ಗುಜರಾತಿ ವ್ಯಾಪಾರಿ ದಕ್ಷಿಣ ಭಾರತೀಯರಿಗೆ ಕತ್ತೆ ಹಾಲನ್ನು ಮಾರಾಟ ಮಾಡುವ ಮೂಲಕ ತಿಂಗಳಿಗೆ ಲಕ್ಷಗಳನ್ನು ಗಳಿಸುತ್ತಾನೆ ಎಂದು ತಿಳಿದುಬಂದಿದೆ.
ಎಂಟು ತಿಂಗಳ ಹಿಂದೆ ಗುಜರಾತ್ನ ಧೀರೇನ್ ಸೋಲಂಕಿ ಅವರು 20 ಕತ್ತೆಗಳೊಂದಿಗೆ ತಮ್ಮ ಕತ್ತೆ ಹಾಲಿನ ವ್ಯಾಪಾರವನ್ನು ಪ್ರಾರಂಭಿಸಿದರು, ಬಂಡವಾಳ ವೆಚ್ಚದಲ್ಲಿ 22 ಲಕ್ಷ ಹೂಡಿಕೆ ಮಾಡಿದರು. ಈಗ ಅವರು ತಿಂಗಳಿಗೆ 2 ರಿಂದ 3 ಲಕ್ಷ ಗಳಿಸುತ್ತಾರೆ. ದಕ್ಷಿಣದ ರಾಜ್ಯಗಳಲ್ಲಿ ಕತ್ತೆ ಹಾಲಿಗೆ ಸಾಕಷ್ಟು ಬೇಡಿಕೆ ಇದೆ ಎನ್ನುತ್ತಾರೆ ಅವರು. ಒಂದು ಲೀಟರ್ ಸುಮಾರು 5 ಸಾವಿರದಿಂದ 7 ಸಾವಿರದವರೆಗೆ ಮಾರಾಟವಾಗುತ್ತದೆ ಎಂಬ ಮಾಹಿತಿ ಒದಗಿಬಂದಿದೆ.
ಕತ್ತೆ ಹಾಲಿನ ವಿಶೇಷತೆ ಏನು? ಕತ್ತೆ ಹಾಲಿಗೆ ಏಕೆ ಇಷ್ಟೊಂದು ಬೇಡಿಕೆ?
ಇದು ರೋಗ ನಿರೋಧಕ ಶಕ್ತಿ, ದೇಹದ ಸೌಂದರ್ಯ ಹೆಚ್ಚಿಸುತ್ತದೆ. ಕ್ಯಾನ್ಸರ್, ಬೊಜ್ಜು, ಅಲರ್ಜಿಯಂಥ ಸಮಸ್ಯೆ ನಿವಾರಿಸುತ್ತದೆ ಎಂದು ನಂಬಲಾಗಿದೆ. ಜೊತೆಗೆ ಕತ್ತೆ ಹಾಲಿನ ಚೀಸ್, ಸೋಪ್, ಫೇಸ್ವಾಷ್, ಸ್ಕಿನ್ ಕ್ರೀಮ್ ಕೂಡಾ ತಯಾರಿಸಲಾಗುತ್ತದೆ.
ಈಜಿಪ್ಟಿನ ರಾಜಕುಮಾರಿ ಕ್ಲಿಯೋಪಾತ್ರಾ ತನ್ನ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು ಕತ್ತೆಯ ಹಾಲಿನಲ್ಲಿ ಸ್ನಾನ ಮಾಡುತ್ತಿದ್ದಳು ಎನ್ನಲಾಗಿದೆ. ನವಜಾತ ಶಿಶುಗಳಿಗೆ ಉತ್ತಮ ಔಷಧೀಯ ಸತ್ತ್ವ ಕತ್ತೆಯ ಹಾಲಿನಲ್ಲಿದೆಯೆಂಬುದು ಬಹುತೇಕರ ನಂಬಿಕೆ ಇದೆ.
ಕತ್ತೆಯ ಹಾಲು ತಾಯಿಯ ಹಾಲಿಗೆ ಸಮಾನವಾದುದಾದರೂ, ಅದರಲ್ಲಿ ಪ್ರೋಟೀನ್ ಹಾಗೂ ಕೊಬ್ಬಿನಾಂಶ ಕಡಿಮೆಯಿದ್ದು, ಲ್ಯಾಕ್ಟೋಸ್ನ ಅಂಶ ಹೆಚ್ಚಿದೆ ಎನ್ನಲಾಗಿದೆ. ಕತ್ತೆಯ ಹಾಲು ಅಸ್ತಮಾದಿಂದ ಬಳಲುವ ನವಜಾತ ಶಿಶುಗಳಿಗೆ ಅತ್ಯುತ್ತಮ ಔಷಧಿ, ಕ್ಷಯ ಹಾಗೂ ಗಂಟಲು ಬೇನೆಗಳನ್ನು ನಿವಾರಿಸುತ್ತದೆಂದು ಹೇಳಲಾಗುತ್ತಿದೆ.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…