ಗುಜರಾತಿ ವ್ಯಾಪಾರಿ ದಕ್ಷಿಣ ಭಾರತೀಯರಿಗೆ ಕತ್ತೆ ಹಾಲನ್ನು ಮಾರಾಟ ಮಾಡುವ ಮೂಲಕ ತಿಂಗಳಿಗೆ ಲಕ್ಷಗಳನ್ನು ಗಳಿಸುತ್ತಾನೆ ಎಂದು ತಿಳಿದುಬಂದಿದೆ.
ಎಂಟು ತಿಂಗಳ ಹಿಂದೆ ಗುಜರಾತ್ನ ಧೀರೇನ್ ಸೋಲಂಕಿ ಅವರು 20 ಕತ್ತೆಗಳೊಂದಿಗೆ ತಮ್ಮ ಕತ್ತೆ ಹಾಲಿನ ವ್ಯಾಪಾರವನ್ನು ಪ್ರಾರಂಭಿಸಿದರು, ಬಂಡವಾಳ ವೆಚ್ಚದಲ್ಲಿ 22 ಲಕ್ಷ ಹೂಡಿಕೆ ಮಾಡಿದರು. ಈಗ ಅವರು ತಿಂಗಳಿಗೆ 2 ರಿಂದ 3 ಲಕ್ಷ ಗಳಿಸುತ್ತಾರೆ. ದಕ್ಷಿಣದ ರಾಜ್ಯಗಳಲ್ಲಿ ಕತ್ತೆ ಹಾಲಿಗೆ ಸಾಕಷ್ಟು ಬೇಡಿಕೆ ಇದೆ ಎನ್ನುತ್ತಾರೆ ಅವರು. ಒಂದು ಲೀಟರ್ ಸುಮಾರು 5 ಸಾವಿರದಿಂದ 7 ಸಾವಿರದವರೆಗೆ ಮಾರಾಟವಾಗುತ್ತದೆ ಎಂಬ ಮಾಹಿತಿ ಒದಗಿಬಂದಿದೆ.
ಕತ್ತೆ ಹಾಲಿನ ವಿಶೇಷತೆ ಏನು? ಕತ್ತೆ ಹಾಲಿಗೆ ಏಕೆ ಇಷ್ಟೊಂದು ಬೇಡಿಕೆ?
ಇದು ರೋಗ ನಿರೋಧಕ ಶಕ್ತಿ, ದೇಹದ ಸೌಂದರ್ಯ ಹೆಚ್ಚಿಸುತ್ತದೆ. ಕ್ಯಾನ್ಸರ್, ಬೊಜ್ಜು, ಅಲರ್ಜಿಯಂಥ ಸಮಸ್ಯೆ ನಿವಾರಿಸುತ್ತದೆ ಎಂದು ನಂಬಲಾಗಿದೆ. ಜೊತೆಗೆ ಕತ್ತೆ ಹಾಲಿನ ಚೀಸ್, ಸೋಪ್, ಫೇಸ್ವಾಷ್, ಸ್ಕಿನ್ ಕ್ರೀಮ್ ಕೂಡಾ ತಯಾರಿಸಲಾಗುತ್ತದೆ.
ಈಜಿಪ್ಟಿನ ರಾಜಕುಮಾರಿ ಕ್ಲಿಯೋಪಾತ್ರಾ ತನ್ನ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು ಕತ್ತೆಯ ಹಾಲಿನಲ್ಲಿ ಸ್ನಾನ ಮಾಡುತ್ತಿದ್ದಳು ಎನ್ನಲಾಗಿದೆ. ನವಜಾತ ಶಿಶುಗಳಿಗೆ ಉತ್ತಮ ಔಷಧೀಯ ಸತ್ತ್ವ ಕತ್ತೆಯ ಹಾಲಿನಲ್ಲಿದೆಯೆಂಬುದು ಬಹುತೇಕರ ನಂಬಿಕೆ ಇದೆ.
ಕತ್ತೆಯ ಹಾಲು ತಾಯಿಯ ಹಾಲಿಗೆ ಸಮಾನವಾದುದಾದರೂ, ಅದರಲ್ಲಿ ಪ್ರೋಟೀನ್ ಹಾಗೂ ಕೊಬ್ಬಿನಾಂಶ ಕಡಿಮೆಯಿದ್ದು, ಲ್ಯಾಕ್ಟೋಸ್ನ ಅಂಶ ಹೆಚ್ಚಿದೆ ಎನ್ನಲಾಗಿದೆ. ಕತ್ತೆಯ ಹಾಲು ಅಸ್ತಮಾದಿಂದ ಬಳಲುವ ನವಜಾತ ಶಿಶುಗಳಿಗೆ ಅತ್ಯುತ್ತಮ ಔಷಧಿ, ಕ್ಷಯ ಹಾಗೂ ಗಂಟಲು ಬೇನೆಗಳನ್ನು ನಿವಾರಿಸುತ್ತದೆಂದು ಹೇಳಲಾಗುತ್ತಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…
ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…