Categories: ಲೇಖನ

ಕದನ ವಿರಾಮ…., ಕೊನೆಗೆ ಗೆಲ್ಲುವುದು ಹಿಂಸೆಯಲ್ಲ ಅಹಿಂಸೆ

ಕದನ ವಿರಾಮ……

ಯುದ್ಧ ವಿರಾಮ ಘೋಷಣೆಯಾಗಿದೆ. ಸಾವಿರಾರು ಜನರ ಹತ್ಯೆಗಳ ನಂತರ,
ಅಪಾರ ಪ್ರಮಾಣದ ಭೂಪ್ರದೇಶ, ನೈಸರ್ಗಿಕ ಸಂಪನ್ಮೂಲಗಳು, ತೈಲ ಘಟಕಗಳು ಮತ್ತು ಪರಿಸರವನ್ನು ನಾಶ ಮಾಡಿದ ನಂತರ,
ಅತ್ಯಂತ ಉಪಯುಕ್ತ ಕಟ್ಟಡಗಳು, ಆಸ್ಪತ್ರೆ, ಶಾಲೆಗಳು ನಾಶವಾದ ನಂತರ,

ಈ ಕದನ ವಿರಾಮ
ಸತ್ತವರನ್ನು ಮರಳಿ ತರುವುದೇ‌ ?,
ಸತ್ತವರಿಗೆ ನ್ಯಾಯ ಕೊಡಿಸುವುದೇ ?
ಅಪಾರ ಪರಿಸರ ನಾಶಕ್ಕೆ ಹೊಣೆ ಯಾರು ?…..

ಅರ್ಥ ಮಾಡಿಕೊಳ್ಳಿ,
ಕೊನೆಗೂ ಗೆಲ್ಲುವುದು ಹಿಂಸೆಯಲ್ಲ ಅಹಿಂಸೆ,
ಕೊನೆಗೂ ಗೆಲ್ಲುವುದು ಸಂಧಾನವೇ ಹೊರತು ಸಂಘರ್ಷವಲ್ಲ,
ಕೊನೆಗೂ ಗೆಲ್ಲುವುದು ಪ್ರೀತಿಯೇ ಹೊರತು ದ್ವೇಷವಲ್ಲ….

ಸೇಡಿಗಿಂತ ಸಂಧಾನ ಅತ್ಯುತ್ತಮ,
ಸೇಡು ಶಾಪ, ಸಂಧಾನ ವರ….

ಕದನ ವಿರಾಮವೆಂಬ ಅಜ್ಞಾನದ ನಾಟಕ…..

ಸಾವಿರಾರು ಜನ ಸತ್ತು,
ನೂರಾರು ಮಕ್ಕಳು, ಮಹಿಳೆಯರು ಗಾಯಗೊಂಡು, ಅನೇಕರು ಅನಾಥರಾದ ನಂತರ ಅಮೇರಿಕಾ, ಇಸ್ರೇಲ್ ಮತ್ತು ಇರಾನ್ ನಡುವೆ ಹದಿನೈದು ದಿನಗಳ ಕದನ ವಿರಾಮ ಘೋಷಣೆಯಾಗಿದೆ. ಆ ನಂತರ ಯುದ್ಧ ಮುಂದುವರಿಯುತ್ತದೆ ಅಥವಾ ಇನ್ನೊಂದಿಷ್ಟು ದಿನ ಕದನ ವಿರಾಮ ಜಾರಿಯಲ್ಲಿರಬಹುದು.

