Categories: ಆರೋಗ್ಯ

ಕತ್ತೆ ಹಾಲು ನಿಜವಾಗಿಯೂ ಪ್ರಯೋಜನಕಾರಿಯೇ? ಇದು ಚಿಕಿತ್ಸಕ ಗುಣಗಳನ್ನು ಹೊಂದಿದೆಯೇ? ಇಲ್ಲಿದೆ ಮಾಹಿತಿ ಓದಿ..

ಗುಜರಾತಿ ವ್ಯಾಪಾರಿ ದಕ್ಷಿಣ ಭಾರತೀಯರಿಗೆ ಕತ್ತೆ ಹಾಲನ್ನು ಮಾರಾಟ ಮಾಡುವ ಮೂಲಕ ತಿಂಗಳಿಗೆ ಲಕ್ಷಗಳನ್ನು ಗಳಿಸುತ್ತಾನೆ ಎಂದು ತಿಳಿದುಬಂದಿದೆ.

ಎಂಟು ತಿಂಗಳ ಹಿಂದೆ ಗುಜರಾತ್‌ನ ಧೀರೇನ್ ಸೋಲಂಕಿ ಅವರು 20 ಕತ್ತೆಗಳೊಂದಿಗೆ ತಮ್ಮ ಕತ್ತೆ ಹಾಲಿನ ವ್ಯಾಪಾರವನ್ನು ಪ್ರಾರಂಭಿಸಿದರು, ಬಂಡವಾಳ ವೆಚ್ಚದಲ್ಲಿ 22 ಲಕ್ಷ ಹೂಡಿಕೆ ಮಾಡಿದರು. ಈಗ ಅವರು ತಿಂಗಳಿಗೆ 2 ರಿಂದ 3 ಲಕ್ಷ ಗಳಿಸುತ್ತಾರೆ. ದಕ್ಷಿಣದ ರಾಜ್ಯಗಳಲ್ಲಿ ಕತ್ತೆ ಹಾಲಿಗೆ ಸಾಕಷ್ಟು ಬೇಡಿಕೆ ಇದೆ ಎನ್ನುತ್ತಾರೆ ಅವರು. ಒಂದು ಲೀಟರ್ ಸುಮಾರು  5 ಸಾವಿರದಿಂದ 7 ಸಾವಿರದವರೆಗೆ ಮಾರಾಟವಾಗುತ್ತದೆ ಎಂಬ ಮಾಹಿತಿ ಒದಗಿಬಂದಿದೆ.

ಕತ್ತೆ ಹಾಲಿನ ವಿಶೇಷತೆ ಏನು? ಕತ್ತೆ ಹಾಲಿಗೆ ಏಕೆ ಇಷ್ಟೊಂದು ಬೇಡಿಕೆ?

ಇದು ರೋಗ ನಿರೋಧಕ ಶಕ್ತಿ, ದೇಹದ ಸೌಂದರ್ಯ ಹೆಚ್ಚಿಸುತ್ತದೆ. ಕ್ಯಾನ್ಸರ್‌, ಬೊಜ್ಜು, ಅಲರ್ಜಿಯಂಥ ಸಮಸ್ಯೆ ನಿವಾರಿಸುತ್ತದೆ ಎಂದು ನಂಬಲಾಗಿದೆ. ಜೊತೆಗೆ ಕತ್ತೆ ಹಾಲಿನ ಚೀಸ್‌, ಸೋಪ್‌, ಫೇಸ್‌ವಾಷ್‌, ಸ್ಕಿನ್‌ ಕ್ರೀಮ್‌ ಕೂಡಾ ತಯಾರಿಸಲಾಗುತ್ತದೆ.

ಈಜಿಪ್ಟಿನ ರಾಜಕುಮಾರಿ ಕ್ಲಿಯೋಪಾತ್ರಾ ತನ್ನ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು ಕತ್ತೆಯ ಹಾಲಿನಲ್ಲಿ ಸ್ನಾನ ಮಾಡುತ್ತಿದ್ದಳು ಎನ್ನಲಾಗಿದೆ. ನವಜಾತ ಶಿಶುಗಳಿಗೆ ಉತ್ತಮ ಔಷಧೀಯ ಸತ್ತ್ವ ಕತ್ತೆಯ ಹಾಲಿನಲ್ಲಿದೆಯೆಂಬುದು ಬಹುತೇಕರ ನಂಬಿಕೆ‌ ಇದೆ.

ಕತ್ತೆಯ ಹಾಲು ತಾಯಿಯ ಹಾಲಿಗೆ ಸಮಾನವಾದುದಾದರೂ, ಅದರಲ್ಲಿ ಪ್ರೋಟೀನ್ ಹಾಗೂ ಕೊಬ್ಬಿನಾಂಶ ಕಡಿಮೆಯಿದ್ದು, ಲ್ಯಾಕ್ಟೋಸ್‌ನ ಅಂಶ ಹೆಚ್ಚಿದೆ ಎನ್ನಲಾಗಿದೆ. ಕತ್ತೆಯ ಹಾಲು ಅಸ್ತಮಾದಿಂದ ಬಳಲುವ ನವಜಾತ ಶಿಶುಗಳಿಗೆ ಅತ್ಯುತ್ತಮ ಔಷಧಿ, ಕ್ಷಯ ಹಾಗೂ ಗಂಟಲು ಬೇನೆಗಳನ್ನು ನಿವಾರಿಸುತ್ತದೆಂದು ಹೇಳಲಾಗುತ್ತಿದೆ.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

8 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

9 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago