ಶ್ರೀ ಮುತ್ಯಾಲಮ್ಮ ಸೇವಾ ಸಮಿತಿ ಮತ್ತು ನವಜ್ಯೋತಿ ಕಲಾ ಸಂಘದ ವತಿಯಿಂದ ದೊಡ್ಡಬಳ್ಳಾಪುರ ನಗರದ ಕನಕದಾಸ ರಸ್ತೆಯ ಕನಕದಾಸನಗರದಲ್ಲಿ ಪಂಚ ಮಾತೆಯರ ಉತ್ಸವ ವಿಜೃಂಭಣೆಯಿಂದ ಜರುಗಿತು.
ಮುತ್ಯಾಲಮ್ಮ, ದೊಡ್ಡಮ್ಮದೇವಿ, ಲಕ್ಷ್ಮಿದೇವಿ, ದೇವನಹಳ್ಳಿ ಶ್ರೀ ಚೌಡೇಶ್ವರಿ ದೇವಿ, ಕಲ್ಲುಪೇಟೆ ಮಾರಮ್ಮದೇವಿಯವರ ಉತ್ಸವ ಮೂರ್ತಿಗಳಿಗೆ ವಿವಿಧ ಪುಷ್ಪಗಳ ಹೂವಿನ ಅಲಂಕಾರ, ದೀಪಾಲಂಕಾರ, ವಿವಿಧ ಹೋಮ, ಪೂಜೆ ಪುನಸ್ಕಾರ ಅದ್ಧೂರಿಯಾಗಿ ನೆರವೇರಿಸಲಾಯಿತು.
ತಾಲೂಕಿನ ವಿವಿಧ ಭಾಗಗಳಿಂದ ಬಂದಿದ್ದ ಭಕ್ತರು ಪಂಚ ಮಾತೆಯರ ದರ್ಶನ ಪಡೆದು ಪುನೀತರಾದರು. ನೆರೆದಿದ್ದ ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಗಿತ್ತು.
ಈ ವೇಳೆ ವಿವಿಧ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜ್ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.
ಈ ವೇಳೆ ಉದಯ್, ಶ್ರೇಯಸ್, ಭರತ್ ಸೇರಿದಂತೆ ಇತರರು ಉಪಸ್ಥಿತರಿದ್ದರು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…