ಕದ್ದ ಚಿನ್ನ ಖರೀದಿ ಪ್ರಕರಣ: ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅಟ್ಟಿಕಾ ಬಾಬು ಅಲಿಯಾಸ್‌ ಬೊಮ್ಮನಹಳ್ಳಿ ಬಾಬು ಅವರನ್ನ ವಶಕ್ಕೆ ಪಡೆದ ಪೊಲೀಸರು

ಕದ್ದ ಚಿನ್ನ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅಟ್ಟಿಕಾ ಬಾಬು ಅಲಿಯಾಸ್‌ ಬೊಮ್ಮನಹಳ್ಳಿ ಬಾಬು ಅವರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಇಬ್ಬರು ಕಳ್ಳರಿಂದ ಕಳ್ಳತನ ಮಾಡಿದ ಚಿನ್ನ ಖರೀದಿ ಆರೋಪದಲ್ಲಿ ಬೊಮ್ಮನಹಳ್ಳಿ ಬಾಬು ಸೇರಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಸದ್ಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಮಾಡಲಾಗುತ್ತಿದೆ.

ಕಳೆದ ಎರಡು ತಿಂಗಳ ಹಿಂದೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದ ಸರಗಳ್ಳತನಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ಪೊಲೀಸರು ಇಂದು ಬಾಬು ಅವರನ್ನು ಬಂಧಿಸಿದ್ದಾರೆ‌.
ಇಂದು ಮುಂಜಾನೆ ತುಮಕೂರು ಜಿಲ್ಲಾ ಕಾರಾಗೃಹ ದಿಂದ ಜಾಮೀನಿನ ಮೇಲೆ ಹೊರಬಂದ ಬೊಮ್ಮನಹಳ್ಳಿ ಬಾಬು ಅವರನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ ಕರೆತಂದಿದ್ದಾರೆ.

ಅರೆಸ್ಟ್ ಮಾಡಿ ಪೊಲೀಸ್ ಠಾಣೆಯಿಂದ ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದುಕೊಂಡ ಹೊಗಲಾಗಿದೆ.

2016 ರಲ್ಲಿ ನಾನು ಅಟಿಕಾ ಗೋಲ್ಡ್ ಕಂಪನಿಗೆ ರಾಜೀನಾಮೆ ಮಾಡಿದ್ದೇನೆ. ನ್ಯಾಯಾಲಯ ನಿನ್ನೆಯೂ ಕೂಡ ಒಂದು ಕೇಸ್ ನಲ್ಲಿ ಅಟಿಕಾ ಗೊಲ್ಡ್ ಗೆ ಬಾಬು ನ ಭಾಗಿ ಮಾಡಬೇಡಿ ಎಂದು ಆದೇಶ ಮಾಡಿದೆ. ಆದರೂ, ವಿನಾಕಾರಣ ಪೊಲೀಸರು ನನ್ನನ್ನ ಟಾರ್ಗೆಟ್ ಮಾಡಿ ಸುಳ್ಳು ಕೇಸ್ ದಾಖಲು ಮಾಡ್ತಿದ್ದಾರೆ ಪೊಲೀಸ್ ಠಾಣೆ ಮುಂದೆ ಅಟಿಕಾ ಗೊಲ್ಡ್ ಕಂಪನಿ ಮಾಲೀಕ ಬೊಮ್ಮನಹಳ್ಳಿ ಬಾಬು ಹೇಳಿಕೆ ನೀಡಿದ್ದಾರೆ.

ಕೆಲ ಕೇಸ್ ಗಳಲ್ಲಿ ನಾನು ತಡೆಯಾಜ್ಞೆ ತಂದಿದ್ದೇನೆ. ಆದರೂ, ನನ್ನನ್ನು ವಿನಾಕಾರಣ ಕೇಸ್ ಗಳಲ್ಲಿ ಸಿಕ್ಕಿಸೋ ಸಂಚು ನಡೆಯುತ್ತಿದೆ. ಇದು ರಾಜಕೀಯ ಪಿತೂರಿ ಎಂದು ಆರೋಪಿಸಿದ್ದಾರೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

12 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

12 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago