನೀರುಬಂಡಿಗಳ ಮೆರವಣಿಗೆ

ತೂಬಗೆರೆ (ಕೆಳಗಿನ ಜೂಗನಹಳ್ಳಿ): ತೂಬಗೆರೆ ಹೋಬಳಿಯ ಕೆಳಗಿನ ಜೂಗನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಗೌರಿಬಿದನೂರು ತಾಲ್ಲೂಕಿನ ಪೂಜಾರಹಳ್ಳಿ ಗ್ರಾಮದಲ್ಲಿ ಯುಗಾದಿ ಹಬ್ಬದ ಮಾರನೇ ದಿನ ಸಂಪ್ರದಾಯಬದ್ಧವಾಗಿ ನಡೆಯುವ ಶ್ರೀ ವೀರತಿಪ್ಪಯ್ಯಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಅಲಂಕಾರಿಕ ನೀರು ಬಂಡಿಗಳ ಮೆರವಣಿಗೆಯೊಂದಿಗೆ ಭಾಗವಹಿಸಿದ್ದರು.

ಜಾತ್ರೆಯ ಪ್ರಮುಖ ಆಕರ್ಷಣೆಯಾಗಿ ಸಿಂಗರಿಸಲ್ಪಟ್ಟ ನೀರುಬಂಡಿಗಳ ಮೆರವಣಿಗೆ ಎಲ್ಲರ ಕಣ್ಮನ ಸೆಳೆಯಿತು. ಘಾಟಿ ಸುಬ್ರಹ್ಮಣ್ಯ ಸುತ್ತಮುತ್ತಲಿನ ಗ್ರಾಮಗಳ ರೈತರು ತಮ್ಮ ದನಗಳನ್ನು ಅಲಂಕರಿಸಿ, ನೀರುಬಂಡಿಗಳನ್ನು ಕಟ್ಟಿಕೊಂಡು ಭಕ್ತಿಭಾವದಿಂದ ಮೆರವಣಿಗೆ ನಡೆಸಿದ ದೃಶ್ಯ ಗಮನಾರ್ಹವಾಗಿತ್ತು.

ಬಣ್ಣಬಣ್ಣದ ಅಲಂಕಾರಗಳಿಂದ ಸಜ್ಜುಗೊಂಡ ಎತ್ತುಗಳು, ಕಳಶಗಳು ಮತ್ತು ಸಂಪ್ರದಾಯಬದ್ಧ ನೀರುಬಂಡಿಗಳು ಜಾತ್ರೆಯ ಸೊಬಗನ್ನು ಹೆಚ್ಚಿಸಿತು. ಗ್ರಾಮೀಣ ಸಂಸ್ಕೃತಿ, ಪರಂಪರೆ ಮತ್ತು ರೈತರ ಜೀವನಶೈಲಿಯನ್ನು ಪ್ರತಿಬಿಂಬಿಸಿದ ಈ ಮೆರವಣಿಗೆಗೆ ಸಾವಿರಾರು ಜನ ಸಾಕ್ಷಿಯಾದರು.

ಪರಿಷೆಗೆ ಬಂದಿದ್ದ ಭಕ್ತರಿಗೆ ಮಜ್ಜಿಗೆ ಮತ್ತು ಪಾನಕ ವಿತರಣೆ ಮಾಡಲಾಯಿತು. ಭಕ್ತರ ಸಂಭ್ರಮ ಹಾಗೂ ಅಪಾರ ಭಕ್ತ ಸಮೂಹ ಸೇರಿ ಜಾತ್ರೆಗೆ ವಿಶೇಷ ಮೆರುಗು ತಂದವು. ಇಂತಹ ಸಾಂಪ್ರದಾಯಿಕ ಉತ್ಸವಗಳು ಸಮಾಜದಲ್ಲಿ ಒಗ್ಗಟ್ಟು ಮತ್ತು ಸಂಸ್ಕೃತಿ ಮೌಲ್ಯಗಳನ್ನು ಬಲಪಡಿಸುತ್ತವೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಧಾ ಮಂಜುನಾಥ್, ಮುಖಂಡರಾದ ಕುಮಾರ್, ಯುವ ಮುಖಂಡ ಉದಯ ಆರಾಧ್ಯ ಹಾಗೂ ಸುತ್ತಮುತ್ತಲಿನ ರೈತರು ಜಾತ್ರೆಯಲ್ಲಿ ಭಾಗವಹಿಸಿ ಭಕ್ತರೊಂದಿಗೆ ಬೆರೆತು ಹಬ್ಬದ ಉತ್ಸಾಹ ಹಂಚಿಕೊಂಡರು.

Ramesh Babu

Journalist

Recent Posts

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

57 minutes ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

6 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

8 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

11 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago