ಕತ್ತಲಾಗ್ತಿದ್ದಂತೆ ಈ ಗ್ರಾಮದ ಮಹಿಳೆಯರಿಗೆ ಆವರಿಸುತ್ತೆ ಆತಂಕ: ರಾತ್ರೀ ವೇಳೆ ಒಂಟಿಯಾಗಿ ಮಹಿಳೆ‌ ಮನೆಯಿಂದ ಹೊರ ಬಂದರೆ‌ ಸಾಕು ಆಗಬಾರದ ಅನಾಹುತ ಆಗುತ್ತದೆ..

ಹಳ್ಳಿಗಳಲ್ಲಿ ಸಾಮನ್ಯವಾಗಿ ಮನೆಯಲ್ಲಿಯೇ ಶೌಚಾಲಯ ವ್ಯವಸ್ಥೆ ಇರುವುದಿಲ್ಲ. ಮನೆಯ ಹೊರಗೆ ಶೌಚಾಲಯವನ್ನು‌ ನಿರ್ಮಿಸಿರುತ್ತಾರೆ. ರಾತ್ರಿ ವೇಳೆ ಶೌಚಾಲಯಕ್ಕೆಂದು ಮಹಿಳೆಯರು ಒಂಟಿಯಾಗಿ ಹೊರ ಬಂದರೆ ಸಾಕು ಆಗಬಾರದ ಅನಾಹುತ ನಡೆದೇ ಹೋಗುತ್ತದೆ. ಎಲ್ಲಿ ಅಂತೀರಾ ಈ ಸ್ಟೋರಿ ಓದಿ….

ಹಳ್ಳಿ ಜನರು ಸಾಮಾನ್ಯವಾಗಿ ಮುಗ್ಧರು. ಆದರೆ ಇದನ್ನೆ ಬಂಡವಾಳ ಮಾಡಿಕೊಂಡ ಕೆಲ ಕಿಡಿಗೇಡಿಗಳು, ರಾತ್ರಿ ವೇಳೆ ಗ್ರಾಮಕ್ಕೆ ಒಳನುಸುಳಿ ಮನೆ ಬಾಗಿಲುಗಳನ್ನ ಬಡಿದು ಎಸ್ಕೇಪ್ ಆಗೋದು, ಅವಕಾಶ‌ ಸಿಕ್ಕರೆ ಕಳ್ಳತನ ಮಾಡೋದು ಹೀಗೆ ಹಳ್ಳಿ ಜನರಿಗೆ ಭಯ ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ಈಗ ಕತ್ತಲಾದರೆ ಸಾಕು ಮಹಿಳೆಯರು ಮನೆಯಿಂದ ಹೊರಗಡೆ ಬರಲು ಎದುರುವಂತಾಗಿದೆ. ಅದು ಯಾಕೆ ಅನ್ನೂದನ್ನ ಈ‌ ಸ್ಟೋರಿ ಓದಿ….

ಗ್ರಾಮದ ಮಹಿಳೆಯರ ಮುಖದಲ್ಲಿ ಆತಂಕ ಮನೆ ಮಾಡಿದ್ರೆ, ಗ್ರಾಮದ ಹೊರ ವಲಯದಲ್ಲೆ ಬೈಕ್ ವೊಂದು ಮುಂದಿನ ಚಕ್ರವಿಲ್ಲದೆ ಅನಾಥವಾಗಿ ನಿಂತಿದೆ. ಯಾರೋ ಪಂಚರ್ ಆಗಿರುವುದಕ್ಕೆ ಬಿಟ್ಟು ಹೋಗಿರಬೇಕು ಅಂತ ಅಂದುಕೊಂಡ ಅಕ್ಕ ಪಕ್ಕದ ಗ್ರಾಮಸ್ಥರಿಗೆ ಬೈಕ್ ನಲ್ಲಿ ಬಂದು ಖದೀಮರು ಮಾಡ್ತಿದ್ದ ಕೆಲಸವನ್ನ ಕಂಡು ಒಂದು ಕ್ಷಣ ಶಾಕ್ ಆಗಿದ್ದಾರೆ. ಇನ್ನೂ ಈ ಬೈಕ್ ನಲ್ಲಿ ಬಂದ ಆ ಕಿಡಿಗೇಡಿಗಳು ಮಾಡಿದ ಆ ಕೆಲಸವಾದ್ರು ಏನು..

