ತೂಬಗೆರೆ (ಕೆಳಗಿನ ಜೂಗನಹಳ್ಳಿ): ತೂಬಗೆರೆ ಹೋಬಳಿಯ ಕೆಳಗಿನ ಜೂಗನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಗೌರಿಬಿದನೂರು ತಾಲ್ಲೂಕಿನ ಪೂಜಾರಹಳ್ಳಿ ಗ್ರಾಮದಲ್ಲಿ ಯುಗಾದಿ ಹಬ್ಬದ ಮಾರನೇ ದಿನ ಸಂಪ್ರದಾಯಬದ್ಧವಾಗಿ ನಡೆಯುವ ಶ್ರೀ ವೀರತಿಪ್ಪಯ್ಯಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಅಲಂಕಾರಿಕ ನೀರು ಬಂಡಿಗಳ ಮೆರವಣಿಗೆಯೊಂದಿಗೆ ಭಾಗವಹಿಸಿದ್ದರು.
ಜಾತ್ರೆಯ ಪ್ರಮುಖ ಆಕರ್ಷಣೆಯಾಗಿ ಸಿಂಗರಿಸಲ್ಪಟ್ಟ ನೀರುಬಂಡಿಗಳ ಮೆರವಣಿಗೆ ಎಲ್ಲರ ಕಣ್ಮನ ಸೆಳೆಯಿತು. ಘಾಟಿ ಸುಬ್ರಹ್ಮಣ್ಯ ಸುತ್ತಮುತ್ತಲಿನ ಗ್ರಾಮಗಳ ರೈತರು ತಮ್ಮ ದನಗಳನ್ನು ಅಲಂಕರಿಸಿ, ನೀರುಬಂಡಿಗಳನ್ನು ಕಟ್ಟಿಕೊಂಡು ಭಕ್ತಿಭಾವದಿಂದ ಮೆರವಣಿಗೆ ನಡೆಸಿದ ದೃಶ್ಯ ಗಮನಾರ್ಹವಾಗಿತ್ತು.
ಬಣ್ಣಬಣ್ಣದ ಅಲಂಕಾರಗಳಿಂದ ಸಜ್ಜುಗೊಂಡ ಎತ್ತುಗಳು, ಕಳಶಗಳು ಮತ್ತು ಸಂಪ್ರದಾಯಬದ್ಧ ನೀರುಬಂಡಿಗಳು ಜಾತ್ರೆಯ ಸೊಬಗನ್ನು ಹೆಚ್ಚಿಸಿತು. ಗ್ರಾಮೀಣ ಸಂಸ್ಕೃತಿ, ಪರಂಪರೆ ಮತ್ತು ರೈತರ ಜೀವನಶೈಲಿಯನ್ನು ಪ್ರತಿಬಿಂಬಿಸಿದ ಈ ಮೆರವಣಿಗೆಗೆ ಸಾವಿರಾರು ಜನ ಸಾಕ್ಷಿಯಾದರು.
ಪರಿಷೆಗೆ ಬಂದಿದ್ದ ಭಕ್ತರಿಗೆ ಮಜ್ಜಿಗೆ ಮತ್ತು ಪಾನಕ ವಿತರಣೆ ಮಾಡಲಾಯಿತು. ಭಕ್ತರ ಸಂಭ್ರಮ ಹಾಗೂ ಅಪಾರ ಭಕ್ತ ಸಮೂಹ ಸೇರಿ ಜಾತ್ರೆಗೆ ವಿಶೇಷ ಮೆರುಗು ತಂದವು. ಇಂತಹ ಸಾಂಪ್ರದಾಯಿಕ ಉತ್ಸವಗಳು ಸಮಾಜದಲ್ಲಿ ಒಗ್ಗಟ್ಟು ಮತ್ತು ಸಂಸ್ಕೃತಿ ಮೌಲ್ಯಗಳನ್ನು ಬಲಪಡಿಸುತ್ತವೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಧಾ ಮಂಜುನಾಥ್, ಮುಖಂಡರಾದ ಕುಮಾರ್, ಯುವ ಮುಖಂಡ ಉದಯ ಆರಾಧ್ಯ ಹಾಗೂ ಸುತ್ತಮುತ್ತಲಿನ ರೈತರು ಜಾತ್ರೆಯಲ್ಲಿ ಭಾಗವಹಿಸಿ ಭಕ್ತರೊಂದಿಗೆ ಬೆರೆತು ಹಬ್ಬದ ಉತ್ಸಾಹ ಹಂಚಿಕೊಂಡರು.
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…