ಗುಜರಾತಿ ವ್ಯಾಪಾರಿ ದಕ್ಷಿಣ ಭಾರತೀಯರಿಗೆ ಕತ್ತೆ ಹಾಲನ್ನು ಮಾರಾಟ ಮಾಡುವ ಮೂಲಕ ತಿಂಗಳಿಗೆ ಲಕ್ಷಗಳನ್ನು ಗಳಿಸುತ್ತಾನೆ ಎಂದು ತಿಳಿದುಬಂದಿದೆ.
ಎಂಟು ತಿಂಗಳ ಹಿಂದೆ ಗುಜರಾತ್ನ ಧೀರೇನ್ ಸೋಲಂಕಿ ಅವರು 20 ಕತ್ತೆಗಳೊಂದಿಗೆ ತಮ್ಮ ಕತ್ತೆ ಹಾಲಿನ ವ್ಯಾಪಾರವನ್ನು ಪ್ರಾರಂಭಿಸಿದರು, ಬಂಡವಾಳ ವೆಚ್ಚದಲ್ಲಿ 22 ಲಕ್ಷ ಹೂಡಿಕೆ ಮಾಡಿದರು. ಈಗ ಅವರು ತಿಂಗಳಿಗೆ 2 ರಿಂದ 3 ಲಕ್ಷ ಗಳಿಸುತ್ತಾರೆ. ದಕ್ಷಿಣದ ರಾಜ್ಯಗಳಲ್ಲಿ ಕತ್ತೆ ಹಾಲಿಗೆ ಸಾಕಷ್ಟು ಬೇಡಿಕೆ ಇದೆ ಎನ್ನುತ್ತಾರೆ ಅವರು. ಒಂದು ಲೀಟರ್ ಸುಮಾರು 5 ಸಾವಿರದಿಂದ 7 ಸಾವಿರದವರೆಗೆ ಮಾರಾಟವಾಗುತ್ತದೆ ಎಂಬ ಮಾಹಿತಿ ಒದಗಿಬಂದಿದೆ.
ಕತ್ತೆ ಹಾಲಿನ ವಿಶೇಷತೆ ಏನು? ಕತ್ತೆ ಹಾಲಿಗೆ ಏಕೆ ಇಷ್ಟೊಂದು ಬೇಡಿಕೆ?
ಇದು ರೋಗ ನಿರೋಧಕ ಶಕ್ತಿ, ದೇಹದ ಸೌಂದರ್ಯ ಹೆಚ್ಚಿಸುತ್ತದೆ. ಕ್ಯಾನ್ಸರ್, ಬೊಜ್ಜು, ಅಲರ್ಜಿಯಂಥ ಸಮಸ್ಯೆ ನಿವಾರಿಸುತ್ತದೆ ಎಂದು ನಂಬಲಾಗಿದೆ. ಜೊತೆಗೆ ಕತ್ತೆ ಹಾಲಿನ ಚೀಸ್, ಸೋಪ್, ಫೇಸ್ವಾಷ್, ಸ್ಕಿನ್ ಕ್ರೀಮ್ ಕೂಡಾ ತಯಾರಿಸಲಾಗುತ್ತದೆ.
ಈಜಿಪ್ಟಿನ ರಾಜಕುಮಾರಿ ಕ್ಲಿಯೋಪಾತ್ರಾ ತನ್ನ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು ಕತ್ತೆಯ ಹಾಲಿನಲ್ಲಿ ಸ್ನಾನ ಮಾಡುತ್ತಿದ್ದಳು ಎನ್ನಲಾಗಿದೆ. ನವಜಾತ ಶಿಶುಗಳಿಗೆ ಉತ್ತಮ ಔಷಧೀಯ ಸತ್ತ್ವ ಕತ್ತೆಯ ಹಾಲಿನಲ್ಲಿದೆಯೆಂಬುದು ಬಹುತೇಕರ ನಂಬಿಕೆ ಇದೆ.
ಕತ್ತೆಯ ಹಾಲು ತಾಯಿಯ ಹಾಲಿಗೆ ಸಮಾನವಾದುದಾದರೂ, ಅದರಲ್ಲಿ ಪ್ರೋಟೀನ್ ಹಾಗೂ ಕೊಬ್ಬಿನಾಂಶ ಕಡಿಮೆಯಿದ್ದು, ಲ್ಯಾಕ್ಟೋಸ್ನ ಅಂಶ ಹೆಚ್ಚಿದೆ ಎನ್ನಲಾಗಿದೆ. ಕತ್ತೆಯ ಹಾಲು ಅಸ್ತಮಾದಿಂದ ಬಳಲುವ ನವಜಾತ ಶಿಶುಗಳಿಗೆ ಅತ್ಯುತ್ತಮ ಔಷಧಿ, ಕ್ಷಯ ಹಾಗೂ ಗಂಟಲು ಬೇನೆಗಳನ್ನು ನಿವಾರಿಸುತ್ತದೆಂದು ಹೇಳಲಾಗುತ್ತಿದೆ.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…