ಇದೇ ಕೆಲಸವನ್ನು ಮೊದಲೇ ಮಾಡಿದ್ದರೆ ಸಾವಿರಾರು ಜನರ ಜೀವ ಉಳಿಯುತ್ತಿತ್ತಲ್ಲವೇ. ಮೂರೂ ದೇಶಗಳು ಇದರಿಂದ ಮಾಡಿದ ಸಾಧನೆಯಾದರು ಏನು. ಯುದ್ಧದಿಂದ ಎಲ್ಲಾ ಕಡೆ ಸಾವು ನೋವುಗಳೇ ಎಂಬುದು ತಿಳಿದಿಲ್ಲವೇ. ಮತ್ತೆ ಯುದ್ಧ ಮಾಡಿ, ಮುಂದೆ ಯಾವುದೋ ಒಂದು ದಿನ, ಯಾವುದೋ ಹಂತದಲ್ಲಿ ಒಪ್ಪಂದ ಮಾಡಿಕೊಂಡು ಯುದ್ಧ ನಿಲ್ಲುವುದು ಖಚಿತ. ಆದರೆ ಅದು ಮಾಡಬಹುದಾದ ಘೋರ ದುರಂತವನ್ನು ಮರಳಿ ಸರಿಪಡಿಸುವುದು ಸಾಧ್ಯವೇ…..

ಇದೇ ಪ್ರಶ್ನೆ ರಷ್ಯಾ, ಉಕ್ರೇನ್ ಯುದ್ಧದ ಬಗ್ಗೆಯೂ ಏಳುತ್ತದೆ. ನಾಶದ ನಂತರ ಶರಣಾಗುವುದಕ್ಕಿಂತ ಮೊದಲೇ ಇದನ್ನು ಗ್ರಹಿಸಿ ಸ್ವಲ್ಪ ಹೊಂದಾಣಿಕೆಯ ಒಪ್ಪಂದ ಮಾಡಿಕೊಳ್ಳಬಹುದಲ್ಲವೇ……

ಅನೇಕ ಸೈನಿಕರು, ಅಮಾಯಕರು ಯುದ್ಧದ ದಾಳಿಗೆ ಬಲಿಯಾಗಿರುವ ಈ ಸಂದರ್ಭದಲ್ಲಿ ಮನಸ್ಸು ಮತ್ತೆ ಮತ್ತೆ ಹುತಾತ್ಮ ಭಾವನೆಗಿಂತ ಜೀವ ಉಳಿಸದೆ ಕೆಲವು ರಾಜಕಾರಣಿಗಳು ಮತ್ತು ಧರ್ಮದವರು ತಮ್ಮ ತೆವಲಿಗಾಗಿ ಅಮಾಯಕ ಜನರನ್ನು ಬಲಿಕೊಡುತ್ತಿರುವ ವ್ಯವಸ್ಥೆಯ ಬಗ್ಗೆ ಜಿಗುಪ್ಸೆ ಮೂಡುತ್ತದೆ…..

ಹಿಂಸೆಯ ಫಲಿತಾಂಶಗಳು ಮತ್ತೊಂದು ಹಿಂಸೆಗೆ ಬಿತ್ತುವ ಬೀಜ ಎಂದು ಖಚಿತವಾಗಿರುವಾಗಲೂ ಮತ್ತೆ ಮತ್ತೆ ಹಿಂಸೆಯಿಂದಲೇ ಪರಿಹಾರ ಹುಡುಕುವ ಹುಚ್ಚು ಮನಸ್ಸಿನ ಮನುಷ್ಯರ ಬಗ್ಗೆಯೇ ಕೋಪ ಬರುತ್ತದೆ. ಬದುಕಲು ಬಾರದ ಮನುಷ್ಯರು ಎಂದೇ ಕರೆಯಬೇಕಾಗುತ್ತದೆ. ರಾಜಕಾರಣಿಗಳೇನೋ ಅಧಿಕಾರಕ್ಕಾಗಿ ಹೋರಾಟ ಮಾಡುತ್ತಾರೆ. ಅವರೇನು ಯುದ್ಧ ಭೂಮಿಯಲ್ಲಿ ಹೋರಾಡುವುದಿಲ್ಲ. ಇವರ ರಕ್ಷಣೆಗಾಗಿ ಸೈನಿಕರು ಮತ್ತು ಸಾಮಾನ್ಯ ಜನರು ಜೀವ ತ್ಯಾಗ ಮಾಡಬೇಕು. ಇದು ಯಾವ ನ್ಯಾಯ……….

