ಕದ್ದ ಚಿನ್ನ ಖರೀದಿ ಪ್ರಕರಣ: ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅಟ್ಟಿಕಾ ಬಾಬು ಅಲಿಯಾಸ್‌ ಬೊಮ್ಮನಹಳ್ಳಿ ಬಾಬು ಅವರನ್ನ ವಶಕ್ಕೆ ಪಡೆದ ಪೊಲೀಸರು

ಕದ್ದ ಚಿನ್ನ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅಟ್ಟಿಕಾ ಬಾಬು ಅಲಿಯಾಸ್‌ ಬೊಮ್ಮನಹಳ್ಳಿ ಬಾಬು ಅವರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಇಬ್ಬರು ಕಳ್ಳರಿಂದ ಕಳ್ಳತನ ಮಾಡಿದ ಚಿನ್ನ ಖರೀದಿ ಆರೋಪದಲ್ಲಿ ಬೊಮ್ಮನಹಳ್ಳಿ ಬಾಬು ಸೇರಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಸದ್ಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಮಾಡಲಾಗುತ್ತಿದೆ.

ಕಳೆದ ಎರಡು ತಿಂಗಳ ಹಿಂದೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದ ಸರಗಳ್ಳತನಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ಪೊಲೀಸರು ಇಂದು ಬಾಬು ಅವರನ್ನು ಬಂಧಿಸಿದ್ದಾರೆ‌.
ಇಂದು ಮುಂಜಾನೆ ತುಮಕೂರು ಜಿಲ್ಲಾ ಕಾರಾಗೃಹ ದಿಂದ ಜಾಮೀನಿನ ಮೇಲೆ ಹೊರಬಂದ ಬೊಮ್ಮನಹಳ್ಳಿ ಬಾಬು ಅವರನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ ಕರೆತಂದಿದ್ದಾರೆ.

ಅರೆಸ್ಟ್ ಮಾಡಿ ಪೊಲೀಸ್ ಠಾಣೆಯಿಂದ ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದುಕೊಂಡ ಹೊಗಲಾಗಿದೆ.

2016 ರಲ್ಲಿ ನಾನು ಅಟಿಕಾ ಗೋಲ್ಡ್ ಕಂಪನಿಗೆ ರಾಜೀನಾಮೆ ಮಾಡಿದ್ದೇನೆ. ನ್ಯಾಯಾಲಯ ನಿನ್ನೆಯೂ ಕೂಡ ಒಂದು ಕೇಸ್ ನಲ್ಲಿ ಅಟಿಕಾ ಗೊಲ್ಡ್ ಗೆ ಬಾಬು ನ ಭಾಗಿ ಮಾಡಬೇಡಿ ಎಂದು ಆದೇಶ ಮಾಡಿದೆ. ಆದರೂ, ವಿನಾಕಾರಣ ಪೊಲೀಸರು ನನ್ನನ್ನ ಟಾರ್ಗೆಟ್ ಮಾಡಿ ಸುಳ್ಳು ಕೇಸ್ ದಾಖಲು ಮಾಡ್ತಿದ್ದಾರೆ ಪೊಲೀಸ್ ಠಾಣೆ ಮುಂದೆ ಅಟಿಕಾ ಗೊಲ್ಡ್ ಕಂಪನಿ ಮಾಲೀಕ ಬೊಮ್ಮನಹಳ್ಳಿ ಬಾಬು ಹೇಳಿಕೆ ನೀಡಿದ್ದಾರೆ.

ಕೆಲ ಕೇಸ್ ಗಳಲ್ಲಿ ನಾನು ತಡೆಯಾಜ್ಞೆ ತಂದಿದ್ದೇನೆ. ಆದರೂ, ನನ್ನನ್ನು ವಿನಾಕಾರಣ ಕೇಸ್ ಗಳಲ್ಲಿ ಸಿಕ್ಕಿಸೋ ಸಂಚು ನಡೆಯುತ್ತಿದೆ. ಇದು ರಾಜಕೀಯ ಪಿತೂರಿ ಎಂದು ಆರೋಪಿಸಿದ್ದಾರೆ.

Ramesh Babu

Journalist

Recent Posts

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

9 minutes ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

6 hours ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

9 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

10 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

21 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

1 day ago