ಕತ್ತಲಾಗ್ತಿದ್ದಂತೆ ಗ್ರಾಮದಲ್ಲಿ ಕಿಡಿಗೇಡಿಗಳ ಅಟ್ಟಹಾಸ

ಹೌದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಸಮೀಪದ ನರಗನಹಳ್ಳಿ ಅನ್ನೂ ಈ ಗ್ರಾಮದಲ್ಲಿ ಕಳೆದ ಹಲವು ದಿನಗಳಿಂದ ಪುಂಡರ ಹಾವಳಿ ಹೆಚ್ಚಾಗಿದೆ. ದಿನಪೂರ್ತಿ ಹೊಲದಲ್ಲಿ ಕೆಲಸ, ಜಾನುವಾರುಗಳ ಹಾರೈಕೆ ಅಂತ ಕೆಲಸ ಮಾಡಿ ಮನೆಗೆ ಬರುವ ಜನರು ನಿದ್ದೆಗೆ ಜಾರ್ತಿದ್ದಂತೆ ಮನೆ ಬಳಿಗೆ ಬರುವ ಪುಂಡರು ಮನೆ ಬಾಗಿಲುಗಳನ್ನ ಹೊಡೆದು ಎಸ್ಕೇಪ್ ಆಗ್ತಿದ್ದಾರಂತೆ. ತಡರಾತ್ರಿ ಶೌಚಾಲಯಕ್ಕೆ ಹೋಗೋಕ್ಕೆ ಅಂತ ಮನೆಯಿಂದ ಹೊರಗಡೆ ಬಂದಿದ್ದ ಮಹಿಳೆಯ ಬಾಯನ್ನ ಹಿಂದಿನಿಂದ ಬಂದ ಕಿಡಿಗೇಡಿಗಳು ಮುಚ್ಚಿಕೊಂಡು ನಿರ್ಜನ ಪ್ರದೇಶಕ್ಕೆ ಎಳೆದೋಯ್ದು ಮಹಿಳೆಯ ಸರಗಳ್ಳತನಕ್ಕೆ ಯತ್ನಿಸಿದ್ದಾರೆ. ಆದ್ರೆ ಈ ವೇಳೆ ಮಹಿಳೆ ಸರಗಳ್ಳತನ ಮಾಡಲು ಬಿಡದಿದಕ್ಕೆ ಆಕೆಯ ಮೇಲೆ ಹಲ್ಲೆ ನಡೆಸಿದ ಖದೀಮರು ನಂತರ ಆಕೆಯ ಬಟ್ಟೆಗಳನ್ನ ಹರಿದು ಪ್ರಜ್ಞೆ ತಪ್ಪಿಸಿ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.

ನಿರ್ಜನ ಪ್ರದೇಶದಲ್ಲಿ ಪ್ರಜ್ಞಾಹೀನವಾಗಿ ಬಿದ್ದಿದ್ದ ಮಹಿಳೆಯನ್ನ ಕುಟುಂಬಸ್ಥರು ಆಸ್ವತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದು ನಂತರ ಕಿಡಿಗೇಡಿಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಆದ್ರೆ ಗ್ರಾಮದಲ್ಲಿ ರಾತ್ರಿ ವೇಳೆ ಬೀದಿ ದೀಪಗಳಿಲ್ಲದ ಕಾರಣ ಅಪರಿಚಿತರು ಯಾರು ಅನ್ನೋದು ಗೊತ್ತಾಗದಿದ್ದು ಗ್ರಾಮಸ್ಥರು ರಾತ್ರಿ ವೇಳೆ ಗ್ರಾಮದಲ್ಲಿ ಬಾಗಿಲು ಬಡಿಯುವ ಖದೀಮರ ಎಡೆಮುರಿಕಟ್ಟುವವರನ್ನ ಹಿಡಿಯಲು ಮುಂದಾಗಿದ್ದಾರೆ. ಹೀಗಾಗಿ ಕಳೆದ ರಾತ್ರಿ ಗ್ರಾಮಕ್ಕೆ ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತರು ಬಾಗಿಲು ಬಡಿಯುತ್ತಿದ್ದಂತೆ ಹಿಡಿಯಲು ಮುಂದಾಗಿದ್ದು ಬೈಕ್ ಅನ್ನ ಗ್ರಾಮದಲ್ಲೆ ಬಿಟ್ಟು ಎಸ್ಕೇಪ್ ಆಗಿದ್ದಾರೆ. ಇನ್ನೂ ಆರೋಪಿಗಳು ತಂದಿದ್ದ ಬೈಕ್ ನ ಒಂದು ವೀಲ್ ಅನ್ನ ಮುರಿದು ಹಾಕಿದ ಗ್ರಾಮಸ್ಥರು ಬೈಕ್ ಸಮೇತ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಗೆ ಒಪ್ಪಿಸಿ ದೂರು ನೀಡಿದ್ದಾರೆ.

ಒಟ್ಟಾರೆ ರಾತ್ರಿಯಾಗ್ತಿದ್ದಂತೆ ಗ್ರಾಮಕ್ಕೆ ಎಂಟ್ರಿಕೊಡುವ ಕಿಡಿಗೇಡಿಗಳು ಮಾಡ್ತಿರುವ ಪುಂಡಾಟಿಕೆಗೆ ಮಹಿಳೆಯರು ಸೇರಿದಂತೆ ಪುರುಷರು ಸಹ ಬೆಚ್ಚಿ ಬಿದ್ದಿದ್ದಾರೆ. ಇನ್ನೂ ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಗೆ ಗ್ರಾಮಸ್ಥರು ದೂರು ನೀಡಿದ್ದು, ಪೊಲೀಸರು ಪುಂಡರ ಎಡೆಮುರಿಕಟ್ಟುವ ಮೂಲಕ ಗ್ರಾಮಸ್ಥರ ಆತಂಕ ದೂರ ಮಾಡುವ ಕೆಲಸ ಮಾಡಬೇಕಿದೆ.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

5 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

6 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

7 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

8 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

10 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

16 hours ago