ಗುಜರಾತಿ ವ್ಯಾಪಾರಿ ದಕ್ಷಿಣ ಭಾರತೀಯರಿಗೆ ಕತ್ತೆ ಹಾಲನ್ನು ಮಾರಾಟ ಮಾಡುವ ಮೂಲಕ ತಿಂಗಳಿಗೆ ಲಕ್ಷಗಳನ್ನು ಗಳಿಸುತ್ತಾನೆ ಎಂದು ತಿಳಿದುಬಂದಿದೆ.
ಎಂಟು ತಿಂಗಳ ಹಿಂದೆ ಗುಜರಾತ್ನ ಧೀರೇನ್ ಸೋಲಂಕಿ ಅವರು 20 ಕತ್ತೆಗಳೊಂದಿಗೆ ತಮ್ಮ ಕತ್ತೆ ಹಾಲಿನ ವ್ಯಾಪಾರವನ್ನು ಪ್ರಾರಂಭಿಸಿದರು, ಬಂಡವಾಳ ವೆಚ್ಚದಲ್ಲಿ 22 ಲಕ್ಷ ಹೂಡಿಕೆ ಮಾಡಿದರು. ಈಗ ಅವರು ತಿಂಗಳಿಗೆ 2 ರಿಂದ 3 ಲಕ್ಷ ಗಳಿಸುತ್ತಾರೆ. ದಕ್ಷಿಣದ ರಾಜ್ಯಗಳಲ್ಲಿ ಕತ್ತೆ ಹಾಲಿಗೆ ಸಾಕಷ್ಟು ಬೇಡಿಕೆ ಇದೆ ಎನ್ನುತ್ತಾರೆ ಅವರು. ಒಂದು ಲೀಟರ್ ಸುಮಾರು 5 ಸಾವಿರದಿಂದ 7 ಸಾವಿರದವರೆಗೆ ಮಾರಾಟವಾಗುತ್ತದೆ ಎಂಬ ಮಾಹಿತಿ ಒದಗಿಬಂದಿದೆ.
ಕತ್ತೆ ಹಾಲಿನ ವಿಶೇಷತೆ ಏನು? ಕತ್ತೆ ಹಾಲಿಗೆ ಏಕೆ ಇಷ್ಟೊಂದು ಬೇಡಿಕೆ?
ಇದು ರೋಗ ನಿರೋಧಕ ಶಕ್ತಿ, ದೇಹದ ಸೌಂದರ್ಯ ಹೆಚ್ಚಿಸುತ್ತದೆ. ಕ್ಯಾನ್ಸರ್, ಬೊಜ್ಜು, ಅಲರ್ಜಿಯಂಥ ಸಮಸ್ಯೆ ನಿವಾರಿಸುತ್ತದೆ ಎಂದು ನಂಬಲಾಗಿದೆ. ಜೊತೆಗೆ ಕತ್ತೆ ಹಾಲಿನ ಚೀಸ್, ಸೋಪ್, ಫೇಸ್ವಾಷ್, ಸ್ಕಿನ್ ಕ್ರೀಮ್ ಕೂಡಾ ತಯಾರಿಸಲಾಗುತ್ತದೆ.
ಈಜಿಪ್ಟಿನ ರಾಜಕುಮಾರಿ ಕ್ಲಿಯೋಪಾತ್ರಾ ತನ್ನ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು ಕತ್ತೆಯ ಹಾಲಿನಲ್ಲಿ ಸ್ನಾನ ಮಾಡುತ್ತಿದ್ದಳು ಎನ್ನಲಾಗಿದೆ. ನವಜಾತ ಶಿಶುಗಳಿಗೆ ಉತ್ತಮ ಔಷಧೀಯ ಸತ್ತ್ವ ಕತ್ತೆಯ ಹಾಲಿನಲ್ಲಿದೆಯೆಂಬುದು ಬಹುತೇಕರ ನಂಬಿಕೆ ಇದೆ.
ಕತ್ತೆಯ ಹಾಲು ತಾಯಿಯ ಹಾಲಿಗೆ ಸಮಾನವಾದುದಾದರೂ, ಅದರಲ್ಲಿ ಪ್ರೋಟೀನ್ ಹಾಗೂ ಕೊಬ್ಬಿನಾಂಶ ಕಡಿಮೆಯಿದ್ದು, ಲ್ಯಾಕ್ಟೋಸ್ನ ಅಂಶ ಹೆಚ್ಚಿದೆ ಎನ್ನಲಾಗಿದೆ. ಕತ್ತೆಯ ಹಾಲು ಅಸ್ತಮಾದಿಂದ ಬಳಲುವ ನವಜಾತ ಶಿಶುಗಳಿಗೆ ಅತ್ಯುತ್ತಮ ಔಷಧಿ, ಕ್ಷಯ ಹಾಗೂ ಗಂಟಲು ಬೇನೆಗಳನ್ನು ನಿವಾರಿಸುತ್ತದೆಂದು ಹೇಳಲಾಗುತ್ತಿದೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…