ಕತ್ತಿಹೊಸಹಳ್ಳಿ ಬಳಿ ಕಾರು ಪಲ್ಟಿ ಪ್ರಕರಣ: ಕಾರು ಅಪಘಾತದ ಭಯಾನಕ ದೃಶ್ಯ ಹೆದ್ದಾರಿ ಸಿಸಿ ಕ್ಯಾಮರಾದಲ್ಲಿ ಸೆರೆ

ತಾಲೂಕಿನ ಕತ್ತಿಹೊಸಹಳ್ಳಿ ಬಳಿ ಹಾದುಹೋಗಿರುವ ದಾಬಸ್ ಪೇಟೆ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿರುವ ಘಟನೆ ಫೆ.24ರ ಮುಂಜಾನೆ‌ ಸುಮಾರು 5:30ರ ವೇಳೆಯಲ್ಲಿ ನಡೆದಿತ್ತು. ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದವು, ಗಾಯಾಳುಗಳನ್ನು ಕೂಡಲೇ‌ ಆಸ್ಪತ್ರೆಗೆ ರವಾನಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಓರ್ವ ಅಸುನೀಗಿದ್ದು, ಮತ್ತಿಬ್ಬರಿಗೆ ಚಿಕಿತ್ಸೆ ಮುಂದುವರಿದಿತ್ತು.

ಕಾರು ಅಪಘಾತದ ಭೀಕರ ದೃಶ್ಯ ಹೆದ್ದಾರಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.‌ ಅತಿವೇಗವಾಗಿ ಬಂದ ಕಾರು ಡಿವೈಡರ್ ಮೇಲೆ ಹತ್ತಿ ಸಿನಿಮೀಯ ರೀತಿಯಲ್ಲಿ ಮೂರ್ನಾಲ್ಕು ಬಾರಿ ಪಲ್ಟಿ ಹೊಡೆದಿದೆ. ಪಲ್ಟಿ ಹೊಡೆಯುವಾಗಲೇ ಕಾರಿನಲ್ಲಿದ್ದ ಮೂರು ಜನ ಮೇಲಕ್ಕೆ ಹಾರಿ ರಸ್ತೆಗೆ ಬೀಳುತ್ತಾರೆ.

ಪಲ್ಟಿ ಹಿನ್ನೆಲೆ ಕಾರು ಸಂಪೂರ್ಣ ಜಖಂಗೊಂಡಿದೆ. ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿತ್ತು.‌ ಐವರಲ್ಲಿ ವಿಜಯಪುರ ಮೂಲದ 20ವರ್ಷದ ಮಹಮದ್ ಯೂನಿಸ್ ಎಂಬ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರ ಮೂಲದ ಐವರು ಸ್ನೇಹಿತ ಮದುವೆ ಗದದಕ್ಕೆ ಹೋಗಿ ವಾಪಸ್ ಮನೆಗೆ ಬರುವ ವೇಳೆ ಈ ಘಟನೆ ನಡೆದಿದೆ.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

13 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 day ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

1 day ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago