ತಾಲೂಕಿನ ಕತ್ತಿಹೊಸಹಳ್ಳಿ ಬಳಿ ಹಾದುಹೋಗಿರುವ ದಾಬಸ್ ಪೇಟೆ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿರುವ ಘಟನೆ ಫೆ.24ರ ಮುಂಜಾನೆ ಸುಮಾರು 5:30ರ ವೇಳೆಯಲ್ಲಿ ನಡೆದಿತ್ತು. ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದವು, ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಓರ್ವ ಅಸುನೀಗಿದ್ದು, ಮತ್ತಿಬ್ಬರಿಗೆ ಚಿಕಿತ್ಸೆ ಮುಂದುವರಿದಿತ್ತು.
ಕಾರು ಅಪಘಾತದ ಭೀಕರ ದೃಶ್ಯ ಹೆದ್ದಾರಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅತಿವೇಗವಾಗಿ ಬಂದ ಕಾರು ಡಿವೈಡರ್ ಮೇಲೆ ಹತ್ತಿ ಸಿನಿಮೀಯ ರೀತಿಯಲ್ಲಿ ಮೂರ್ನಾಲ್ಕು ಬಾರಿ ಪಲ್ಟಿ ಹೊಡೆದಿದೆ. ಪಲ್ಟಿ ಹೊಡೆಯುವಾಗಲೇ ಕಾರಿನಲ್ಲಿದ್ದ ಮೂರು ಜನ ಮೇಲಕ್ಕೆ ಹಾರಿ ರಸ್ತೆಗೆ ಬೀಳುತ್ತಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರ ಮೂಲದ ಐವರು ಸ್ನೇಹಿತ ಮದುವೆ ಗದದಕ್ಕೆ ಹೋಗಿ ವಾಪಸ್ ಮನೆಗೆ ಬರುವ ವೇಳೆ ಈ ಘಟನೆ ನಡೆದಿದೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…