ಸಂಧಾನ ಸೂತ್ರಗಳು ಯಾವಾಗಲೂ ಇದ್ದೇ ಇರುತ್ತದೆ. ‌ಆದರೆ ಅದನ್ನು ಗ್ರಹಿಸುವ ಮತ್ತು ಅನುಷ್ಠಾನ ಗೊಳಿಸುವ ವಿಶಾಲ ಮನೋಭಾವ ಮತ್ತು ಒಳ್ಳೆಯತನ ಮಾತ್ರ ಕಾಣೆಯಾಗಿದೆ. ಅದರ ಪರಿಣಾಮವೇ ಬಹುತೇಕ ಈ ಜಗತ್ತಿನಲ್ಲಿ ಶಾಂತಿಗಿಂತ ಹಿಂಸೆಯ ಪ್ರಮಾಣ ಜಾಸ್ತಿಯಾಗಿದೆ……

ಹೊಡೆತ ಬೀಳುವವರೆಗೆ ತಾನು ಸೂಪರ್ ಮ್ಯಾನ್ ಎಂಬಂತೆ ವರ್ತಿಸುವ ಮನುಷ್ಯರು ಮತ್ತು ಅವರ ನಿಯಂತ್ರಣದ ದೇಶಗಳು ಒಮ್ಮೆ ಬಲವಾದ ಹೊಡೆತ ಬಿದ್ದರೆ ನರಳುತ್ತಾ ಶರಣಾಗುತ್ತಾರೆ. ಅದೂ ಸಹ ತಾತ್ಕಾಲಿಕ. ಒಳಗೊಳಗೆ ದ್ವೇಷ ಅಸೂಯೆ ಹೊಗೆಯಾಡುತ್ತಲೇ ಇರುತ್ತದೆ. ಮತ್ತೆ ಕೆಲವು ಸಮಯದ ನಂತರ ಹಿಂಸೆಗೆ ಇಳಿಯುತ್ತಾರೆ. ಇಡೀ ಮಾನವ ಇತಿಹಾಸ ಇಂತಹ ಮನಸ್ಥಿತಿಯಿಂದಲೇ ತುಂಬಿದೆ…..

ಶಾಂತಿ ಎಂಬುದು ವಿನಾಶದ ಸಿದ್ದತೆ ಎಂಬಂತಾಗಿದೆ. ಬದುಕು ಎಂಬುದು ಸಾವಿಗೆ ಸಿದ್ದತೆ ಎಂಬಂತೆ. ಒಟ್ಟಿನಲ್ಲಿ ಇದೇ ವಿಶ್ವದ ಸ್ವಾಭಾವಿಕ ಗುಣವಾಗಿರಬಹುದು. ಅದನ್ನು ಅನುಭವಿಸುತ್ತಲೇ ಬದುಕುವುದು ಅನಿವಾರ್ಯವೇ ಅಥವಾ ಅಹಿಂಸೆಯ ಪರ್ಯಾಯ ಮಾರ್ಗಗಳ ಹುಡುಕಾಟ ಸಾಧ್ಯವೇ…..

ಏಕೆಂದರೆ, ದಿನ ನಿತ್ಯ ಈ ರೀತಿ ತಮ್ಮ ದೇಶಗಳಿಗಾಗಿ ಪ್ರಾಣತ್ಯಾಗ ಮಾಡುತ್ತಿರುವ ಅನೇಕ ಯುವಕರ ಜೀವಗಳನ್ನು ಉಳಿಸಲು ಸಾಧ್ಯವಾಗದ ಈ ಜಗತ್ತಿನ ಎಲ್ಲಾ ದೇವರು, ಧರ್ಮಗಳು, ಸರ್ಕಾರಗಳಿಗೆ ದಯವಿಟ್ಟು ಮನುಷ್ಯ ಜೀವಿಗಳ ಬದುಕುವ ಹಕ್ಕು ಮತ್ತು ಸ್ವಾತಂತ್ರ್ಯವನ್ನು ಕಾಪಾಡಿ, ಮನುಷ್ಯ ಪ್ರಾಣಿಯ ಘನತೆಯನ್ನು ರಕ್ಷಿಸಿ, ಉಳಿಸಿ ಎಂದು ಮನವಿ ಮಾಡಿಕೊಳ್ಳುತ್ತಾ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago